AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಹಮ್ಮದ್ ನಲಪಾಡ್ ಬೆಂಬಲಿಗರಿಂದ ಕ್ಲಬ್​ನಲ್ಲಿ ಪಾರ್ಟಿ ವೇಳೆ ಹಲ್ಲೆ ಆರೋಪ; ಅಂತಹ ಘಟನೆ ನಡೆದಿಲ್ಲ ಎಂದ ನಲಪಾಡ್

ಅಲ್ಲಿ ಯಾವುದೇ ರೀತಿಯ ಹಲ್ಲೆ ಘಟನೆ ನಡೆದಿಲ್ಲ. ಬೇಕಿದ್ದರೆ ರೆಸಾರ್ಟ್ ಸಿಸಿ ಕ್ಯಾಮರಾ ಪರಿಶೀಲಿಸಲಿ. ಸಿದ್ದು ಹಳ್ಳೇಗೌಡ, ನಾನು ಚೆನ್ನಾಗಿಯೇ ಇದ್ದೇವೆ ಎಂದು ಈ ಘಟನೆಯ ಬಗ್ಗೆ ಬೆಂಗಳೂರಿನಲ್ಲಿ ಮೊಹಮ್ಮದ್ ನಲಪಾಡ್ ಹೇಳಿಕೆ ನೀಡಿದ್ದಾರೆ.

ಮೊಹಮ್ಮದ್ ನಲಪಾಡ್ ಬೆಂಬಲಿಗರಿಂದ ಕ್ಲಬ್​ನಲ್ಲಿ ಪಾರ್ಟಿ ವೇಳೆ ಹಲ್ಲೆ ಆರೋಪ; ಅಂತಹ ಘಟನೆ ನಡೆದಿಲ್ಲ ಎಂದ ನಲಪಾಡ್
ಮೊಹಮ್ಮದ್ ನಲಪಾಡ್ (ಸಂಗ್ರಹ ಚಿತ್ರ)
TV9 Web
| Updated By: ganapathi bhat|

Updated on:Jan 20, 2022 | 12:51 PM

Share

ಬೆಂಗಳೂರು: ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಬೆಂಬಲಿಗರಿಂದ ಬಳ್ಳಾರಿ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷರ ಮೇಲೆ ಹಲ್ಲೆ ಆರೋಪ ಕೇಳಿಬಂದಿದೆ. ಬಳ್ಳಾರಿ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷ ಹಳ್ಳೇಗೌಡ ಈ ಬಗ್ಗೆ ಆರೋಪ ಮಾಡಿದ್ದಾರೆ. ನಿನ್ನೆ (ಜನವರಿ 19) ಖಾಸಗಿ ಹೋಟೆಲ್​​ನಲ್ಲಿ ಯೂತ್ ಕಾಂಗ್ರೆಸ್ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ನಲಪಾಡ್ ಪದಗ್ರಹಣ ವಿಚಾರದ ಬಗ್ಗೆ ಚರ್ಚೆ ಮಾಡಲಾಗಿತ್ತು. ಚರ್ಚೆ ನಂತರ ಸಂಜೆ ಅಮೃತಹಳ್ಳಿಯ ಕ್ಲಬ್​​​ನಲ್ಲಿ ಪಾರ್ಟಿ ನಡೆಸಿದ್ದು, ಪಾರ್ಟಿ ವೇಳೆ ಹಳ್ಳೇಗೌಡನ ಮೇಲೆ ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ.

ನಲಪಾಡ್ ಖಾಸಗಿ ಹೋಟೆಲ್ ಒಂದರಲ್ಲಿ ಮಧ್ಯಾಹ್ನ ಗೆಟ್ ಟುಗೆದರ್ ರೀತಿಯಲ್ಲಿ ಪೂರ್ವಭಾವಿ ಸಭೆ ಕರೆದಿದ್ದರು. ಅಲ್ಲಿ ನಲಪಾಡ್ ಮುಂದಿನ ಅಧ್ಯಕ್ಷನಾಗಿ ಪ್ರಮಾಣವಚನ ತೆಗೆದುಕೊಳ್ಳುತ್ತೇನೆ ಎಂದು ಪ್ರಸ್ತಾಪಿಸಿದರು. ಮತ್ತು ರಾತ್ರಿ ಯಲಹಂಕದ ಒಂದು ಕ್ಲಬ್ ನಲ್ಲಿ ಭೋಜನಕ್ಕೆ ಕರೆದು, ಬಳ್ಳಾರಿ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷರಾದ ಸಿದ್ದು ಹಳ್ಳೇಗೌಡ ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷರಾದ ಮಂಜುನಾಥ್ ಗೌಡ ಅವರ ಸದಸ್ಯ ಎಂದು ತಿಳಿದು ಹಲ್ಲೆ ನಡೆಸಿದ್ದಾರೆ.

