AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಕಿ ಕೆರೆ ಸದ್ಬಳಕೆ ಬಗ್ಗೆ ಅರಿವು ಮೂಡಿಸುತ್ತಿರುವುದಕ್ಕೆ ಧನ್ಯವಾದ: ಡಿಕೆ ಶಿವಕುಮಾರ್​ ವಾಕಿಂಗ್ ಅಭ್ಯಾಸಕ್ಕೆ ಅಶ್ವತ್ಥ್ ನಾರಾಯಣ ಟಾಂಗ್

ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ ಬಳಿ ಡಿಕೆಶಿ ವಾಕಿಂಗ್ ಪ್ರಾಕ್ಟಿಸ್​ ಮಾಡುತ್ತಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಸಚಿವ ಅಶ್ವತ್ಥ್ ನಾರಾಯಣ ಟಾಂಗ್ ಕೊಟ್ಟಿದ್ದಾರೆ.

ಸ್ಯಾಂಕಿ ಕೆರೆ ಸದ್ಬಳಕೆ ಬಗ್ಗೆ ಅರಿವು ಮೂಡಿಸುತ್ತಿರುವುದಕ್ಕೆ ಧನ್ಯವಾದ: ಡಿಕೆ ಶಿವಕುಮಾರ್​ ವಾಕಿಂಗ್ ಅಭ್ಯಾಸಕ್ಕೆ ಅಶ್ವತ್ಥ್ ನಾರಾಯಣ ಟಾಂಗ್
ವಾಕಿಂಗ್ ಮಾಡುತ್ತಿರುವ ಡಿಕೆ ಶಿವಕುಮಾರ್
TV9 Web
| Edited By: |

Updated on: Jan 01, 2022 | 6:51 PM

Share

ಬೆಂಗಳೂರು: ಸ್ಯಾಂಕಿ ಕೆರೆ ಸದ್ಬಳಕೆ ಬಗ್ಗೆ ಅರಿವು ಮೂಡಿಸುತ್ತಿರುವುದಕ್ಕೆ ಧನ್ಯವಾದ. ಡಿ.ಕೆ. ಶಿವಕುಮಾರ್​ ಅವರೇ ಹೊಸ ವರ್ಷದ ಶುಭಾಶಯಗಳು. ಮಲ್ಲೇಶ್ವರಂ ಕ್ಷೇತ್ರ ವ್ಯಾಪ್ತಿಯ ಸ್ಯಾಂಕಿ ಕೆರೆ ಸದ್ಬಳಕೆ ಬಗ್ಗೆ ಅರಿವು ಮೂಡಿಸುತ್ತಿರುವುದಕ್ಕೆ ನನ್ನ ಕಡೆಯಿಂದ ಧನ್ಯವಾದಗಳು. ವಾಯು ವಿಹಾರಿಗಳನ್ನು ಗಮನಿಸಿ ಸ್ವಚ್ಛ, ಸುಂದರವಾಗಿಟ್ಟಿದ್ದೇವೆ. ಈ ವಾತಾವರಣ ಆಹ್ಲಾದಕರವಾಗಿರುತ್ತೆಂದು ಭಾವಿಸುತ್ತೇನೆ ಎಂದು ಟ್ವೀಟ್ ಮೂಲಕ ಸಚಿವ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ಗೆ ಟಾಂಗ್ ಕೊಟ್ಟಿದ್ದಾರೆ.

ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್‌ ಪಾದಯಾತ್ರೆ ಕೈಗೊಳ್ಳಲಿದೆ. ಪಾದಯಾತ್ರೆಗಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ವಾಕಿಂಗ್ ಪ್ರಾಕ್ಟಿಸ್​ ಮಾಡುತ್ತಿದ್ದಾರೆ. ಡಿ.ಕೆ. ಶಿವಕುಮಾರ್ ಪ್ರತಿನಿತ್ಯ 6- 7 ಕಿ.ಮೀ. ನಡೆಯುತ್ತಿರುವ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿದ್ದರು. ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ ಬಳಿ ಡಿಕೆಶಿ ವಾಕಿಂಗ್ ಪ್ರಾಕ್ಟಿಸ್​ ಮಾಡುತ್ತಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಸಚಿವ ಅಶ್ವತ್ಥ್ ನಾರಾಯಣ ಟಾಂಗ್ ಕೊಟ್ಟಿದ್ದಾರೆ.

ಕಾಂಗ್ರೆಸ್ ಪಾದಯಾತ್ರೆ ಹಿನ್ನೆಲೆ ನಾಳೆ ಚಾಮರಾಜನಗರದಲ್ಲಿ ಕಾಂಗ್ರೆಸ್ ಪೂರ್ವಭಾವಿ ಸಭೆ ಮೇಕೆದಾಟು ಯೋಜನೆಗೆ ಕಾಂಗ್ರೆಸ್ ಪಾದಯಾತ್ರೆ ಹಿನ್ನೆಲೆ ನಾಳೆ ಚಾಮರಾಜನಗರದಲ್ಲಿ ಕಾಂಗ್ರೆಸ್ ಪೂರ್ವಭಾವಿ ಸಭೆ ನಡೆಸಲಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸಭೆಯಲ್ಲಿ ಭಾಗಿ ಆಗಲಿದ್ದಾರೆ. ಹಳೇ ಖಾಸಗಿ ಬಸ್ ನಿಲ್ದಾಣದ ಬಳಿ ಕಾಂಗ್ರೆಸ್ ಸಮಾವೇಶ ನಡೆಯಲಿದೆ.

ಇದನ್ನೂ ಓದಿ: ಅಶೋಕಣ್ಣನಿಗೆ ಮೇಕೆ, ಕುರಿ, ನಾಟಿಕೋಳಿ ರುಚಿ ಚೆನ್ನಾಗಿ ಗೊತ್ತಿದೆ, ಬೆಂಗಳೂರು ಬಗ್ಗೆ ಕಾಳಜಿ ಇಲ್ಲ; ಡಿಕೆ ಶಿವಕುಮಾರ್

ಇದನ್ನೂ ಓದಿ: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆಗೆ ಕಾಂಗ್ರೆಸ್ ಭರದ ಸಿದ್ಧತೆ: ಕಾಂಗ್ರೆಸ್​​ ರಾಜಕೀಯ ಮಾಡುತ್ತಿದೆ ಎಂದ ಎಸ್​ ಮುನಿಸ್ವಾಮಿ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