AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ ನಾಲ್ವರು ಬಾಂಗ್ಲಾ ಪ್ರಜೆಗಳ ಬಂಧನ

ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಬಿಸ್ಮಿಲಾನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಬಾಂಗ್ಲಾದೇಶದಿಂದ ಬಂದಿದ್ದ ಮೂವರು ಪುರುಷರು ಹಾಗೂ ಓರ್ವ ಮಹಿಳೆ ಸೇರಿ ನಾಲ್ವರನ್ನು ಬಂಧಿಸಲಾಗಿದ್ದು, ಸುದ್ದಗುಂಟೆಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ ನಾಲ್ವರು ಬಾಂಗ್ಲಾ ಪ್ರಜೆಗಳ ಬಂಧನ
ಬಾಂಗ್ಲಾ ಪ್ರಜೆಗಳ ಬಂಧನ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Apr 18, 2024 | 9:20 PM

Share

ಬೆಂಗಳೂರು, ಏ.18: ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ ನಾಲ್ವರು ಬಾಂಗ್ಲಾ ಪ್ರಜೆಗಳನ್ನ(Bangladesh Citizen) ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶಮೀಮ್ ಅಹ್ಮದ್‌, ಮೊಹಮ್ಮದ್ ಅಬ್ದುಲ್ಲಾ, ಹರೂನ್ ಮೊಹಮ್ಮದ್ ಹಾಗೂ ನೂರ್ ಜಹಾನ್ ಬಂಧಿತ ಬಾಂಗ್ಲಾ ಪ್ರಜೆಗಳು. ಇವರು ಬಾಂಗ್ಲಾದೇಶದಿಂದ ಅಕ್ರಮವಾಗಿ ಬಂದು ಬೆಂಗಳೂರಿನಲ್ಲಿ ನೆಲೆಸಿದ್ದರು, ಜೊತೆಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಪಾಸ್‌ಪೋರ್ಟ್ ಸಹ ಪಡೆದಿದ್ದರು. ಖಚಿತ ಮಾಹಿತಿ ಸಂಗ್ರಹಿಸಿ ದಾಳಿ ನಡೆಸಿ, ಬಂಧಿಸಲಾಗಿದೆ. ಇನ್ನು ಇವರ ಬಳಿ ಇದ್ದ ಆಧಾರ್ ಕಾರ್ಡ್, ಜಾತಿ ಪ್ರಮಾಣಪತ್ರ, ರೇಷನ್ ಕಾರ್ಡ್, ಆಯುಷ್ಮಾನ್ ಕಾರ್ಡ್, ಮಜ್ದೂರ್ ಕಾರ್ಡ್, ವೋಟರ್ ಐಡಿ ಜಪ್ತಿ ಮಾಡಲಾಗಿದೆ.

ಭಾರತದ ಗುರುತಿನ ಚೀಟಿಗಳನ್ನು ಮಾಡಿಸಿದ್ದ ಆರೋಪಿಗಳು

ಬಾಂಗ್ಲಾದೇಶದಿಂದ ಅಕ್ರಮವಾಗಿ ಬಂದಿದ್ದ ನಾಲ್ವರು ಪ್ರಜೆಗಳು, ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಬಿಸ್ಮಿಲಾನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ನಕಲಿ ಬಾಡಿಗೆ ಕರಾರು ಪತ್ರ ಮತ್ತು ವಾಸದ ದೃಢೀಕರಣ ಪತ್ರಗಳನ್ನು ಕೂಡ ತಯಾರಿಸಿದ್ದರು. ಆ ಮೂಲಕ ಆಧಾರ್ ಕಾರ್ಡ್, ಫ್ಯಾನ್ ಕಾರ್ಡ್, ರೇಷನ್ ಕಾರ್ಡ್ ಜೊತೆಗೆ ಸ್ಥಳೀಯ ನಾಲ್ವರು ಯುವಕರ ಸಹಾಯದಿಂದ ಭಾರತದ ಗುರುತಿನ ಚೀಟಿಗಳನ್ನು ಮಾಡಿಸಿದ್ದರು. ಈ ಕುರಿತು ಸುದ್ದಗುಂಟೆಪಾಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಮಂಗಳೂರಿಗೆ ಶ್ರೀಲಂಕಾ ಪ್ರಜೆಗಳ ಅಕ್ರಮ ಪ್ರವೇಶ; ತನಿಖೆ ಕೈಗೆತ್ತಿಕೊಂಡ ಎನ್ಐಎ

ಸಹಾಯ ಮಾಡಿದ ನಾಲ್ವರು ಯುವಕರ ಮೇಲೂ ಪ್ರಕರಣ ದಾಖಲು

ಇನ್ನು ಅಕ್ರಮವಾಗಿ ವಾಸವಾಗಿದ್ದ ಬಾಂಗ್ಲಾ ಪ್ರಜೆಗಳಿಗೆ ಸಹಾಯ ಮಾಡಿದ ನಾಲ್ವರು ಯುವಕರ ಮೇಲೂ ಪ್ರಕರಣ ದಾಖಲು ಮಾಡಲಾಗಿದೆ. ಮುಬಾರಕ್, ಮುನೀರ್, ಹುಸೇನ್, ನಹೀಂ ಮೇಲೆ ಪ್ರಕರಣ ದಾಖಲಿಸಲಾಗಿದೆ. ಸಧ್ಯ ಮೂವರು ಪುರುಷರು ಹಾಗೂ ಓರ್ವ ಮಹಿಳೆ ಸೇರಿ ನಾಲ್ವರನ್ನು ಬಂಧಿಸಲಾಗಿದ್ದು, ಸುದ್ದಗುಂಟೆಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು