AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ಗಾಂಜಾ ಮಾರಾಟ ಮಾಡ್ತಿದ್ದ ನಾಲ್ವರ ಬಂಧನ; ಲಕ್ಷಾಂತರ ರೂ ಮೌಲ್ಯದ ಮಾದಕ ವಸ್ತು ವಶಕ್ಕೆ

Anekal News: ಆನೇಕಲ್ ತಾಲ್ಲೂಕಿನ ಚಂದಾಪುರ-ದೊಮ್ಮಸಂದ್ರ ಮುಖ್ಯರಸ್ತೆಯ ರೈಲ್ವೆ ಸ್ಟೇಷನ್ ಬಳಿ ಕಾಲೇಜು ಯುವಕ-ಯುವತಿಯರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಹಿನ್ನಲೆ ದಾಳಿ ನಡೆಸಿದ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಆನೇಕಲ್: ಗಾಂಜಾ ಮಾರಾಟ ಮಾಡ್ತಿದ್ದ ನಾಲ್ವರ ಬಂಧನ; ಲಕ್ಷಾಂತರ ರೂ ಮೌಲ್ಯದ ಮಾದಕ ವಸ್ತು ವಶಕ್ಕೆ
ಆನೇಕಲ್​ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ
ರಾಮು, ಆನೇಕಲ್​
| Edited By: |

Updated on: Aug 15, 2023 | 12:18 PM

Share

ಬೆಂಗಳೂರು, ಆ.15: ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಸೂರ್ಯ ನಗರ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು (Bengaluru) ಹೊರವಲಯದ ಆನೇಕಲ್(Anekal) ತಾಲ್ಲೂಕಿನ ಚಂದಾಪುರ-ದೊಮ್ಮಸಂದ್ರ ಮುಖ್ಯರಸ್ತೆಯ ರೈಲ್ವೆ ಸ್ಟೇಷನ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ಮಾಡಿದ್ದು, ಈ ವೇಳೆ ಆನೇಕಲ್​ನ ಚನ್ನಕೇಶವ ನಗರದ ಅಭಿ(19), ತರಣ್(20), ಸೂರ್ಯ(21), ಹರ್ಷ (21) ಎಂಬುವವರನ್ನು ಬಂಧಿಸಲಾಗಿದೆ. ಆರೋಪಿಗಳು ಗಾಂಜಾವನ್ನು ತಂದು ಸಣ್ಣ ಸಣ್ಣ ಪ್ಯಾಕೆಟ್​ಗಳನ್ನಾಗಿ ಮಾಡಿ ಚಂದಾಪುರದ ಹೀಲಲಿಗೆ ಸಮೀಪದ ಕಾಲೇಜು ಯುವಕ ಯುವತಿಯರಿಗೆ ಮಾರಾಟ ಮಾಡುತ್ತಿದ್ದರು.

ಸೂರ್ಯನಗರ ಪೊಲೀಸ್ರ ಮಿಂಚಿನ ಕಾರ್ಯಾಚರಣೆ

ಹೌದು, ಕಾಲೇಜು ಯುವಕ ಯುವತಿಯರಿಗೆ ಮಾರಾಟ ಮಾಡುತ್ತಿದ್ದು, ಖಚಿತ ಮಾಹಿತಿ ಮೇರೆಗೆ ಸೂರ್ಯನಗರ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ ಆರೋಪಿಗಳು ಎಸ್ಕೇಪ್ ಆಗಲು ಪ್ರಯತ್ನಿಸಿದ್ದು, ಇದೀಗ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇನ್ನು ಬಂಧಿತ ಆರೋಪಿಗಳಿಂದ ಲಕ್ಷಾಂತರ ರೂ ಮೌಲ್ಯದ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತು ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ವಿದ್ಯಾರ್ಥಿಗಳನ್ನೇ ಟಾರ್ಗೆಟ್​ ಮಾಡಿ ಗಾಂಜಾ ಮಾರಾಟ; ಅರೋಪಿಯನ್ನ ಬಂಧಿಸಿದ ಪೊಲೀಸರು, 5 ಕೆಜಿಗೂ ಅಧಿಕ ಗಾಂಜಾ ಜಪ್ತಿ

ಧಾರವಾಡದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರ ಬಂಧಿಸಿ, 510 ಗ್ರಾಂ ಗಾಂಜಾ ಜಪ್ತಿ ಮಾಡಲಾಗಿತ್ತು

ಆಗಸ್ಟ್​ 09 ರಂದು ಧಾರವಾಡದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರನ್ನು ಬಂಧಿಸಿ, 510 ಗ್ರಾಂ ಗಾಂಜಾ ಜಪ್ತಿ ಮಾಡಲಾಗಿತ್ತು. ಮಂಗಳೂರು, ರಾಯಚೂರು ಸೇರಿದಂತೆ ಇನ್ನಿತರ ಕಡೆಗಳಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದವರನ್ನು ಬಂಧಿಸಿದ ಬೆನ್ನಲ್ಲೇ ಅವಳಿ ನಗರಗಳಾದ ಹುಬ್ಬಳ್ಳಿ-ಧಾರವಾಡದಲ್ಲಿ ಇಂತಹ ಘಟನೆಗಳು ಬೆಳಕಿಗೆ ಬಂದಿತ್ತು. ಹೌದು, ಆಗಸ್ಟ್​ 8 ರಂದು ಹುಬ್ಬಳ್ಳಿಯಲ್ಲಿ ಓರ್ವ ಡ್ರಗ್​ ಪೆಡ್ಲರ್​ನನ್ನು ಬಂಧಿಸಿದ್ದರು. ಇದಾದ ಮಾರನೇ ದಿನವೇ ಧಾರವಾಡದ ತಡಸಿನಕೊಪ್ಪ ಬಳಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರನ್ನು ವಿದ್ಯಾಗಿರಿ ಪೊಲೀಸರು ಬಂಧಿಸಿದ್ದರು. ದರ್ಶನ ದುಗ್ಗಾಣಿ, ಗುರುರಾಜ ಯರೇಸೀಮಿ, ಮಂಜುನಾಥ ಮಾನೆ ಬಂಧಿತ ಆರೋಪಿಗಳು.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?