AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕದ್ದ ಮಾಲಲ್ಲಿ ದೇವರಿಗೂ ಪಾಲು ಕೊಡ್ತಿದ್ದ ಖತರ್ನಾಕ್​ ಕಳ್ಳ!: 20 ವರ್ಷಗಳಿಂದ ರಾಬರಿಯೇ ಫುಲ್​ಟೈಮ್​ ಕೆಲಸ

ಬೆಂಗಳೂರು ಪೊಲೀಸರು ಐದು ಜಿಲ್ಲೆಗಳ ನಟೋರಿಯಸ್ ಕಳ್ಳ ಅಸ್ಲಾಂ ಪಾಷಾನನ್ನು ಬಂಧಿಸಿದ್ದಾರೆ. 150ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳಲ್ಲಿ ಬೇಕಾಗಿದ್ದ ಈತ, ಐಷಾರಾಮಿ ಮನೆಗಳಲ್ಲಿ ಚಿನ್ನಾಭರಣ ಕದಿಯುತ್ತಿದ್ದ. ಕದ್ದ ಮಾಲಿನಲ್ಲಿ ಅಜ್ಮೀರ್ ದರ್ಗಾ ಹುಂಡಿಗೂ ಅರ್ಪಿಸಿ, ಉಳಿದ ಹಣದಲ್ಲಿ ಮೋಜು ಮಾಡುತ್ತಿದ್ದ. 20 ವರ್ಷಗಳಿಂದ ಸಕ್ರಿಯನಾಗಿದ್ದ ಈತನಿಂದ 22 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ.

ಕದ್ದ ಮಾಲಲ್ಲಿ ದೇವರಿಗೂ ಪಾಲು ಕೊಡ್ತಿದ್ದ ಖತರ್ನಾಕ್​ ಕಳ್ಳ!: 20 ವರ್ಷಗಳಿಂದ ರಾಬರಿಯೇ ಫುಲ್​ಟೈಮ್​ ಕೆಲಸ
ಬಂಧಿತ ಆರೋಪಿ
Shivaprasad B
| Edited By: |

Updated on: Nov 06, 2025 | 10:58 AM

Share

ಬೆಂಗಳೂರು, ನವೆಂಬರ್​ 06: ಐದು ಜಿಲ್ಲೆಗಳ ಪೊಲೀಸರಿಗೆ ಬೇಕಾಗಿದ್ದ ನಟೋರಿಯಸ್ ಕಳ್ಳನನ್ನು ಬೆಂಗಳೂರಿನ ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ. ಅಸ್ಲಾಂ ಪಾಷಾ ಅರೆಸ್ಟ್​ ಆದ ಆರೋಪಿಯಾಗಿದ್ದು, ಈತನ ಮೇಲೆ 150 ಕಳ್ಳತನ ಕೇಸ್​ಗಳಿವೆ. ಹಗಲುವೇಳೆ ಐಷಾರಾಮಿ ಮನೆಗಳನ್ನ ಗುರುತಿಸುತ್ತಿದ್ದ ಆರೋಪಿ ರಾತ್ರಿವೇಳೆ ಕೈಚಳಕ ತೋರಿಸುತ್ತಿದ್ದ. ಬೆಂಗಳೂರು, ಬೆಂಗಳೂರು ಗ್ರಾಮಾಂತರ ಶಿವಮೊಗ್ಗ ಹಾವೇರಿ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಈತ ಮನೆಗಳ್ಳತನ ಮಾಡಿದ್ದ.

