AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಕಂಬಳ ಕೆರೆಗೆ ಅಶ್ವಿನಿ ಪುನಿತ್​ ರಾಜಕುಮಾರ್​​ರಿಂದ ಚಾಲನೆ: ಅಶೋಕ್ ರೈ

ಇತಿಹಾಸದಲ್ಲೇ ಮೊದಲ ಬಾರಿಗೆ ರಾಜಧಾನಿ ಬೆಂಗಳೂರಿನಲ್ಲಿ ಕಂಬಳ ಪಂದ್ಯ ನಡೆಸಲಾಗುತ್ತಿದೆ. ದಿನಾಂಕ 25 ಮತ್ತು 26 ರಂದು ಎರಡು ದಿನ ಅರಮನೆ ಮೈದಾನದಲ್ಲಿ ಕಂಬಳ ಪಂದ್ಯ ನಡೆಯಲಿದೆ. ಕಂಬಳ ವೀಕ್ಷಣೆಗೆ ಲಕ್ಷಾಂತರ ಜನರು ಸೇರಲಿದ್ದಾರೆ. ಈಗಾಗಲೆ ತಯಾರಿ ಪೂರ್ಣಗೊಂಡಿದೆ. ಕಂಬಳ ಕುರಿತಾಗಿ ಬೆಂಗಳೂರು ಕಂಬಳ ಸಮಿತಿಯ ಅಧ್ಯಕ್ಷ ಅಶೋಕ್ ರೈ ಸುದ್ದಿಗೋಷ್ಠಿ ನಡೆಸಿ ಹಲವು ವಿಚಾರ ತಿಳಿಸಿದರು.

ಬೆಂಗಳೂರು ಕಂಬಳ ಕೆರೆಗೆ ಅಶ್ವಿನಿ ಪುನಿತ್​ ರಾಜಕುಮಾರ್​​ರಿಂದ ಚಾಲನೆ: ಅಶೋಕ್ ರೈ
ಅಶ್ವಿನಿ ಪುನಿತ್​​ ರಾಜಕುಮಾರ್​, ಕಂಬಳ
Poornima Agali Nagaraj
| Edited By: |

Updated on:Nov 25, 2023 | 6:52 AM

Share

ಬೆಂಗಳೂರು ನ.24: ಕರಾವಳಿ ಭಾಗದ ಎಲ್ಲಾ ಸಂಘ-ಸಂಸ್ಥೆ, ಜಾತಿಯವರ ಜೊತೆ ಸಮಾಲೋಚನೆ ನಡೆಸಿ ಒಗ್ಗಟ್ಟಿನಿಂದ ಬೆಂಗಳೂರಿನಲ್ಲಿ (Bengaluru) ಕಂಬಳ (Kambal) ನಡೆಸಬೇಕು ಎಂಬ ತೀರ್ಮಾನ ಮಾಡಿದ್ದೇವೆ. ಇದು ನಮ್ಮ ಸಂಕಲ್ಪವೂ ಆಗಿದೆ. ಶನಿವಾರ (ನ.25)ರ ಬೆಳಿಗ್ಗೆ 10.30 ಕ್ಕೆ ಕಾರ್ಯಕ್ರಮ ಆರಂಭವಾಗುತ್ತದೆ. ಪವರ್​ ಸ್ಟಾರ್​ ಪುನೀತ್ ರಾಜಕುಮಾರ್ (Puneeth Rajkumar) ಅವರ ಪತ್ನಿ ಅಶ್ವಿನಿ ಪುನಿತ್​ ರಾಜಕುಮಾರ್ (Ashwini Puneeth Rajkumar) ಅವರು ಕಂಬಳ ಕೆರೆಗೆ​ ಚಾಲನೆ ನೀಡಲಿದ್ದಾರೆ. ಸಂಜೆ 5.30 ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಂಪುಟ ಸಚಿವರು ಬರುತ್ತಾರೆ ಎಂದು ಬೆಂಗಳೂರು ಕಂಬಳ ಸಮಿತಿಯ ಅಧ್ಯಕ್ಷ ಹಾಗೂ ​ಶಾಸಕ ಅಶೋಕ್ ರೈ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಸಾಯಂಕಾಲ ಸಭಾ ಕಾರ್ಯಕ್ರಮ ನಡೆಯುತ್ತೆ. ಶನಿವಾರ ಬೆಳಿಗ್ಗೆ 11 ಗಂಟೆ ಬಳಿಕ ನಟ ನಟಿಯರು ಭಾಗಿಯಾಗುತ್ತಾರೆ. ರವಿವಾರ (ನ.26) ರಂದು ಸಂಜೆ 5.30ಕ್ಕೆ ಕಂಬಳ ಕಾರ್ಯಕ್ರಮ ಮುಗಿಯುತ್ತೆ ಎಂದು ತಿಳಿಸಿದರು.

ಇದನ್ನೂ ಓದಿ: ಅಪ್ಪು ಸ್ಮರಣೆಯಲ್ಲಿ ನಡೆಯಲಿರುವ ‘ರಾಜ್ ಕಪ್’ಗೆ ಚಾಲನೆ ನೀಡಿದ ಅಶ್ವಿನಿ

ಕಂಬಳ 6 ಸೆಗ್ಮೆಂಟ್​ನಲ್ಲಿ ನಡೆಯುತ್ತೆ. ಕಂಬಳ ಇತಿಹಾಸದಲ್ಲಿ ತೃತೀಯ ಬಹುಮಾನ ಇರಲಿಲ್ಲ. ಈ ಸಲ ಮೂರನೇ ಸ್ಥಾನಕ್ಕೂ ಕೂಡ 4 ಗ್ರಾಂ ಚಿನ್ನ 25 ಸಾವಿರ ಬಹುಮಾನ ನೀಡಲು ನಿರ್ಧರಿಸಿದ್ದೇವೆ. ಮೊದಲನೇ ಬಹುಮಾನ 16 ಗ್ರಾಂ ಚಿನ್ನ 1 ಲಕ್ಷ ನಗದು ನೀಡಲಾಗುತ್ತೆ. ಎರಡನೇ ಬಹುಮಾನ 8 ಗ್ರಾಂ ಚಿನ್ನ 50 ಸಾವಿರ ನಗದನ್ನ ನೀಡಲಾಗುತ್ತೆ. ಕೋಣ ಓಡಿಸಿ ವಿಜಯಶಾಲಿ ಆದವರಿಗೆ ಕೂಡ ಬಹುಮಾನ ಇದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕಂಬಳ ಸಮಿತಿಯ ಗೌರವಾಧ್ಯಕ್ಷ ಪ್ರಕಾಶ್ ಶೆಟ್ಟಿ, ಅಧ್ಯಕ್ಷ, ಶಾಸಕ ಅಶೋಕ್ ಕುಮಾರ್ ರೈ, ಕಂಬಳ ಇತಿಹಾಸ ತಜ್ಞ ಗುಣುಪಾಲ, ಕಡಂಬ ಭಾಗಿಯಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:23 pm, Fri, 24 November 23

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು