Bengaluru News: ಬೈಕ್​ ಕಳ್ಳತನ ಮಾಡ್ತಿದ್ದ ಐವರ ಬಂಧನ; 20 ಲಕ್ಷ ರೂ. ಮೌಲ್ಯದ 22 ಬೈಕ್, ಒಂದು ಆಟೋ ಜಪ್ತಿ

ಬೈಕ್​ ಕಳ್ಳತನ ಮಾಡುತ್ತಿದ್ದ ಐವರು ಆರೋಪಿಗಳನ್ನ ಕಾಟನ್​ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಗರದ ಕಾಟನ್ ಪೇಟೆ, ಚಂದ್ರಾಲೇಔಟ್, ಜ್ಞಾನ ಭಾರತಿ, ಅಮೃತಹಳ್ಳಿ, ಹಲಸೂರು, ಎಸ್ ಆರ್ ನಗರ ಸೇರಿದಂತೆ ಹಲವು ಠಾಣಾ ವ್ಯಾಪ್ತಿಯಲ್ಲಿ ಕೈ ಚಳಕ ತೋರಿಸಿದ್ದ ಈ ಗ್ಯಾಂಗ್​ನ ಐವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದು,20ಲಕ್ಷ ಮೌಲ್ಯದ ಬೈಕ್​ನ್ನ ವಶಕ್ಕೆ ಪಡೆದಿದ್ದಾರೆ.

Bengaluru News: ಬೈಕ್​ ಕಳ್ಳತನ ಮಾಡ್ತಿದ್ದ ಐವರ ಬಂಧನ; 20 ಲಕ್ಷ ರೂ. ಮೌಲ್ಯದ 22 ಬೈಕ್, ಒಂದು ಆಟೋ ಜಪ್ತಿ
ಪ್ರಾತಿನಿಧಿಕ ಚಿತ್ರ
Follow us
|

Updated on:Jun 20, 2023 | 2:26 PM

ಬೆಂಗಳೂರು: ಬೈಕ್​ ಕಳ್ಳತನ(Theft) ಮಾಡುತ್ತಿದ್ದ ಐವರು ಆರೋಪಿಗಳನ್ನ ಕಾಟನ್​ಪೇಟೆ ಠಾಣೆ ಪೊಲೀಸರು(Cottonpete Police Station) ಬಂಧಿಸಿದ್ದಾರೆ. ನಗರದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಈ ಖತರ್ನಾಕ್ ಗ್ಯಾಂಗ್ ಕಾಟನ್ ಪೇಟೆ, ಚಂದ್ರಾಲೇಔಟ್, ಜ್ಞಾನ ಭಾರತಿ, ಅಮೃತಹಳ್ಳಿ, ಹಲಸೂರು, ಎಸ್ ಆರ್ ನಗರ ಸೇರಿದಂತೆ ಹಲವು ಠಾಣಾ ವ್ಯಾಪ್ತಿಯಲ್ಲಿ ಈ ಗ್ಯಾಂಗ್​ ಕೈ ಚಳಕ ತೋರಿಸಿತ್ತು. ಇದೀಗ ಐವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದು, ಅವರಿಂದ 20ಲಕ್ಷ ಮೌಲ್ಯದ 22ಬೈಕ್ ಸೇರಿ ಒಂದು ಆಟೋವನ್ನ ಜಪ್ತಿ ಮಾಡಲಾಗಿದೆ. ಸದ್ಯ ಆರೋಪಿಗಳನ್ನ ಬಂಧಿಸಿ ಪೊಲೀಸರು ಜೈಲಿಗಟ್ಟಿದ್ದಾರೆ. ಈ ಕುರಿತು ಕಾಟನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ್ದ ಓರ್ವ ಆರೋಪಿಯನ್ನ ಬಂಧಿಸಿದ ಪೊಲೀಸರು

ಬೆಂಗಳೂರು: ಕೊಟ್ಟಿಗೆಪಾಳ್ಯ ಬಳಿ ಡ್ರಗ್ಸ್​​ ಮಾರಾಟಕ್ಕೆ ಯತ್ನಿಸಿದ್ದ ಓರ್ವ ಆರೋಪಿಯನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ವೇಳೆ 2.97 ಲಕ್ಷ ಮೌಲ್ಯದ ಎಂಡಿಎಂಎಯನ್ನ ಜಪ್ತಿ ಮಾಡಲಾಗಿದೆ. ಮತ್ತೋರ್ವ ಆರೋಪಿಗಾಗಿ ಪೊಲೀಸರ ಹುಡುಕಾಟ ನಡೆಸಿದ್ದು, ಕಾಮಾಕ್ಷಿಪಾಳ್ಯ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಬೈಕ್ ಕದ್ದು ಆಂಧ್ರದಲ್ಲಿ ಮಾರಾಟ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಅರೆಸ್ಟ್

ಮಾರಣಾಂತಿಕ ಹಲ್ಲೆ ನಡೆಸಿ ದರೋಡೆ ಮಾಡಿದ್ದ ಆರೋಪಿಗಳ ಬಂಧನ

ಬೆಂಗಳೂರು ಗ್ರಾಮಾಂತರ: ಮಾರಣಾಂತಿಕ ಹಲ್ಲೆ ನಡೆಸಿ ದರೋಡೆ ಮಾಡಿದ್ದ ಆರೋಪಿಗಳನ್ನು ನೆಲಮಂಗಲ ಪೊಲೀಸರು ಬಂಧಿಸಿದ್ದಾರೆ. ತೇಜಸ್, ಚಾಂದ್ ಪಾಷ, ಸಲ್ಮಾನ್ ಖಾನ್ ಬಂಧಿತ ಆರೋಪಿಗಳು. ಇವರಿಂದ 5 ಮೊಬೈಲ್, ಒಂದು ಬೈಕ್ ವಶಕ್ಕೆ ಪಡೆಯಲಾಗಿದೆ. ಇದೇ ತಿಂಗಳ 10‌ರ ರಾತ್ರಿ ಬಸವರಾಜು ಎನ್ನುವವರ ಮೇಲೆ ನೆಲಮಂಗಲ ತಾಲೂಕಿನ ಗಂಗಾಧರಯ್ಯನ ಪಾಳ್ಯದ ಬಳಿ ಕುತ್ತಿಗೆಗೆ ಚಾಕುವಿನಿಂದ ಇರಿದು, ಹಲ್ಲೆ ನಡೆಸಿ, ಮೊಬೈಲ್ ಕಸಿದು ಪರಾರಿಯಾಗಿದ್ದರು. ಈ ಕುರಿತು ನೆಲಮಂಗಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:07 pm, Tue, 20 June 23

ತಾಜಾ ಸುದ್ದಿ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