Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ಕು ದಿನದ ಪ್ರತಿಭಟನೆಗೆ ಕೊನೆಗೂ ಜಯ: ಆಶಾ ಕಾರ್ಯಕರ್ತೆಯರ ಬೇಡಿಕೆಗೆ ಸ್ಪಂದಿಸಿದ ಸರ್ಕಾರ

ಕರ್ನಾಟಕದ ಆಶಾ ಕಾರ್ಯಕರ್ತೆಯರ ನಾಲ್ಕು ದಿನಗಳ ಮುಷ್ಕರ ಮುಖ್ಯಮಂತ್ರಿಗಳೊಂದಿಗಿನ ಯಶಸ್ವಿ ಸಂಧಾನದ ನಂತರ ಅಂತ್ಯಗೊಂಡಿದೆ. ಸರ್ಕಾರವು ತಿಂಗಳಿಗೆ 10,000 ರೂ. ಗೌರವಧನ ನೀಡುವುದಾಗಿ ಹೇಳಿದ್ದು, ಇದರಲ್ಲಿ ರಾಜ್ಯ ಸರ್ಕಾರದಿಂದ 5000 ರೂ ಮತ್ತು ಕೇಂದ್ರ ಸರ್ಕಾರದಿಂದ 5000 ರೂ ಇರಲಿದೆ. ಪೋರ್ಟಲ್ ಸಮಸ್ಯೆ, ಆರೋಗ್ಯ ಸಮಸ್ಯೆಗಳಿಗೆ ಹೆಚ್ಚುವರಿ ರಜೆಗಳನ್ನು ಒದಗಿಸುವುದನ್ನು ಸಹ ಸರ್ಕಾರ ಭರವಸೆ ನೀಡಿದೆ.

ನಾಲ್ಕು ದಿನದ ಪ್ರತಿಭಟನೆಗೆ ಕೊನೆಗೂ ಜಯ: ಆಶಾ ಕಾರ್ಯಕರ್ತೆಯರ ಬೇಡಿಕೆಗೆ ಸ್ಪಂದಿಸಿದ ಸರ್ಕಾರ
ನಾಲ್ಕು ದಿನದ ಪ್ರತಿಭಟನೆಗೆ ಕೊನೆಗೂ ಜಯ: ಆಶಾ ಕಾರ್ಯಕರ್ತೆಯರ ಬೇಡಿಕೆ ಸ್ಪಂದಿಸಿದ ಸರ್ಕಾರ
Follow us
ಶಾಂತಮೂರ್ತಿ
| Updated By: ಗಂಗಾಧರ​ ಬ. ಸಾಬೋಜಿ

Updated on:Jan 10, 2025 | 9:36 PM

ಬೆಂಗಳೂರು, ಜನವರಿ 10: ಅವರೆಲ್ಲ ಕೋವಿಡ್ ಸಮಯದಲ್ಲಿ ಟೊಂಕಕಟ್ಟಿ ದುಡಿದವರು. ಇಡೀ ದೇಶವೇ ಲಾಕ್ ಡೌನ್​ನಲ್ಲಿ ಸ್ತಬ್ಧವಾಗಿದ್ದಾಗ ಜೀವದ ಹಂಗು ತೊರೆದು ಫೀಲ್ಡ್​ಗಿಳಿದು ದುಡಿದವರು. ಆದರೆ ಇದೀಗ ಸರ್ಕಾರದ ಭರವಸೆಗಳು ಬರೀ ಮಾತಾಗಿ ಉಳಿದಿದ್ದರಿಂದ ಕಳೆದ ನಾಲ್ಕು ದಿನಗಳಿಂದ ಪ್ರತಿಭಟನೆ ಹಾದಿ ಹಿಡಿದಿದ್ದರು. ಇತ್ತ ಆಶಾ ಕಾರ್ಯಕರ್ತೆಯರ (ASHA workers) ಪ್ರತಿಭಟನೆ ಬಗ್ಗೆ ಹಲವು ಭಾರೀ ಸಂಧಾನ ನಡೆಸಿ ಸುಸ್ತಾಗಿದ್ದ ಸರ್ಕಾರ, ಇದೀಗ ಆಶಾಕಾರ್ಯಕರ್ತೆಯರ ಮನವೊಲಿಸುವುದರಲ್ಲಿ ಕೊನೆಗೂ ಸಕ್ಸಸ್ ಆಗಿದೆ. ಇತ್ತ ಮೈಕೊರೆವ ಚಳಿ ಮಧ್ಯೆ ಪ್ರತಿಭಟಿಸಿದ್ದ ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ.

