AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಂಕಿತ ಉಗ್ರ ಆರೀಫ್ ತಾನು ದುಡಿಯುತ್ತಿದ್ದ ದುಡ್ಡಿನಲ್ಲೇ ತಿಂಗಳಿಗೆ 50 ಸಾವಿರ ಅಲ್ ಖೈದಾಗೆ ನೀಡುತ್ತಿದ್ದ! ವಿಚಾರಣೆಯಲ್ಲಿ ಇನ್ನೂ ಕೆಲ ಸ್ಪೋಟಕ ಮಾಹಿತಿ ಬಹಿರಂಗ

ಆರೀಫ್​ ಬಂಧನ ಬೆನ್ನಲ್ಲೆ ಎನ್ಐಎ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಎನ್ಐಎ ತನಿಖೆ ವೇಳೆ ಮತ್ತೊಂದು ಪ್ರಕರಣದ ಸಾಮ್ಯತೆ ಇರುವುದು ಕಂಡು ಬಂದಿದೆ.

ಶಂಕಿತ ಉಗ್ರ ಆರೀಫ್ ತಾನು ದುಡಿಯುತ್ತಿದ್ದ ದುಡ್ಡಿನಲ್ಲೇ ತಿಂಗಳಿಗೆ 50 ಸಾವಿರ ಅಲ್ ಖೈದಾಗೆ ನೀಡುತ್ತಿದ್ದ! ವಿಚಾರಣೆಯಲ್ಲಿ ಇನ್ನೂ ಕೆಲ ಸ್ಪೋಟಕ ಮಾಹಿತಿ ಬಹಿರಂಗ
ಆರೀಫ್
TV9 Web
| Edited By: ಆಯೇಷಾ ಬಾನು|

Updated on: Feb 13, 2023 | 10:39 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ನಾಲ್ಕೈದು ತಿಂಗಳ ಹಿಂದಷ್ಟೇ, ಅಖ್ತರ್ ಹುಸೇನ್ ಅನ್ನೋ ಶಂಕಿತ ಉಗ್ರನನ್ನ ಸೆರೆ ಹಿಡಿಯಲಾಗಿತ್ತು. ಇದೀಗ, ಆರೀಫ್ ಅಲಿಯಾಸ್ ಮಹಮ್ಮದ್ ಆರೀಫ್ ಅನ್ನೋ ಮತ್ತೊಬ್ಬ ಶಂಕಿತ ಉಗ್ರನನ್ನು ಎನ್​ಐಎ ಟೀಮ್ ಬೇಟೆಯಾಡಿದೆ. ಸದ್ಯ ಆರೀಫ್​ ತನಿಖೆ ನಡೆಯುತ್ತಿದ್ದು ವಿಚಾರಣೆ ವೇಳೆ ಬೆಚ್ಚಿ ಬೀಳಿಸುವ ಅಂಶ ಬಯಲಾಗಿದೆ.

ಎರಡು ವರ್ಷದ ಹಿಂದಷ್ಟೇ ಬೆಂಗಳೂರಿಗೆ ಬಂದು ನೆಲೆಸಿದ್ದ ಆರೀಫ್, ಉಗ್ರ ಸಂಘಟನೆಯಾದ ಅಲ್ ಖೈದಾ ಮತ್ತು ಐಸಿಸ್ ಸೇರುವ ಕನಸು ಕಂಡಿದ್ದ. ಅಲ್ಲದೆ ಅಲ್ ಖೈದಾಗೆ ಹಣ ನೀಡಿರುವುದು ಬಯಲಾಗಿ ತಿಂಗಳಲ್ಲಿ ಒಂದೂವರೆ ಲಕ್ಷಕ್ಕೂ ಹೆಚ್ಚು ಹಣ ದುಡಿಯುತಿದ್ದ ಆರೀ ಐವತ್ತು ಸಾವಿರ ಹಣ ದೇಣಿಗೆ ನೀಡಿರುವುದು ಬೆಳಕಿಗೆ ಬಂದಿದೆ.

