AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಬೈಕ್​ ಕಳ್ಳತನ ಮಾಡ್ತಿದ್ದ ಐವರ ಬಂಧನ; 20 ಲಕ್ಷ ರೂ. ಮೌಲ್ಯದ 22 ಬೈಕ್, ಒಂದು ಆಟೋ ಜಪ್ತಿ

ಬೈಕ್​ ಕಳ್ಳತನ ಮಾಡುತ್ತಿದ್ದ ಐವರು ಆರೋಪಿಗಳನ್ನ ಕಾಟನ್​ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಗರದ ಕಾಟನ್ ಪೇಟೆ, ಚಂದ್ರಾಲೇಔಟ್, ಜ್ಞಾನ ಭಾರತಿ, ಅಮೃತಹಳ್ಳಿ, ಹಲಸೂರು, ಎಸ್ ಆರ್ ನಗರ ಸೇರಿದಂತೆ ಹಲವು ಠಾಣಾ ವ್ಯಾಪ್ತಿಯಲ್ಲಿ ಕೈ ಚಳಕ ತೋರಿಸಿದ್ದ ಈ ಗ್ಯಾಂಗ್​ನ ಐವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದು,20ಲಕ್ಷ ಮೌಲ್ಯದ ಬೈಕ್​ನ್ನ ವಶಕ್ಕೆ ಪಡೆದಿದ್ದಾರೆ.

Bengaluru News: ಬೈಕ್​ ಕಳ್ಳತನ ಮಾಡ್ತಿದ್ದ ಐವರ ಬಂಧನ; 20 ಲಕ್ಷ ರೂ. ಮೌಲ್ಯದ 22 ಬೈಕ್, ಒಂದು ಆಟೋ ಜಪ್ತಿ
ಪ್ರಾತಿನಿಧಿಕ ಚಿತ್ರ
ಕಿರಣ್ ಹನುಮಂತ್​ ಮಾದಾರ್
|

Updated on:Jun 20, 2023 | 2:26 PM

Share

ಬೆಂಗಳೂರು: ಬೈಕ್​ ಕಳ್ಳತನ(Theft) ಮಾಡುತ್ತಿದ್ದ ಐವರು ಆರೋಪಿಗಳನ್ನ ಕಾಟನ್​ಪೇಟೆ ಠಾಣೆ ಪೊಲೀಸರು(Cottonpete Police Station) ಬಂಧಿಸಿದ್ದಾರೆ. ನಗರದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಈ ಖತರ್ನಾಕ್ ಗ್ಯಾಂಗ್ ಕಾಟನ್ ಪೇಟೆ, ಚಂದ್ರಾಲೇಔಟ್, ಜ್ಞಾನ ಭಾರತಿ, ಅಮೃತಹಳ್ಳಿ, ಹಲಸೂರು, ಎಸ್ ಆರ್ ನಗರ ಸೇರಿದಂತೆ ಹಲವು ಠಾಣಾ ವ್ಯಾಪ್ತಿಯಲ್ಲಿ ಈ ಗ್ಯಾಂಗ್​ ಕೈ ಚಳಕ ತೋರಿಸಿತ್ತು. ಇದೀಗ ಐವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದು, ಅವರಿಂದ 20ಲಕ್ಷ ಮೌಲ್ಯದ 22ಬೈಕ್ ಸೇರಿ ಒಂದು ಆಟೋವನ್ನ ಜಪ್ತಿ ಮಾಡಲಾಗಿದೆ. ಸದ್ಯ ಆರೋಪಿಗಳನ್ನ ಬಂಧಿಸಿ ಪೊಲೀಸರು ಜೈಲಿಗಟ್ಟಿದ್ದಾರೆ. ಈ ಕುರಿತು ಕಾಟನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ್ದ ಓರ್ವ ಆರೋಪಿಯನ್ನ ಬಂಧಿಸಿದ ಪೊಲೀಸರು

ಬೆಂಗಳೂರು: ಕೊಟ್ಟಿಗೆಪಾಳ್ಯ ಬಳಿ ಡ್ರಗ್ಸ್​​ ಮಾರಾಟಕ್ಕೆ ಯತ್ನಿಸಿದ್ದ ಓರ್ವ ಆರೋಪಿಯನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ವೇಳೆ 2.97 ಲಕ್ಷ ಮೌಲ್ಯದ ಎಂಡಿಎಂಎಯನ್ನ ಜಪ್ತಿ ಮಾಡಲಾಗಿದೆ. ಮತ್ತೋರ್ವ ಆರೋಪಿಗಾಗಿ ಪೊಲೀಸರ ಹುಡುಕಾಟ ನಡೆಸಿದ್ದು, ಕಾಮಾಕ್ಷಿಪಾಳ್ಯ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಬೈಕ್ ಕದ್ದು ಆಂಧ್ರದಲ್ಲಿ ಮಾರಾಟ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಅರೆಸ್ಟ್

ಮಾರಣಾಂತಿಕ ಹಲ್ಲೆ ನಡೆಸಿ ದರೋಡೆ ಮಾಡಿದ್ದ ಆರೋಪಿಗಳ ಬಂಧನ

ಬೆಂಗಳೂರು ಗ್ರಾಮಾಂತರ: ಮಾರಣಾಂತಿಕ ಹಲ್ಲೆ ನಡೆಸಿ ದರೋಡೆ ಮಾಡಿದ್ದ ಆರೋಪಿಗಳನ್ನು ನೆಲಮಂಗಲ ಪೊಲೀಸರು ಬಂಧಿಸಿದ್ದಾರೆ. ತೇಜಸ್, ಚಾಂದ್ ಪಾಷ, ಸಲ್ಮಾನ್ ಖಾನ್ ಬಂಧಿತ ಆರೋಪಿಗಳು. ಇವರಿಂದ 5 ಮೊಬೈಲ್, ಒಂದು ಬೈಕ್ ವಶಕ್ಕೆ ಪಡೆಯಲಾಗಿದೆ. ಇದೇ ತಿಂಗಳ 10‌ರ ರಾತ್ರಿ ಬಸವರಾಜು ಎನ್ನುವವರ ಮೇಲೆ ನೆಲಮಂಗಲ ತಾಲೂಕಿನ ಗಂಗಾಧರಯ್ಯನ ಪಾಳ್ಯದ ಬಳಿ ಕುತ್ತಿಗೆಗೆ ಚಾಕುವಿನಿಂದ ಇರಿದು, ಹಲ್ಲೆ ನಡೆಸಿ, ಮೊಬೈಲ್ ಕಸಿದು ಪರಾರಿಯಾಗಿದ್ದರು. ಈ ಕುರಿತು ನೆಲಮಂಗಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:07 pm, Tue, 20 June 23

Follow Us
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು