AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಪೊಲೀಸ್​​ ಠಾಣೆಯಲ್ಲಿ ವಿಚಾರಣೆ ವೇಳೆ PSI ಮೇಲೆ ಹಲ್ಲೆ ಆರೋಪ

ವಿಚಾರಣೆ ವೇಳೆ ಪಿಎಸ್​ಐ ಮೇಲೆ ಹಲ್ಲೆ ಮಾಡಿರುವ ಘಟನೆ ಪೀಣ್ಯ ಪೊಲೀಸ್​​ ಠಾಣೆಯಲ್ಲಿ ನಡೆದಿದೆ.

Bengaluru News: ಪೊಲೀಸ್​​ ಠಾಣೆಯಲ್ಲಿ ವಿಚಾರಣೆ ವೇಳೆ PSI ಮೇಲೆ ಹಲ್ಲೆ ಆರೋಪ
ಪೀಣ್ಯ ಪೊಲೀಸ್​ ಠಾಣೆ
ವಿವೇಕ ಬಿರಾದಾರ
|

Updated on:Jun 14, 2023 | 3:36 PM

Share

ಬೆಂಗಳೂರು: ವಿಚಾರಣೆ ವೇಳೆ ಪಿಎಸ್​ಐ (PSI) ಮೇಲೆ ಹಲ್ಲೆ ಮಾಡಿರುವ ಘಟನೆ ಪೀಣ್ಯ ಪೊಲೀಸ್​​ ಠಾಣೆಯಲ್ಲಿ (Peenya Police Station) ನಡೆದಿದೆ. ಮೌನೇಶ್ ಎಂಬಾತ ಹಲ್ಲೆ ಮಾಡಿರುವ ವ್ಯಕ್ತಿ. ಪಾಸ್ ವಿಚಾರಕ್ಕೆ ಬಿಎಂಟಿಸಿ (BMTC) ಕಂಡಕ್ಟರ್ ಜತೆ ಮೌನೇಶ್​​ ಗಲಾಟೆ ಮಾಡಿದ್ದನು. ಹೀಗಾಗಿ ಬಿಎಂಟಿಸಿ ಸಿಬ್ಬಂದಿ ಬಸ್ ಸಮೇತ ಆತನನ್ನು ಪೊಲೀಸ್​ ಠಾಣೆಗೆ ಕರೆತಂದಿದ್ದರು. ಈ ಬಗ್ಗೆ ಮೌನೇಶ್​ನನ್ನು ಪಿಎಸ್​ಐ ಸಿದ್ದು ಹೂಗಾರ್ ವಿಚಾರಣೆ ಮಾಡುತ್ತಿದ್ದಾಗ ಅವರ ಮೇಲೆ ಹಲ್ಲೆ ಮಾಡಿದ್ದಾನೆ. ಗಾಯಗೊಂಡ ಪಿಎಸ್​ಐ ಸಿದ್ದು ಹೂಗಾರ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೀಣ್ಯ ಪೊಲೀಸ್​ ಠಾಣೆಗೆ ಹಿರಿಯ ಪೊಲೀಸ್​ ಅಧಿಕಾರಿಗಳು ದೌಡಾಯಿಸಿದ್ದಾರೆ.

ಮೌನೇಶ್  ಡೆಂಟಲ್ ಮೆಡಿಕಲ್ ಓದುತ್ತಿದ್ದು, ಕುವೆಂಪುನಗರದಲ್ಲಿರುವ ಮನೆಯಿಂದ ಗೊರಗುಂಟೆಪಾಳ್ಯದಲ್ಲಿರುವ ಕಾಲೇಜಿಗೆ ತೆರಳುತಿದ್ದನು. ಈ ಸಂಬಂಧ ಮೌನೇಶ್ ಬಿಎಂಟಿಸಿ ಬಸ್ ಹತ್ತಿದ್ದನು. ನಿರ್ವಾಹಕರಿಗೆ  ಯುವಕ ಮೌನೇಶ್ ಬಸ್ ಪಾಸ್ ಜೆರಾಕ್ಸ್ ತೋರಿಸಿದ್ದನು.

ಇದನ್ನೂ ಓದಿ: ಜೆಸಿಬಿ ಹರಿದು ಜಮೀನಿನಲ್ಲಿ ಮಲಗಿದ್ದ ಮೂವರು ಸಾವು

ಆಗ ನಿರ್ವಾಹಕ ಜೆರಾಕ್ಸ್ ಅಲ್ಲ ಒರಿಜಿನಲ್ ತೋರಿಸು ಎಂದಿದ್ದಾರೆ. ಆಗ ಮೌನೇಶ್​ ಮಹಿಳೆಯರು ಆಧಾರ್ ಕಾರ್ಡ್ ಜೆರಾಕ್ಸ್​ ತೋರಿಸಿದರೇ ಸುಮ್ಮನಿರುತ್ತೀಯಾ, ನಾನು ಪಾಸ್​ ತೋರಿಸಿದರೇ, ಯಾಕೆ ಗಲಾಟೆ ಮಾಡುತ್ತೀಯಾ ಅಂತ ನಿರ್ವಾಹಕನಿಗೆ ಹೊಡೆದಿದ್ದಾನೆ.

ನಂತರ ಬಸ್​​ನಲ್ಲಿದ್ದ ಎಲ್ಲರೂ ಸೇರಿ ಮೌನೇಶ್​ ಅವರನ್ನು ಪೀಣ್ಯ ಪೊಲೀಸ್​ ಠಾಣೆಗೆ ಕರೆತದ್ದಿದ್ದರು. ಮೌನೇಶ್​ನನ್ನು  ಠಾಣೆ ಒಳಗೆ ಕೂರಿಸಿದ್ದ ವೇಳೆ,  ಮೌನೇಶ್ ಅಣ್ಣ ಠಾಣೆ ಬಳಿ ಬಂದು ಗಲಾಟೆ ಮಾಡಿದ್ದಾನೆ. ಈ ವೇಳೆ ಠಾಣೆಯಲ್ಲಿ ಕುಳಿತಿದ್ದ ಮೌನೇಶ್ ಬಂದು ಏಕಾ ಏಕಿ ಪಿಎಸ್​ಐ ಮೇಲೆ ಹಲ್ಲೆ ಮಾಡಿದ್ದಾನೆ. ಪಿಎಸ್​ಐ ದವಡೆಗೆ ಪಂಚ್ ಮಾಡಿ ಬಳಿಕ ಮರ್ಮಾಂಗಕ್ಕೆ ಒದ್ದು ಹಲ್ಲೆ ಮಾಡಿದ್ದಾನೆ. ಸದ್ಯ ಪೊಲೀಸರು ಮೌನೇಶ್​ನನ್ನು ವಶಕ್ಕೆ ಪಡೆದಿದ್ದು, ಮೌನೇಶ್ ಅಣ್ಣ ಠಾಣೆಯಿಂದ ಪರಾರಿಯಾಗಿದ್ದಾನೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:53 pm, Wed, 14 June 23

Follow Us
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?