AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಪೊಲೀಸ್​​ ಠಾಣೆಯಲ್ಲಿ ವಿಚಾರಣೆ ವೇಳೆ PSI ಮೇಲೆ ಹಲ್ಲೆ ಆರೋಪ

ವಿಚಾರಣೆ ವೇಳೆ ಪಿಎಸ್​ಐ ಮೇಲೆ ಹಲ್ಲೆ ಮಾಡಿರುವ ಘಟನೆ ಪೀಣ್ಯ ಪೊಲೀಸ್​​ ಠಾಣೆಯಲ್ಲಿ ನಡೆದಿದೆ.

Bengaluru News: ಪೊಲೀಸ್​​ ಠಾಣೆಯಲ್ಲಿ ವಿಚಾರಣೆ ವೇಳೆ PSI ಮೇಲೆ ಹಲ್ಲೆ ಆರೋಪ
ಪೀಣ್ಯ ಪೊಲೀಸ್​ ಠಾಣೆ
ವಿವೇಕ ಬಿರಾದಾರ
|

Updated on:Jun 14, 2023 | 3:36 PM

Share

ಬೆಂಗಳೂರು: ವಿಚಾರಣೆ ವೇಳೆ ಪಿಎಸ್​ಐ (PSI) ಮೇಲೆ ಹಲ್ಲೆ ಮಾಡಿರುವ ಘಟನೆ ಪೀಣ್ಯ ಪೊಲೀಸ್​​ ಠಾಣೆಯಲ್ಲಿ (Peenya Police Station) ನಡೆದಿದೆ. ಮೌನೇಶ್ ಎಂಬಾತ ಹಲ್ಲೆ ಮಾಡಿರುವ ವ್ಯಕ್ತಿ. ಪಾಸ್ ವಿಚಾರಕ್ಕೆ ಬಿಎಂಟಿಸಿ (BMTC) ಕಂಡಕ್ಟರ್ ಜತೆ ಮೌನೇಶ್​​ ಗಲಾಟೆ ಮಾಡಿದ್ದನು. ಹೀಗಾಗಿ ಬಿಎಂಟಿಸಿ ಸಿಬ್ಬಂದಿ ಬಸ್ ಸಮೇತ ಆತನನ್ನು ಪೊಲೀಸ್​ ಠಾಣೆಗೆ ಕರೆತಂದಿದ್ದರು. ಈ ಬಗ್ಗೆ ಮೌನೇಶ್​ನನ್ನು ಪಿಎಸ್​ಐ ಸಿದ್ದು ಹೂಗಾರ್ ವಿಚಾರಣೆ ಮಾಡುತ್ತಿದ್ದಾಗ ಅವರ ಮೇಲೆ ಹಲ್ಲೆ ಮಾಡಿದ್ದಾನೆ. ಗಾಯಗೊಂಡ ಪಿಎಸ್​ಐ ಸಿದ್ದು ಹೂಗಾರ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೀಣ್ಯ ಪೊಲೀಸ್​ ಠಾಣೆಗೆ ಹಿರಿಯ ಪೊಲೀಸ್​ ಅಧಿಕಾರಿಗಳು ದೌಡಾಯಿಸಿದ್ದಾರೆ.

ಮೌನೇಶ್  ಡೆಂಟಲ್ ಮೆಡಿಕಲ್ ಓದುತ್ತಿದ್ದು, ಕುವೆಂಪುನಗರದಲ್ಲಿರುವ ಮನೆಯಿಂದ ಗೊರಗುಂಟೆಪಾಳ್ಯದಲ್ಲಿರುವ ಕಾಲೇಜಿಗೆ ತೆರಳುತಿದ್ದನು. ಈ ಸಂಬಂಧ ಮೌನೇಶ್ ಬಿಎಂಟಿಸಿ ಬಸ್ ಹತ್ತಿದ್ದನು. ನಿರ್ವಾಹಕರಿಗೆ  ಯುವಕ ಮೌನೇಶ್ ಬಸ್ ಪಾಸ್ ಜೆರಾಕ್ಸ್ ತೋರಿಸಿದ್ದನು.

ಇದನ್ನೂ ಓದಿ: ಜೆಸಿಬಿ ಹರಿದು ಜಮೀನಿನಲ್ಲಿ ಮಲಗಿದ್ದ ಮೂವರು ಸಾವು

ಆಗ ನಿರ್ವಾಹಕ ಜೆರಾಕ್ಸ್ ಅಲ್ಲ ಒರಿಜಿನಲ್ ತೋರಿಸು ಎಂದಿದ್ದಾರೆ. ಆಗ ಮೌನೇಶ್​ ಮಹಿಳೆಯರು ಆಧಾರ್ ಕಾರ್ಡ್ ಜೆರಾಕ್ಸ್​ ತೋರಿಸಿದರೇ ಸುಮ್ಮನಿರುತ್ತೀಯಾ, ನಾನು ಪಾಸ್​ ತೋರಿಸಿದರೇ, ಯಾಕೆ ಗಲಾಟೆ ಮಾಡುತ್ತೀಯಾ ಅಂತ ನಿರ್ವಾಹಕನಿಗೆ ಹೊಡೆದಿದ್ದಾನೆ.

ನಂತರ ಬಸ್​​ನಲ್ಲಿದ್ದ ಎಲ್ಲರೂ ಸೇರಿ ಮೌನೇಶ್​ ಅವರನ್ನು ಪೀಣ್ಯ ಪೊಲೀಸ್​ ಠಾಣೆಗೆ ಕರೆತದ್ದಿದ್ದರು. ಮೌನೇಶ್​ನನ್ನು  ಠಾಣೆ ಒಳಗೆ ಕೂರಿಸಿದ್ದ ವೇಳೆ,  ಮೌನೇಶ್ ಅಣ್ಣ ಠಾಣೆ ಬಳಿ ಬಂದು ಗಲಾಟೆ ಮಾಡಿದ್ದಾನೆ. ಈ ವೇಳೆ ಠಾಣೆಯಲ್ಲಿ ಕುಳಿತಿದ್ದ ಮೌನೇಶ್ ಬಂದು ಏಕಾ ಏಕಿ ಪಿಎಸ್​ಐ ಮೇಲೆ ಹಲ್ಲೆ ಮಾಡಿದ್ದಾನೆ. ಪಿಎಸ್​ಐ ದವಡೆಗೆ ಪಂಚ್ ಮಾಡಿ ಬಳಿಕ ಮರ್ಮಾಂಗಕ್ಕೆ ಒದ್ದು ಹಲ್ಲೆ ಮಾಡಿದ್ದಾನೆ. ಸದ್ಯ ಪೊಲೀಸರು ಮೌನೇಶ್​ನನ್ನು ವಶಕ್ಕೆ ಪಡೆದಿದ್ದು, ಮೌನೇಶ್ ಅಣ್ಣ ಠಾಣೆಯಿಂದ ಪರಾರಿಯಾಗಿದ್ದಾನೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:53 pm, Wed, 14 June 23

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