AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಹೋರಾಟಕ್ಕೆ ಇಳಿದ ಆಶಾ ಕಾರ್ಯಕರ್ತೆಯರು! ಬೆಂಗಳೂರಿನಲ್ಲಿ ನಾಳೆ ಬೃಹತ್ ಪ್ರತಿಭಟನೆ

ಕಳೆದ ಹದಿನೈದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ಹೆಚ್ಚಾಗಿಲ್ಲ. ಕೊವಿಡ್ ತಡೆಗಟ್ಟುವುದು, ಲಸಿಕೆ ಹಾಕುವಲ್ಲಿ ವಾರಿಯರ್ಸ್ ಆಗಿ 24 ಗಂಟೆ ಕೆಲಸ ಮಾಡಿದ್ದೇವೆ.

ಮತ್ತೆ ಹೋರಾಟಕ್ಕೆ ಇಳಿದ ಆಶಾ ಕಾರ್ಯಕರ್ತೆಯರು! ಬೆಂಗಳೂರಿನಲ್ಲಿ ನಾಳೆ ಬೃಹತ್ ಪ್ರತಿಭಟನೆ
ಸಾಂದರ್ಭಿಕ ಚಿತ್ರ
TV9 Web
| Edited By: sandhya thejappa|

Updated on:May 16, 2022 | 10:50 AM

Share

ಬೆಂಗಳೂರು: ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು (ASHA Activist) ಮತ್ತೆ ಹೋರಾಟ ನಡೆಸಲು ಮುಂದಾಗಿದ್ದಾರೆ. ನಾಳೆ (ಮೇ 17) ನಗರದ ಫ್ರೀಡಂ ಪಾರ್ಕ್​ನಲ್ಲಿ ಬೃಹತ್ ಪ್ರತಿಭಟನೆ (Protest) ನಡೆಯಲಿದೆ. ಸಾವಿರಾರು ಸಂಖ್ಯೆಯಲ್ಲಿ ಆಶಾ ಕಾರ್ಯಕರ್ತೆಯರು ಧರಣಿಯಲ್ಲಿ ಭಾಗಿಯಾಗಲಿದ್ದು, ಎಐಯುಟಿಯುಸಿ (AIUTUC) ನೇತೃತ್ವದಲ್ಲಿ ತಯಾರಿಗಳು ನಡೆಯುತ್ತಿವೆ. ಹಲವು ವರ್ಷಗಳಿಂದ ಈಡೇರದ ಬೇಡಿಕೆಗಳನ್ನ ಕೂಡಲೇ ಈಡೇರಿಸಿ ಎಂದು ಆಶಾ ಕಾರ್ಯಕರ್ತೆಯರು ಆಗ್ರಹಿಸುತ್ತಾರೆ.

ಕಳೆದ ಹದಿನೈದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ಹೆಚ್ಚಾಗಿಲ್ಲ. ಕೊವಿಡ್ ತಡೆಗಟ್ಟುವುದು, ಲಸಿಕೆ ಹಾಕುವಲ್ಲಿ ವಾರಿಯರ್ಸ್ ಆಗಿ 24 ಗಂಟೆ ಕೆಲಸ ಮಾಡಿದ್ದೇವೆ. ಆದರೆ ಕೆಲಸಕ್ಕೆ ತಕ್ಕ ಸಂಬಳ ಕೊಡದೆ ಸರ್ಕಾರ ಅನ್ಯಾಯ ಮಾಡಿದೆ. ಪ್ರೋತ್ಸಾಹ ಧನ ರಾಜ್ಯದಿಂದ 5 ಸಾವಿರ, ಕೇಂದ್ರ ಸರ್ಕಾದಿಂದ 3 ಸಾವಿರ ನಿಗದಿ ಮಾಡಲಾಗಿದೆ. ಆದರೆ ಕೇಂದ್ರ ಸರ್ಕಾರದಿಂದ ಕೇವಲ 650 ಮಾತ್ರ ಕೈಗೆ ಸಿಗುತ್ತಿದೆ. ಪ್ರೋತ್ಸಹ ಧನ ಹಾಗೂ ಗೌರವಧನ ಎರಡನ್ನೂ ಒಗ್ಗೂಡಿಸಿ ಮಾಸಿಕ ವೇತನ ನೀಡಬೇಕು. ಆರ್​ಸಿಹೆಚ್​ ಪೋರ್ಟಲ್ ಡೇಟಾ ಎಂಟ್ರಿ ಸಮಸ್ಯೆಯನ್ನು ಬಗೆಹರಿಸಿ, ಆಶಾ ಕಾರ್ಯಕರ್ತೆಯರಿಗೆ ಆಗುವ ನಷ್ಟವನ್ನು ತುಂಬಿಕೊಡಬೇಕು ಎಂದು ಎಐಯುಟಿಯುಸಿ ಒತ್ತಾಯಿಸಿ ಬೃಹತ್ ಹೋರಾಟಕ್ಕೆ ಕರೆ ನೀಡಿದೆ.

