AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಮಂತ್ರಿ ಮಾಲ್‌ಗೆ ಬೀಗ ಬಿತ್ತು; ಮಾಲ್​ ಗ್ರಾಹಕರನ್ನು ವಾಪಸ್​ ಕಳುಹಿಸುತ್ತಿರುವ ಮಾರ್ಷಲ್‌ಗಳು

ಆಸ್ತಿ ತೆರಿಗೆ ಪಾವತಿಸದ ಹಿನ್ನೆಲೆ ಮಂತ್ರಿ ಮಾಲ್‌ಗೆ ಬೀಗ ಹಾಕಿದ ಕಾರಣ ಮಾಲ್‌ಗೆ ಬರುವವರನ್ನು BBMP ಮಾರ್ಷಲ್‌ಗಳು ಮತ್ತು ಮಾಲ್​ ಸಿಬ್ಬಂದಿ ವಾಪಸ್ ಕಳಿಸುತ್ತಿದ್ದಾರೆ.

ಕೊನೆಗೂ ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಮಂತ್ರಿ ಮಾಲ್‌ಗೆ ಬೀಗ ಬಿತ್ತು; ಮಾಲ್​ ಗ್ರಾಹಕರನ್ನು ವಾಪಸ್​ ಕಳುಹಿಸುತ್ತಿರುವ ಮಾರ್ಷಲ್‌ಗಳು
ಮಂತ್ರಿ ಮಾಲ್‌
Follow us
TV9 Web
| Updated By: ಸಾಧು ಶ್ರೀನಾಥ್​

Updated on:Sep 30, 2021 | 11:08 AM

ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆಗೆ ಆಸ್ತಿ ತೆರಿಗೆ ಕಟ್ಟದ ಸತಾಯಿಸುತ್ತಿದ್ದ ಮಲ್ಲೇಶ್ವರದಲ್ಲಿರುವ ಮಂತ್ರಿ ಮಾಲ್ ಗೆ ಇಂದು ಬೆಳಗ್ಗೆ ಬೀಗ ಹಾಕಲಾಗಿದೆ. ಆಸ್ತಿ ತೆರಿಗೆ ಪಾವತಿಸದ ಹಿನ್ನೆಲೆ ಮಂತ್ರಿ ಮಾಲ್‌ಗೆ ಬೀಗ ಹಾಕಿದ ಕಾರಣ ಮಾಲ್‌ಗೆ ಬರುವವರನ್ನು BBMP ಮಾರ್ಷಲ್‌ಗಳು ಮತ್ತು ಮಾಲ್​ ಸಿಬ್ಬಂದಿ ವಾಪಸ್ ಕಳಿಸುತ್ತಿದ್ದಾರೆ.

ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದ ಮಂತ್ರಿ ಸ್ಕ್ವೇರ್​ ಮಾಲ್ ಮುಖ್ಯದ್ವಾರಕ್ಕೆ ಬಿಬಿಎಂಪಿ ಅಧಿಕಾರಿಗಳು ಕೊನೆಗೂ ಬೀಗ ಹಾಕಿದ್ದಾರೆ. ಎಷ್ಟೇ ನೋಟೀಸ್ ನೀಡಿದ್ರು ತೆರಿಗೆ ಪಾವತಿ ಮಾಡದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ. ಸುಮಾರು 20 ಕೋಟಿ ರೂಪಾಯಿ ತೆರಿಗೆ ವಸೂಲಿ ಆಗಬೇಕಿದೆ. ಹಾಗಾಗಿ ಬಿಬಿಎಂಪಿ ಜಂಟಿ ಆಯುಕ್ತ ಶಿವಸ್ವಾಮಿ ಅವರಿಂದ ಇಂದು ಬೀಗ ಜಡಿಯುವ ಕಾರ್ಯ ನೆರವೇರಿದೆ.

ಚೆಕ್ ಬೌನ್ಸ್ ಆಗಿದೆ; ಡಿಡಿ ಮುಖಾಂತರ ತೆರಿಗೆ ಪಾವತಿ ಮಾಡಲೇಬೇಕು ಆಸ್ತಿ ತೆರಿಗೆ ಪಾವತಿಸುವವರೆಗೂ ಮಂತ್ರಿ ಮಾಲ್‌ಗೆ ಬೀಗ ಮುಂದುವರಿಯಲಿದೆ. ಈ ಮಧ್ಯೆ, ಆಸ್ತಿ ತೆರಿಗೆ ಪಾವತಿಸಲು ಮಂತ್ರಿ ಮಾಲ್‌ ನೀಡಿದ್ದ ಚೆಕ್ ಬೌನ್ಸ್ ಅಗಿದೆ. ಮಂತ್ರಿ ಮಾಲ್‌ನವರು ನೀಡಿದ್ದ ಚೆಕ್ ಬೌನ್ಸ್ ಆದ ಪ್ರಕರಣ ನ್ಯಾಯಾಲಯದಲ್ಲಿ ಇದೆ. ಹಾಗಾಗಿ ಇವತ್ತು ಡಿಡಿ ಮುಖಾಂತರ ಪಾವತಿ ಮಾಡಬೇಕಾಗಿದೆ.

ಬಿಬಿಎಂಪಿ (BBMP) ಪಶ್ಚಿಮ ವಲಯದಲ್ಲಿ ಅತೀ ದೊಡ್ಡ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರ ಪಟ್ಟಿಯಲ್ಲಿ ಮಂತ್ರಿ ಮಾಲ್​ ಮೊದಲ ಸ್ಥಾನದಲ್ಲಿದೆ. ಮಲ್ಲೇಶ್ವರಕ್ಕೆ ಸ್ವಾಗತ ಕೋರುವಂತೆ ಸಂಪಿಗೆ ರಸ್ತೆಯ ಆರಂಭದಲ್ಲಿರುವ ಮಂತ್ರಿ ಮಾಲ್ (Mantri Square Mall ) ಬರೋಬ್ಬರಿ 20,33,34,828 ರೂ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದೆ.

ಇದನ್ನೂ ಓದಿ:

Mantri Mall: ತೆರಿಗೆ ಕಟ್ಟಿ ಕಟ್ಟೀ ಅಂದರೂ ಡೋಂಟ್​ ಕೇರ್! ಮಂತ್ರಿ ಮಾಲ್​ಗೆ ಬೀಗ ಜಡಿಯಲು ಮುಂದಾದ ಬಿಬಿಎಂಪಿ

Published On - 10:59 am, Thu, 30 September 21

ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