ಕಿಟಕಿ ತೆರೆದು ಮಹಿಳೆಯರು ನಿದ್ರೆಗೆ ಜಾರಿದ್ರೆ ಕುತ್ತಿಗೆಯಲ್ಲಿರೋ ಸರ ಎಗರಿಸಿ ಎಸ್ಕೇಪ್ ಆಗುತ್ತಿದ್ದ ಈತ, ಕಿಟಕಿ ಪಕ್ಕದಲ್ಲಿ ಮೇನ್ ಡೋರ್ ಇದ್ರೆ ಕಿಟಕಿ ಗ್ಲಾಸ್ ಒಡೆದು ಡೋರ್ ಓಪನ್ ಮಾಡಿ ಕದಿಯುತ್ತಿದ್ದ. ಹಾಲು ಪೇಪರ್ ಮನೆಬಳಿ ಬಿದ್ದಿದ್ದು ಮೇನ್ ಡೋರ್ ಲಾಕ್ ಆಗಿರುವ ಮನೆಗಳು, ರಾತ್ರಿ ವೇಳೆ ಲೈಟ್​ ಆನ್​ ಆಗಿರದ ಮನೆಗಳು ಸೇರಿ ಗೇಟ್​ ಲಾಕ್​ ಆಗಿದ್ದ ಮನೆಗಳನ್ನೇ ಟಾಗರ್ಗಟ್​ ಮಾಡಿ ಈತ ಕೈಚಳಕ ತೋರುತ್ತಿದ್ದ. ಇನ್ನು ಒಂದು ಠಾಣೆ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿದ್ರೆ ಆ ಕೇಸ್ ಹಳೇದಾಗೋವರೆಗೂ ಮತ್ತೆ ಆ ಕಡೆ ಈತ ಹೋಗುತ್ತಿರಲಿಲ್ಲ. ಕನಿಷ್ಟ ಒಂದು ವರ್ಷವಾದರೂ ಆ ಏರಿಯಾದಿಂದ ಅಂತರ ಕಾಯ್ದುಕೊಳ್ಳುತ್ತಿದ್ದ ಎನ್ನಲಾಗಿದೆ.

ಇದನ್ನೂ ಓದಿ: ತಿಂಗಳಿನಿಂದ ಪೊಲೀಸ್​ ಠಾಣೆಯಲ್ಲೇ ನಿಂತಿದ್ದ ಕಾರಲ್ಲಿತ್ತು ಚಿನ್ನ, ಬೆಳ್ಳಿ ಮತ್ತು ಕಂತೆ ಕಂತೆ ಹಣ!

ಕದ್ದ ಮಾಲ್​ನಲ್ಲಿ ದೇವರಿಗೂ ಪಾಲು ಕೊಡ್ತಿದ್ದ ಅಸ್ಲಾಂ ಪಾಷಾ, ಪ್ರತೀ ಬಾರಿ ಕಳ್ಳತನ ಮಾಡಿದಾಗಲೂ ಅಜ್ಮೀರ್ ದರ್ಗಾಗೆ ಹೋಗಿ ಹುಂಡಿಗೆ ಹಣ ಹಾಕಿ ಬರುತ್ತಿದ್ದ. ಅಸ್ಲಾಂ ತಂದೆ-ತಾಯಿಗೆ ಒಟ್ಟು ಏಳು ಜನ ಮಕ್ಕಳು. ಆ ಪೈಕಿ ಮೂವರದ್ದು ಕಳ್ಳತನವೇ ಕೆಲಸ. ಕಳೆದ 20 ವರ್ಷಗಳಿಂದ ಕಳ್ಳತನ ಮಾಡಿಕೊಂಡು ಬರುತ್ತಿರುವ ಅಸ್ಲಾಂ ಪಾಷಾ, ಅಜ್ಮೀರ್ ದರ್ಗಾಗೆ ಹೋಗಿ ಪ್ರಾರ್ಥನೆ ಸಲ್ಲಿಸಿ ಬಳಿಕ ಮೋಜು-ಮಸ್ತಿಗಾಗಿ ಗೋವಾಕ್ಕೆ ತೆರಳುತ್ತಿದ್ದ. ಬಳಿಕ ಉಳಿದ ಹಣವನ್ನ ಕುಟುಂಬಸ್ಥರಿಗೂ ನೀಡುತ್ತಿದ್ದ. ಆ ಬಳಿಕವೇ ಮತ್ತೊಂದು ಕಳ್ಳತನಕ್ಕೆ ಕೈ ಹಾಕುತ್ತಿದ್ದ ಎಂಬ ವಿಚಾರ ಪೊಲೀಸರ ತನಿಖೆವೇಳೆ ಗೊತ್ತಾಗಿದೆ. ವಿದ್ಯಾರಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ಚಿನ್ನಾಭರಣ ಎಗರಿಸಿರುವ ಪ್ರಕರಣ ಸಂಬಂಧ ಸದ್ಯ ಲಾಕ್ ಆಗಿರುವ ಆರೋಪಿಯಿಂದ 22 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದ್ದು, ಪೊಲೀಸರಿಂದ ತನಿಖೆ ಮುಂದುವರಿದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್