ನಾಲ್ಕು ದಿನದ ಪ್ರತಿಭಟನೆಗೆ ಕೊನೆಗೂ ಸಿಕ್ಕ ಜಯ

ಪ್ರತಿ ಗ್ರಾಮ, ಪ್ರತಿ ಜಿಲ್ಲೆಯಲ್ಲಿ ಆರೋಗ್ಯ ತಲುಪಿಸುವ ಕೆಲಸ ಮಾಡ್ತಿದ್ದ ಆಶಾಕಾರ್ಯಕರ್ತೆಯರು ವಿವಿಧ ಬೇಡಿಕೆಗಳನ್ನ ಮುಂದಿಟ್ಟುಕೊಂಡು ಕಳೆದ ನಾಲ್ಕು ದಿನಗಳಿಂದ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ನಡೆಸಿದ್ದರು. ಮೈ ಕೊರೆವ ಚಳಿಯಲ್ಲಿ ಬೇರೆ ಬೇರೆ ಊರುಗಳಿಂದ ಬಂದ ಆಶಾ ಕಾರ್ಯಕರ್ತೆಯರು ಸತತ ನಾಲ್ಕು ದಿನಗಳಿಂದ ಸಮಸ್ಯೆಗಳನ್ನ ಲೆಕ್ಕಿಸದೇ ಹೋರಾಟ ಮುಂದುವರಿಸಿದ್ದರು. ಸದ್ಯ ಇಷ್ಟು ದಿನ ಸಂಧಾನ ಮಾಡಿ ವಿಫಲವಾಗಿದ್ದ ಸರ್ಕಾರ, ಇದೀಗ ಕೊನೆಗೂ ಆಶಾ ಕಾರ್ಯಕರ್ತೆಯರ ಮನವೊಲಿಸೋದರಲ್ಲಿ ಸಕ್ಸಸ್ ಆಗಿದೆ. ಸದ್ಯ ಆಶಾಕಾರ್ಯಕರ್ತೆಯರ ಬೇಡಿಕೆಗಳಲ್ಲಿ ಒಂದಾಗಿದ್ದ ಗೌರವಧನ ಹೆಚ್ಚಳಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದ್ದು, 15 ಸಾವಿರ ರೂ. ಏರಿಕೆಗೆ ಇದ್ದ ಡಿಮ್ಯಾಂಡ್​ನಲ್ಲಿ ಸದ್ಯ 10 ಸಾವಿರ ರೂ. ಕೊಡುವುದಕ್ಕೆ ಸರ್ಕಾರ ಓಕೆ ಅಂದಿರೋದು ಆಶಾಕಾರ್ಯಕರ್ತೆಯರಿಗೆ ಜಯ ಸಿಕ್ಕಂತಾಗಿದೆ.

ಇದನ್ನೂ ಓದಿ: ಪ್ರಯಾಣಿಕರ ಗಮನಕ್ಕೆ: ಬೆಂಗಳೂರು ನಮ್ಮ ಮೆಟ್ರೋ ಸಂಚಾರ ಸಮಯ ಬದಲಾವಣೆ

ಇನ್ನು ಕಳೆದ ಮೂರ್ನಾಲ್ಕು ದಿನಗಳಿಂದ ಫ್ರೀಡಂ ಪಾರ್ಕ್​​ನಲ್ಲಿ ಬೀಡುಬಿಟ್ಟಿದ್ದ ಆಶಾ ಕಾರ್ಯಕರ್ತೆಯರು, ಮೂಲ ಸೌಕರ್ಯ ಗಳಿಲ್ಲದೇ ಬಳಲಿ ಬೆಂಡಾಗಿ ಹೋಗಿದ್ದರು. ಅಲ್ಲದೇ ಪ್ರತಿಭಟನೆಗೆ ಬಂದಿದ್ದ ಹಲವು ಮಹಿಳೆಯರ ಆರೋಗ್ಯ ಕೂಡ ಹದಗೆಡುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಸದ್ಯ ಇದೀಗ ಕೊನೆಕ್ಷಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಆಶಾಕಾರ್ಯಕರ್ತೆಯರ ಮುಖಂಡರ ಸಂಧಾನ ಸಕ್ಸಸ್ ಆಗಿದ್ದು, ಆಶಾ ಕಾರ್ಯಕರ್ತೆಯರಿಗೆ ಸಂತಸ ತಂದಿಟ್ಟಿದೆ. ಸದ್ಯ ಗೌರವಧನವನ್ನ 10 ಸಾವಿರ ರೂಪಾಯಿ ನೀಡುವಂತೆ ಸೂಚನೆ ನೀಡಿರೋ ಸರ್ಕಾರ, ಇತರೆ ಬೇಡಿಕೆಗಳನ್ನ ಪರಿಶೀಲಿಸಿ ಜಾರಿಗೊಳಿಸುವುದಾಗಿ ಭರವಸೆ ನೀಡಿದೆ.

