AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಟೈಲ್ಸ್ ಕೆಲಸಕ್ಕೆ ಬಂದು ಜೈನ್ ಮಂದಿರದಲ್ಲಿ ಕಳ್ಳತನ ಮಾಡಿದ್ದ ಆರೊಪಿಗಳು ಅರೆಸ್ಟ್

ಜೈನ್ ಮಂದಿರದಲ್ಲಿ ಟೈಲ್ಸ್ ಕೆಲಸ ಮಾಡಲು ಬಂದಿದ್ದ ವ್ಯಕ್ತಿಯೇ ಕಳ್ಳತನಕ್ಕೆ ಹೊಂಚು ಹಾಕಿದ್ದು ಟೈಲ್ಸ್ ಕೆಲಸ ಮುಗಿದ ಎರಡು ತಿಂಗಳು ನಂತರ ಸ್ನೇಹಿತರೊಂದಿಗೆ ಕಳ್ಳತನ ಮಾಡಿದ್ದಾರೆ. 14 ಕೆಜಿ ದೇವರ ಬೆಳ್ಳಿಯ ಆಭರಣ, ದೇವಾಲಯದ ವಸ್ತುಗಳ ಕಳ್ಳತನವಾಗಿತ್ತು.

ಬೆಂಗಳೂರು: ಟೈಲ್ಸ್ ಕೆಲಸಕ್ಕೆ ಬಂದು ಜೈನ್ ಮಂದಿರದಲ್ಲಿ ಕಳ್ಳತನ ಮಾಡಿದ್ದ ಆರೊಪಿಗಳು ಅರೆಸ್ಟ್
ಕಳ್ಳತನ ಮಾಡಿ ಸಾಗಿಸುತ್ತಿರುವ ಸಿಸಿ ಟಿವಿ ದೃಶ್ಯ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: ಆಯೇಷಾ ಬಾನು|

Updated on: Oct 10, 2023 | 2:47 PM

Share

ಬೆಂಗಳೂರು, ಅ.10: ಬೆಂಗಳೂರಿನ ಅಶೋಕ್​​ನಗರದ ಜೈನ್ ಮಂದಿರದಲ್ಲಿ ನಡೆದಿದ್ದ ಕಳ್ಳತನ (Theft) ಪ್ರಕರಣದ ಆರೋಪಿಗಳನ್ನು ಪೊಲೀಸರು (Ashok Nagar Police) ಬಂಧಿಸಿದ್ದಾರೆ. ಜೈನ್ ಮಂದಿರದಲ್ಲಿ ಟೈಲ್ಸ್ ಕೆಲಸ ಮಾಡಲು ಬಂದಿದ್ದ ವ್ಯಕ್ತಿಯೇ ಕಳ್ಳತನಕ್ಕೆ ಹೊಂಚು ಹಾಕಿದ್ದು ಟೈಲ್ಸ್ ಕೆಲಸ ಮುಗಿದ ಎರಡು ತಿಂಗಳು ನಂತರ ಸ್ನೇಹಿತರೊಂದಿಗೆ ಕಳ್ಳತನ ಮಾಡಿದ್ದಾರೆ. 14 ಕೆಜಿ ದೇವರ ಬೆಳ್ಳಿಯ ಆಭರಣ, ದೇವಾಲಯದ ವಸ್ತುಗಳ ಕಳ್ಳತನವಾಗಿತ್ತು. ಸದ್ಯ 6 ಜನ ಆರೋಪಿಗಳನ್ನು ಅಶೋಕ್​​ನಗರದ ಪೊಲೀಸರು ಬಂಧಿಸಿದ್ದಾರೆ.

10 ರೂ ಎಸೆದು 1 ಲಕ್ಷ ದೋಚಿದ ಖದೀಮ

ರಸ್ತೆಗೆ 10 ರೂ. ನೋಟು ಬಿಸಾಡಿ 1 ಲಕ್ಷ ಹಣವನ್ನ ದುಷ್ಕರ್ಮಿ ಎಗರಿಸಿದ್ದಾನೆ. ರಾಮನಗರ ಜಿಲ್ಲೆಯ ಚನ್ನಪಟ್ಟಣದ ಕೆನರಾ ಬ್ಯಾಂಕ್ ಬಳಿ ಬ್ಯಾಂಕ್​ನಿಂದ ಹಣ ಡ್ರಾಮಾಡಿಕೊಂಡು ಬರುತ್ತಿದ್ದ ವೇಳೆ ಖದೀಮ ಕೈಚಳಕ ತೋರಿಸಿದ್ದಾನೆ. ಮಂಗಳವಾರಪೇಟೆ ನಿವಾಸಿ ರಾಘವೇಂದ್ರ ಹಣ ಡ್ರಾ ಮಾಡಿ ಬರುತ್ತಿದ್ದರು. ಈ ವೇಳೆ ರಸ್ತೆಗೆ 10 ರೂ. ನೋಟು ಬಿಸಾಡಿ ಹಣ ಬಿದ್ದಿದ್ದೆ ಅಂತಾ ದುಷ್ಕರ್ಮಿ ಹೇಳಿದ್ದ. 1 ಲಕ್ಷ ಹಣವಿದ್ದ ಕವರ್​ ಬೈಕ್ ಬಳಿ ಬಿಟ್ಟು 10 ರೂ. ಎತ್ತಿಕೊಳ್ಳಲು ರಾಘವೇಂದ್ರ ಮುಂದಾಗಿದ್ದರು. ಈ ವೇಳೆ ಕ್ಷಣಾರ್ಧದಲ್ಲಿ 1 ಲಕ್ಷ ಹಣವಿದ್ದ ಕವರ್ ಎಗರಿಸಿ ದುಷ್ಕರ್ಮಿ ಪರಾರಿಯಾಗಿದ್ದಾನೆ. ಖತರ್ನಾಕ್ ಕಳ್ಳನ ಕೈಚಳಕ ಬ್ಯಾಂಕ್ ಮುಂದಿನ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ಡ್ರಗ್ಸ್​​​ನಷ್ಟೇ ಮೊಬೈಲ್ ಕೂಡ ದೊಡ್ಡ ಅಡಿಕ್ಷನ್; ಮನೋವೈದ್ಯರು ಹೇಳೋದೇನು?

ಇಂಡಿಯನ್ ಮಾರ್ಷಲ್ ತಳಿಯ ದೊಡ್ಡ ಗ್ರಾತದ ಮೊಸಳೆ ಪ್ರತ್ಯಕ್ಷ

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮದಲ್ಲಿ ಬೃಹತ್ ಗ್ರಾತದ ಮೊಸಳೆ ಪ್ರತ್ಯಕ್ಷವಾಗಿದೆ. ಬಿಸಿಲು ಕಾಯಲು ಬಂಡೆ ಮೇಲೆ ಬಂದು ಮಲಗಿದ ಬೃಹತ್ ಗಾತ್ರದ ಮೊಸಳೆ ನೋಡಿ ಜನ ಅಚ್ಚರಿ ಪಟ್ಟಿದ್ದಾರೆ. ಮೊಸಳೆ ಪಕ್ಕದಲ್ಲಿ ಕೊಕ್ಕರೆಗಳ ಹಿಂಡು ಕಾಣಿಸಿಕೊಂಡಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!