ಸಮಯ ನೋಡಿ ‘ಏನು ಲೇ ನೀವು ಮಂಜುಗೌಡಗೆ ಸಪ್ಪೋರ್ಟ್ ಮಾಡುತ್ತೀರಾ’ ಎಂದು ಜಿಲ್ಲಾಧ್ಯಕ್ಷ ಸಿದ್ದು ಹಳ್ಳೇಗೌಡ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದದಿದೆ. ಮತ್ತು ಅವರ ತಮ್ಮ ಮತ್ತು ಸ್ನೇಹಿತನ ಮೇಲೆ ಹಾಗೂ ಕಾರು ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲಿಂದ ಅವರನ್ನು ರಾಜ್ಯ ಉಪಾಧ್ಯಕ್ಷರಾದ ಮಂಜುಗೌಡ ವಾಹನವನ್ನು ಹಿಂಬಾಲಿಸಿ ಬಂದು ಎಲ್ಲರನ್ನೂ ಪ್ರಾಣಾಪಾಯದಿಂದ ಪಾರುಮಾಡಿ ಆ ಸ್ಥಳದಿಂದ ತಪ್ಪಿಸಿ ಕರೆದೊಯ್ದಿದ್ದಾರೆ ಎಂದು ಹೇಳಲಾಗಿದೆ. ನಾಲಪಾಡ್ ಸ್ನೇಹಿತರಿಂದ ಮತ್ತು ಕುಟುಂಬ ಸದಸ್ಯರಿಂದ ಜಿಲ್ಲಾಧ್ಯಕ್ಷರಾದ ನನಗೆ ಜೀವ ಬೆದರಿಕೆ ಇದೆ. ಈ ಕುರಿತು ಇಂದು ಬೆಂಗಳೂರಿನಲ್ಲಿ ಸುದ್ದಿ ಗೋಷ್ಠಿ ಕರೆಯಲಿದ್ದೆನೆ ಎಂದು ತಿಳಿಸಲಾಗಿದೆ.

ಘಟನೆಯ ಬಗ್ಗೆ ಮೊಹಮದ್ ನಲಪಾಡ್ ಪ್ರತಿಕ್ರಿಯೆ

ಬೆಂಗಳೂರಿನಲ್ಲಿ ನಿನ್ನೆ ನಾವು ಸಭೆ ಸೇರಿರುವುದು ನಿಜ. ಮುಂದಿನ ಕಾರ್ಯಚಟುವಟಿಕೆಗಳ ಬಗ್ಗೆ ಚರ್ಚಿಸಿದ್ದೇವೆ. ನಿನ್ನೆ ರಾತ್ರಿ ಹುಡುಗರು ಸೇರಿ ಪಾರ್ಟಿ ಮಾಡಿದ್ದಾರೆ. ನಾನು ರಾತ್ರಿ 9.30ರ ಸುಮಾರಿಗೆ ವಾಪಸಾಗಿದ್ದೆ. ಅಲ್ಲಿ ಯಾವುದೇ ರೀತಿಯ ಹಲ್ಲೆ ಘಟನೆ ನಡೆದಿಲ್ಲ. ಬೇಕಿದ್ದರೆ ರೆಸಾರ್ಟ್ ಸಿಸಿ ಕ್ಯಾಮರಾ ಪರಿಶೀಲಿಸಲಿ. ಸಿದ್ದು ಹಳ್ಳೇಗೌಡ, ನಾನು ಚೆನ್ನಾಗಿಯೇ ಇದ್ದೇವೆ ಎಂದು ಈ ಘಟನೆಯ ಬಗ್ಗೆ ಬೆಂಗಳೂರಿನಲ್ಲಿ ಮೊಹಮ್ಮದ್ ನಲಪಾಡ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಗುಜರಿ ಬಸ್ ಜಮೀರು ಸಿದ್ದರಾಮಯ್ಯ ಟೀಂ ವೈಸ್ ಕ್ಯಾಪ್ಟನ್! ಫರ್ಜಿ ಕೆಫೆ ಪುಂಡ ನಲಪಾಡ್ ಡಿಕೆಶಿ ಗ್ಯಾಂಗ್ ವೈಸ್ ಕ್ಯಾಪ್ಟನ್ ಎಂದ ಸಂಸದ ಪ್ರತಾಪ್

ಇದನ್ನೂ ಓದಿ: ನನಗೂ ಶ್ರೀಕಿಗೂ ಪರಿಚಯವಿಲ್ಲ ಅಂದ್ರೆ ತಪ್ಪಾಗುತ್ತದೆ ನನಗೆ ಶ್ರೀಕಿ ಪರಿಚಯವಿದೆ -ಮೊಹಮ್ಮದ್ ಹ್ಯಾರಿಸ್ ನಲಪಾಡ್

Published On - 12:32 pm, Thu, 20 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