ಇತ್ತ ಆಶಾ ಕಾರ್ಯಕರ್ತೆಯರ ಒಂದಷ್ಟು ಬೇಡಿಕೆ ಮಾತ್ರ ಈಡೇರಿರುವ ಸಂತಸ ಮನೆ ಮಾಡಿದರೆ, ಇತ್ತ ಆಶಾ ಕಾರ್ಯಕರ್ತೆಯರು ಇನ್ನೂ ಸಾಲು ಸಾಲು ಸಮಸ್ಯೆಗಳನ್ನ ಅನುಭವಿಸ್ತಿದ್ದು, ಎಲ್ಲಾ ಸಮಸ್ಯೆಗಳನ್ನ ಬಗೆಹರಿಸುವ ಬಗ್ಗೆ ಸರ್ಕಾರ ಗಮನ ಹರಿಸಬೇಕು ಅಂತಾ ಆಶಾ ಕಾರ್ಯಕರ್ತೆಯರು ಒತ್ತಾಯಿಸಿದ್ದಾರೆ. ಇಡಿಗಂಟು, ಮೊಬೈಲ್ ವಿತರಣೆ ಸೇರಿ ಇತರೆ ಡಿಮ್ಯಾಂಡ್​ಗಳನ್ನ ಕೂಡ ಸರ್ಕಾರ ಆದಷ್ಟು ಬೇಗ ಪರಿಹಾರ ಮಾಡಲಿ ಅನ್ನೋ ಒತ್ತಾಯ ಕೇಳಿಬರುತ್ತಿದೆ.

ಇದನ್ನೂ ಓದಿ: ಬೆಂಗಳೂರಿನ ಟನಲ್ ರಸ್ತೆ ಯೋಜನೆಗೆ ಅಪಸ್ವರ: ಏಕೆ? ಇಲ್ಲಿದೆ ಮಾಹಿತಿ

ಒಟ್ಟಿನಲ್ಲಿ ಕಳೆದ ಮೂರು ದಿನಗಳಿಂದ ಚಳಿಯನ್ನೂ ಲೆಕ್ಕಿಸದೇ ಪ್ರತಿಭಟನೆಗಿಳಿದಿದ್ದ ಆಶಾ ಕಾರ್ಯಕರ್ತೆಯರ ಡಿಮ್ಯಾಂಡ್​ಗೆ ಕೊನೆಗೂ ಸರ್ಕಾರ ಕಿವಿಗೊಡ್ಡಿದ್ದು, ಇತ್ತ ರಾಜ್ಯ ಸರ್ಕಾರದ ಮುಂದೆ ಆಶಾ ಕಾರ್ಯಕರ್ತೆಯರು ಇಟ್ಟಿರುವ ಮತ್ತಷ್ಟು ಡಿಮ್ಯಾಂಡ್​ಗಳು ಜಾರಿಗೆ ಬರುತ್ತ ಅಥವಾ ಮತ್ತೆ ಹೋರಾಟದ ಕಿಡಿ ಹೊತ್ತಿಕೊಳ್ಳುತ್ತಾ ಅನ್ನೋದನ್ನ ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:35 pm, Fri, 10 January 25

ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ
ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ
ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ಸತೀಶ್ ಜಾರಕಿಹೊಳಿ ದೆಹಲಿಗೆ ಯಾಕೆ ಹೋಗಿದ್ದು ಅಂತ ಗೊತ್ತಿಲ್ಲ: ರಾಜಣ್ಣ
ಸತೀಶ್ ಜಾರಕಿಹೊಳಿ ದೆಹಲಿಗೆ ಯಾಕೆ ಹೋಗಿದ್ದು ಅಂತ ಗೊತ್ತಿಲ್ಲ: ರಾಜಣ್ಣ
ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ ಪ್ರತಿಭಟನೆಕಾರರು
ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ ಪ್ರತಿಭಟನೆಕಾರರು
ನ್ಯಾಯಾಧೀಶರ ಹನಿಟ್ರ್ಯಾಪ್​ಗೆ​ ಯತ್ನ? ರಾಜಣ್ಣ ಸ್ಪಷ್ಟನೆ
ನ್ಯಾಯಾಧೀಶರ ಹನಿಟ್ರ್ಯಾಪ್​ಗೆ​ ಯತ್ನ? ರಾಜಣ್ಣ ಸ್ಪಷ್ಟನೆ
ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ಳು: ರಾಜಣ್ಣ
ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ಳು: ರಾಜಣ್ಣ
ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್
ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