ರಾಜ್ಯದ್ಯಾಂತ ಪ್ರತಿಭಟನೆಗೆ ಮುಂದಾದ ವಕೀಲರ ಸಂಘ: ಬಾಗಲಕೋಟೆ: ವಕೀಲೆ‌ ಮೇಲೆ ನಡುರಸ್ತೆಯಲ್ಲಿ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣವನ್ನು ಬಾಗಲಕೋಟೆ ವಕೀಲರ ಸಂಘ ಗಂಭೀರವಾಗಿ ಪರಿಗಣಿಸಿದೆ. ವಕೀಲೆ ಮೇಲೆ ಹಲ್ಲೆ ಖಂಡಿಸಿ ವಕೀಲರ ಸಂಘ ಇಂದು ರಾಜ್ಯದ್ಯಾಂತ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ದೂರಿನಲ್ಲಿರುವ ಎಲ್ಲ ಆರೋಪಿತರನ್ನ ವಶಕ್ಕೆ ಪಡೆಯಬೇಕೆಂದು ಆಗ್ರಹಿಸುತ್ತಾರೆ. ಇದುವರೆಗೂ ಪ್ರಥಮ‌ ಆರೋಪಿ ಮಾಹಾಂತೇಶ್ ಚೊಳಚಗುಡ್ಡ ಮಾತ್ರ ಬಂಧನವಾಗಿದೆ. ಆದರೆ ಎರಡನೇ ಆರೋಪಿ ಹನಮಂತಪ್ಪ ಶಿಕ್ಕೇರಿ, ಮೂರನೇ ಆರೋಪಿ ರಾಜು ನಾಯ್ಕರ್, ನಾಲ್ಕನೇ ಆರೋಪಿ ಮುತ್ತಪ್ಪ ಶಿಕ್ಕೇರಿ, ಐದನೇ ಆರೋಪಿ ಶಂಕ್ರಪ್ಪ ಶಿಕ್ಕೇರಿ ಬಂಧನವಾಗಿಲ್ಲ. ಉಳಿದ ನಾಲ್ವರ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸುತ್ತಾರೆ. 11 ಗಂಟೆಗೆ ಪ್ರತಿಭಟನೆ ನಡೆಯುತ್ತದೆ. ಪ್ರತಿಭಟನೆಗೆ ವಿವಿಧ ಸಂಘಟನೆಗಳ ಸಾಥ್ ನೀಡುತ್ತವೆ.

ಇದನ್ನೂ ಓದಿ
Image
ಮಕ್ಕಳು ಪ್ರೌಢಾವಸ್ಥೆಗೆ ಬರುತ್ತಿದ್ದಂತೆ ಅಮ್ಮನ ಮಾತು ಕೇಳುವುದಿಲ್ಲ ಏಕೆ?
Image
ಮಂಗಳೂರಿನಲ್ಲಿ ನವೀಕರಣಕ್ಕಾಗಿ ದರ್ಗಾ ಕೆಡವಿದಾಗ ದೇವಸ್ಥಾನದ ಮಾದರಿ ಪತ್ತೆ ವಿಚಾರ; ಅಷ್ಟಮಂಗಲ ಪ್ರಶ್ನೆ ಮೊರೆ ಹೋದ ಹಿಂದೂ ಸಂಘಟನೆ
Image
ಮಕ್ಕಳ ವಿಚಾರದಲ್ಲಿ ತಾಯಂದಿರು ಇದನ್ನು ಕಡೆಗಣಿಸಬೇಡಿ, ಹಣಕಾಸಿನ ವಿಚಾರದಲ್ಲಂತು ಕಡೆಗಣನೆ ಬೇಡವೇ ಬೇಡ!
Image
Avesh Khan: ಆವೇಶ್ ಖಾನ್ ಎಸೆದ ಬೆಂಕಿ ಬೌಲಿಂಗ್​ಗೆ ಆರೆಂಜ್ ಕ್ಯಾಪ್ ಬ್ಯಾಟರ್ ಬಟ್ಲರ್ ಕ್ಲೀನ್ ಬೌಲ್ಡ್: ವಿಡಿಯೋ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:42 am, Mon, 16 May 22

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು