AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಬೈಕ್​ ಕಳ್ಳತನ ಮಾಡ್ತಿದ್ದ ಐವರ ಬಂಧನ; 20 ಲಕ್ಷ ರೂ. ಮೌಲ್ಯದ 22 ಬೈಕ್, ಒಂದು ಆಟೋ ಜಪ್ತಿ

ಬೈಕ್​ ಕಳ್ಳತನ ಮಾಡುತ್ತಿದ್ದ ಐವರು ಆರೋಪಿಗಳನ್ನ ಕಾಟನ್​ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಗರದ ಕಾಟನ್ ಪೇಟೆ, ಚಂದ್ರಾಲೇಔಟ್, ಜ್ಞಾನ ಭಾರತಿ, ಅಮೃತಹಳ್ಳಿ, ಹಲಸೂರು, ಎಸ್ ಆರ್ ನಗರ ಸೇರಿದಂತೆ ಹಲವು ಠಾಣಾ ವ್ಯಾಪ್ತಿಯಲ್ಲಿ ಕೈ ಚಳಕ ತೋರಿಸಿದ್ದ ಈ ಗ್ಯಾಂಗ್​ನ ಐವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದು,20ಲಕ್ಷ ಮೌಲ್ಯದ ಬೈಕ್​ನ್ನ ವಶಕ್ಕೆ ಪಡೆದಿದ್ದಾರೆ.

Bengaluru News: ಬೈಕ್​ ಕಳ್ಳತನ ಮಾಡ್ತಿದ್ದ ಐವರ ಬಂಧನ; 20 ಲಕ್ಷ ರೂ. ಮೌಲ್ಯದ 22 ಬೈಕ್, ಒಂದು ಆಟೋ ಜಪ್ತಿ
ಪ್ರಾತಿನಿಧಿಕ ಚಿತ್ರ
ಕಿರಣ್ ಹನುಮಂತ್​ ಮಾದಾರ್
|

Updated on:Jun 20, 2023 | 2:26 PM

Share

ಬೆಂಗಳೂರು: ಬೈಕ್​ ಕಳ್ಳತನ(Theft) ಮಾಡುತ್ತಿದ್ದ ಐವರು ಆರೋಪಿಗಳನ್ನ ಕಾಟನ್​ಪೇಟೆ ಠಾಣೆ ಪೊಲೀಸರು(Cottonpete Police Station) ಬಂಧಿಸಿದ್ದಾರೆ. ನಗರದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಈ ಖತರ್ನಾಕ್ ಗ್ಯಾಂಗ್ ಕಾಟನ್ ಪೇಟೆ, ಚಂದ್ರಾಲೇಔಟ್, ಜ್ಞಾನ ಭಾರತಿ, ಅಮೃತಹಳ್ಳಿ, ಹಲಸೂರು, ಎಸ್ ಆರ್ ನಗರ ಸೇರಿದಂತೆ ಹಲವು ಠಾಣಾ ವ್ಯಾಪ್ತಿಯಲ್ಲಿ ಈ ಗ್ಯಾಂಗ್​ ಕೈ ಚಳಕ ತೋರಿಸಿತ್ತು. ಇದೀಗ ಐವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದು, ಅವರಿಂದ 20ಲಕ್ಷ ಮೌಲ್ಯದ 22ಬೈಕ್ ಸೇರಿ ಒಂದು ಆಟೋವನ್ನ ಜಪ್ತಿ ಮಾಡಲಾಗಿದೆ. ಸದ್ಯ ಆರೋಪಿಗಳನ್ನ ಬಂಧಿಸಿ ಪೊಲೀಸರು ಜೈಲಿಗಟ್ಟಿದ್ದಾರೆ. ಈ ಕುರಿತು ಕಾಟನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ್ದ ಓರ್ವ ಆರೋಪಿಯನ್ನ ಬಂಧಿಸಿದ ಪೊಲೀಸರು

ಬೆಂಗಳೂರು: ಕೊಟ್ಟಿಗೆಪಾಳ್ಯ ಬಳಿ ಡ್ರಗ್ಸ್​​ ಮಾರಾಟಕ್ಕೆ ಯತ್ನಿಸಿದ್ದ ಓರ್ವ ಆರೋಪಿಯನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ವೇಳೆ 2.97 ಲಕ್ಷ ಮೌಲ್ಯದ ಎಂಡಿಎಂಎಯನ್ನ ಜಪ್ತಿ ಮಾಡಲಾಗಿದೆ. ಮತ್ತೋರ್ವ ಆರೋಪಿಗಾಗಿ ಪೊಲೀಸರ ಹುಡುಕಾಟ ನಡೆಸಿದ್ದು, ಕಾಮಾಕ್ಷಿಪಾಳ್ಯ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಬೈಕ್ ಕದ್ದು ಆಂಧ್ರದಲ್ಲಿ ಮಾರಾಟ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಅರೆಸ್ಟ್

ಮಾರಣಾಂತಿಕ ಹಲ್ಲೆ ನಡೆಸಿ ದರೋಡೆ ಮಾಡಿದ್ದ ಆರೋಪಿಗಳ ಬಂಧನ

ಬೆಂಗಳೂರು ಗ್ರಾಮಾಂತರ: ಮಾರಣಾಂತಿಕ ಹಲ್ಲೆ ನಡೆಸಿ ದರೋಡೆ ಮಾಡಿದ್ದ ಆರೋಪಿಗಳನ್ನು ನೆಲಮಂಗಲ ಪೊಲೀಸರು ಬಂಧಿಸಿದ್ದಾರೆ. ತೇಜಸ್, ಚಾಂದ್ ಪಾಷ, ಸಲ್ಮಾನ್ ಖಾನ್ ಬಂಧಿತ ಆರೋಪಿಗಳು. ಇವರಿಂದ 5 ಮೊಬೈಲ್, ಒಂದು ಬೈಕ್ ವಶಕ್ಕೆ ಪಡೆಯಲಾಗಿದೆ. ಇದೇ ತಿಂಗಳ 10‌ರ ರಾತ್ರಿ ಬಸವರಾಜು ಎನ್ನುವವರ ಮೇಲೆ ನೆಲಮಂಗಲ ತಾಲೂಕಿನ ಗಂಗಾಧರಯ್ಯನ ಪಾಳ್ಯದ ಬಳಿ ಕುತ್ತಿಗೆಗೆ ಚಾಕುವಿನಿಂದ ಇರಿದು, ಹಲ್ಲೆ ನಡೆಸಿ, ಮೊಬೈಲ್ ಕಸಿದು ಪರಾರಿಯಾಗಿದ್ದರು. ಈ ಕುರಿತು ನೆಲಮಂಗಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:07 pm, Tue, 20 June 23

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್