ಆರೀಫ್ ಕೇಸ್​ಗೂ ಅಖ್ತರ್ ಹುಸೇನ್ ಕೇಸ್​ಗೂ ಸಾಮ್ಯತೆ

ಆರೀಫ್​ ಬಂಧನ ಬೆನ್ನಲ್ಲೆ ಎನ್ಐಎ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಎನ್ಐಎ ತನಿಖೆ ವೇಳೆ ಮತ್ತೊಂದು ಪ್ರಕರಣದ ಸಾಮ್ಯತೆ ಇರುವುದು ಕಂಡು ಬಂದಿದೆ. ಸೆಪ್ಟೆಂಬರ್​ನಲ್ಲಿ ತಿಲಕ್ ನಗರದಲ್ಲಿ ದಾಖಲಾದ ಪ್ರಕರಣದ ಜೊತೆಗೆ ಆರೀಫ್​ ಪ್ರಕರಣ ಕೂಡ ಸಾಮ್ಯತೆ ಹೊಂದಿದೆ. ಅಖ್ತರ್ ಹುಸೇನ್ ಮತ್ತು ಜುಬಾ ನಂತೆ ಆರೀಫ್ ಕೂಡ ಸೋಷಿಯಲ್ ಮೀಡಿಯಾ ಮೂಲಕ ಗೌಪ್ಯ ಸಂಪರ್ಕ ಹೊಂದಿದ್ದ. ವಿದೇಶಿ ಹ್ಯಾಂಡ್ಲರ್ಸ್ ಜೊತೆ ಸಂಪರ್ಕ ಸಾಧಿಸಿ ಚಾಟಿಂಗ್ ಮಾಡ್ತಿದ್ದನಂತೆ. ಅಖ್ತರ್ ಹುಸೇನ್ ಹಾಗೂ ಜುಬಾ ಇಬ್ಬರು ಕೂಡ ಆಲ್ ಖೈದಾ ಜೊತೆಗೆ ನಂಟು ಹೊಂದಿದ್ದರು. ಆನ್‌ಲೈನ್ ಮೂಲಕ ನಂಟು ಬೆಳೆಸಿ ಬಳಿಕ ಸಾಮಾಜಿಕ ಜಾಲತಾಣದ ಮೂಲಕ ಯುವಕರನ್ನ ಸೆಳೆಯುವ ಪ್ರಯತ್ನ ಮಾಡುತ್ತಿದ್ದರು. ಬಳಿಕ ಯುವಕರಿಗೆ ಹಿಂಸೆ ಹಾಗೂ ಉಗ್ರ ಕೃತ್ಯದ ಬಗ್ಗೆ ಪ್ರಚೋದನೆ ಮಾಡುತ್ತಿದ್ದರು.

ಇದನ್ನೂ ಓದಿ: Al Qaeda: ಅಲ್​ಖೈದಾ ಜೊತೆ ನಂಟು ಆರೋಪ, ಬೆಂಗಳೂರಿನ ಥಣಿಸಂದ್ರದಲ್ಲಿ ಶಂಕಿತನ ಬಂಧನ

ಅಖ್ತರ್ ಹುಸೇನ್ ಅವಿದ್ಯಾವಂತನಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿಯಾದ ವಿಡಿಯೋ, ಪೋಸ್ಟ್‌ ಹಾಗೂ ಮೆಸೇಜ್​ಗಳ ಮೂಲಕ ಯುವಕರನ್ನ ಸೆಳೆದು ಪ್ರಚೋದನೆ ಮಾಡುತ್ತಿದ್ದ. ಯಾರಿಗೂ ಅನುಮಾನ ಬಾರದಂತೆ ಪುಡ್ ಡೆಲಿವರಿ ಬಾಯ್ ಕೆಲಸ ಮಾಡ್ಕೊಂಡಿದ್ದ ಆಖ್ತರ್ ಹುಸೇನ್, ಉಗ್ರ ಸಂಘಟನೆ ಬೇಸಿಕ್ ಕೆಲಸಗಳನ್ನ ಕಾರ್ಯರೂಪಕ್ಕೆ ತರುವುದಷ್ಟೆ ಆತನ ಕೆಲಸವಾಗಿತ್ತು. ಅದೇ ರೀತಿ ಆರೀಫ್ ಕೂಡ ಮಾಡುತ್ತಿದ್ದ ಎಂಬ ಮಾಹಿತಿ ಸಿಕ್ಕಿದ್ದು ಇವರಿಬ್ಬರ ಪ್ರಕರಣದಲ್ಲೂ ಸಾಮ್ಯತೆ ಇರುವುದು ಬೆಳಕಿಗೆ ಬಂದಿದೆ. ಆದ್ರೆ ಆರೀಫ್ ಉನ್ನತ ವಿದ್ಯಾಭ್ಯಾಸದ ಹಿನ್ನಲೆ ಹೊಂದಿದ್ದ.

