AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಪೊಲೀಸ್​​ ಠಾಣೆಯಲ್ಲಿ ವಿಚಾರಣೆ ವೇಳೆ PSI ಮೇಲೆ ಹಲ್ಲೆ ಆರೋಪ

ವಿಚಾರಣೆ ವೇಳೆ ಪಿಎಸ್​ಐ ಮೇಲೆ ಹಲ್ಲೆ ಮಾಡಿರುವ ಘಟನೆ ಪೀಣ್ಯ ಪೊಲೀಸ್​​ ಠಾಣೆಯಲ್ಲಿ ನಡೆದಿದೆ.

Bengaluru News: ಪೊಲೀಸ್​​ ಠಾಣೆಯಲ್ಲಿ ವಿಚಾರಣೆ ವೇಳೆ PSI ಮೇಲೆ ಹಲ್ಲೆ ಆರೋಪ
ಪೀಣ್ಯ ಪೊಲೀಸ್​ ಠಾಣೆ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Jun 14, 2023 | 3:36 PM

Share

ಬೆಂಗಳೂರು: ವಿಚಾರಣೆ ವೇಳೆ ಪಿಎಸ್​ಐ (PSI) ಮೇಲೆ ಹಲ್ಲೆ ಮಾಡಿರುವ ಘಟನೆ ಪೀಣ್ಯ ಪೊಲೀಸ್​​ ಠಾಣೆಯಲ್ಲಿ (Peenya Police Station) ನಡೆದಿದೆ. ಮೌನೇಶ್ ಎಂಬಾತ ಹಲ್ಲೆ ಮಾಡಿರುವ ವ್ಯಕ್ತಿ. ಪಾಸ್ ವಿಚಾರಕ್ಕೆ ಬಿಎಂಟಿಸಿ (BMTC) ಕಂಡಕ್ಟರ್ ಜತೆ ಮೌನೇಶ್​​ ಗಲಾಟೆ ಮಾಡಿದ್ದನು. ಹೀಗಾಗಿ ಬಿಎಂಟಿಸಿ ಸಿಬ್ಬಂದಿ ಬಸ್ ಸಮೇತ ಆತನನ್ನು ಪೊಲೀಸ್​ ಠಾಣೆಗೆ ಕರೆತಂದಿದ್ದರು. ಈ ಬಗ್ಗೆ ಮೌನೇಶ್​ನನ್ನು ಪಿಎಸ್​ಐ ಸಿದ್ದು ಹೂಗಾರ್ ವಿಚಾರಣೆ ಮಾಡುತ್ತಿದ್ದಾಗ ಅವರ ಮೇಲೆ ಹಲ್ಲೆ ಮಾಡಿದ್ದಾನೆ. ಗಾಯಗೊಂಡ ಪಿಎಸ್​ಐ ಸಿದ್ದು ಹೂಗಾರ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೀಣ್ಯ ಪೊಲೀಸ್​ ಠಾಣೆಗೆ ಹಿರಿಯ ಪೊಲೀಸ್​ ಅಧಿಕಾರಿಗಳು ದೌಡಾಯಿಸಿದ್ದಾರೆ.

ಮೌನೇಶ್  ಡೆಂಟಲ್ ಮೆಡಿಕಲ್ ಓದುತ್ತಿದ್ದು, ಕುವೆಂಪುನಗರದಲ್ಲಿರುವ ಮನೆಯಿಂದ ಗೊರಗುಂಟೆಪಾಳ್ಯದಲ್ಲಿರುವ ಕಾಲೇಜಿಗೆ ತೆರಳುತಿದ್ದನು. ಈ ಸಂಬಂಧ ಮೌನೇಶ್ ಬಿಎಂಟಿಸಿ ಬಸ್ ಹತ್ತಿದ್ದನು. ನಿರ್ವಾಹಕರಿಗೆ  ಯುವಕ ಮೌನೇಶ್ ಬಸ್ ಪಾಸ್ ಜೆರಾಕ್ಸ್ ತೋರಿಸಿದ್ದನು.

ಇದನ್ನೂ ಓದಿ: ಜೆಸಿಬಿ ಹರಿದು ಜಮೀನಿನಲ್ಲಿ ಮಲಗಿದ್ದ ಮೂವರು ಸಾವು

ಆಗ ನಿರ್ವಾಹಕ ಜೆರಾಕ್ಸ್ ಅಲ್ಲ ಒರಿಜಿನಲ್ ತೋರಿಸು ಎಂದಿದ್ದಾರೆ. ಆಗ ಮೌನೇಶ್​ ಮಹಿಳೆಯರು ಆಧಾರ್ ಕಾರ್ಡ್ ಜೆರಾಕ್ಸ್​ ತೋರಿಸಿದರೇ ಸುಮ್ಮನಿರುತ್ತೀಯಾ, ನಾನು ಪಾಸ್​ ತೋರಿಸಿದರೇ, ಯಾಕೆ ಗಲಾಟೆ ಮಾಡುತ್ತೀಯಾ ಅಂತ ನಿರ್ವಾಹಕನಿಗೆ ಹೊಡೆದಿದ್ದಾನೆ.

ನಂತರ ಬಸ್​​ನಲ್ಲಿದ್ದ ಎಲ್ಲರೂ ಸೇರಿ ಮೌನೇಶ್​ ಅವರನ್ನು ಪೀಣ್ಯ ಪೊಲೀಸ್​ ಠಾಣೆಗೆ ಕರೆತದ್ದಿದ್ದರು. ಮೌನೇಶ್​ನನ್ನು  ಠಾಣೆ ಒಳಗೆ ಕೂರಿಸಿದ್ದ ವೇಳೆ,  ಮೌನೇಶ್ ಅಣ್ಣ ಠಾಣೆ ಬಳಿ ಬಂದು ಗಲಾಟೆ ಮಾಡಿದ್ದಾನೆ. ಈ ವೇಳೆ ಠಾಣೆಯಲ್ಲಿ ಕುಳಿತಿದ್ದ ಮೌನೇಶ್ ಬಂದು ಏಕಾ ಏಕಿ ಪಿಎಸ್​ಐ ಮೇಲೆ ಹಲ್ಲೆ ಮಾಡಿದ್ದಾನೆ. ಪಿಎಸ್​ಐ ದವಡೆಗೆ ಪಂಚ್ ಮಾಡಿ ಬಳಿಕ ಮರ್ಮಾಂಗಕ್ಕೆ ಒದ್ದು ಹಲ್ಲೆ ಮಾಡಿದ್ದಾನೆ. ಸದ್ಯ ಪೊಲೀಸರು ಮೌನೇಶ್​ನನ್ನು ವಶಕ್ಕೆ ಪಡೆದಿದ್ದು, ಮೌನೇಶ್ ಅಣ್ಣ ಠಾಣೆಯಿಂದ ಪರಾರಿಯಾಗಿದ್ದಾನೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:53 pm, Wed, 14 June 23

Follow Us
ವಿವೇಕ ಬಿರಾದಾರ
ವಿವೇಕ ಬಿರಾದಾರ

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್