ಸಾಮಾಜಿಕ ಜಾಲತಾಣಗಳ ಮೂಲಕ ಯುವಕರನ್ನು ಸೆಳೆದು ಪ್ರಚೋದನೆ

ಗೌಪ್ಯವಾಗಿ ಸೋಷಿಯಲ್ ಮೀಡಿಯಾ ಮೂಲಕ ಯುವಕರನ್ನ ಸೆಳೆದು ಪ್ರಚೋದನೆಗೆ ಯತ್ನಿಸಿದ್ದ. ಬೇರೆ ಬೇರೆ ಸೋಷಿಯಲ್ ಮೀಡಿಯಾ ಮೂಲಕ ಒಬ್ಬರಿಗೊಬ್ಬರು ಸಂಪರ್ಕವಿಲ್ಲದೆ ತಮ್ಮ ಕಾರ್ಯ ಸಾಧನೆ ಮಾಡುತ್ತಿದ್ದರು. ತಿಲಕ್ ನಗರದಲ್ಲಿ ದಾಖಲಾದ ಪ್ರಕರಣದ ಆಧಾರದ ಮೇಲೆ ರಾಷ್ಟ್ರೀಯ ತನಿಖಾ ತಂಡಗಳು ಆರೀಫ್ ಮೇಲೆ ಹದ್ದಿನ ಕಣ್ಣಿಟ್ಟಿದ್ದರು. ಆರೀಫ್ ಮೊಬೈಲ್ ಮತ್ತು ಲ್ಯಾಪ್ ಟಾಪ್ ನಲ್ಲಿ ಮತ್ತಷ್ಟು ಗೌಪ್ಯ ಮಾಹಿತಿ ಇರುವ ಶಂಕೆ ವ್ಯಕ್ತವಾಗಿದ್ದು ಪರಿಶೀಲನೆ ನಡೆಸಲಾಗುತ್ತಿದೆ.

ಶಾರಿಕ್, ಮಾಝ್, ಆಖ್ತರ್ ಹುಸೇನ್, ಜುಬಾ, ಆರೀಫ್ ಎಲ್ಲರೂ ಒಂದೆ ಸಂಘಟನೆ ಸೇರಿದ್ರು. ಇವರೆಲ್ಲರೂ ಒಟ್ಟಿಗೆ ಇದ್ದರು ಎಂಬ ಶಂಕೆ ವ್ಯಕ್ತವಾಗಿದೆ. ಶಾರಿಕ್ ಸಹ ಅಲ್ ಖೈದಾ ಸಂಘಟನೆಗೆ ಸೇರಿದ್ದ. ಆತ ಬ್ಲಾಸ್ಟ್ ಮಾಡುವ ಬಗ್ಗೆ ಟ್ರೇನಿಂಗ್ ಪಡೆಯುತಿದ್ದ. ಸದ್ಯ ಅರೆಸ್ಟ್ ಅಗಿರುವ ಇಷ್ಟೂ ಅರೋಪಿಗಳ ಕೇಸ್ ಎನ್​ಐಎ ಬಳಿಯಲ್ಲೆ ಇದೆ. ಇದೇ ರೀತಿ ರಾಜ್ಯದಲ್ಲಿ ಇನ್ನೂ ಹಲವಾರು ಜನರು ಅಲ್ ಖೈದಾ ಸೇರಿರುವ ಶಂಕೆ ವ್ಯಕ್ತವಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು