Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಪೊಲೀಸ್​​ ಠಾಣೆಯಲ್ಲಿ ವಿಚಾರಣೆ ವೇಳೆ PSI ಮೇಲೆ ಹಲ್ಲೆ ಆರೋಪ

ವಿಚಾರಣೆ ವೇಳೆ ಪಿಎಸ್​ಐ ಮೇಲೆ ಹಲ್ಲೆ ಮಾಡಿರುವ ಘಟನೆ ಪೀಣ್ಯ ಪೊಲೀಸ್​​ ಠಾಣೆಯಲ್ಲಿ ನಡೆದಿದೆ.

Bengaluru News: ಪೊಲೀಸ್​​ ಠಾಣೆಯಲ್ಲಿ ವಿಚಾರಣೆ ವೇಳೆ PSI ಮೇಲೆ ಹಲ್ಲೆ ಆರೋಪ
ಪೀಣ್ಯ ಪೊಲೀಸ್​ ಠಾಣೆ
Follow us
ವಿವೇಕ ಬಿರಾದಾರ
|

Updated on:Jun 14, 2023 | 3:36 PM

ಬೆಂಗಳೂರು: ವಿಚಾರಣೆ ವೇಳೆ ಪಿಎಸ್​ಐ (PSI) ಮೇಲೆ ಹಲ್ಲೆ ಮಾಡಿರುವ ಘಟನೆ ಪೀಣ್ಯ ಪೊಲೀಸ್​​ ಠಾಣೆಯಲ್ಲಿ (Peenya Police Station) ನಡೆದಿದೆ. ಮೌನೇಶ್ ಎಂಬಾತ ಹಲ್ಲೆ ಮಾಡಿರುವ ವ್ಯಕ್ತಿ. ಪಾಸ್ ವಿಚಾರಕ್ಕೆ ಬಿಎಂಟಿಸಿ (BMTC) ಕಂಡಕ್ಟರ್ ಜತೆ ಮೌನೇಶ್​​ ಗಲಾಟೆ ಮಾಡಿದ್ದನು. ಹೀಗಾಗಿ ಬಿಎಂಟಿಸಿ ಸಿಬ್ಬಂದಿ ಬಸ್ ಸಮೇತ ಆತನನ್ನು ಪೊಲೀಸ್​ ಠಾಣೆಗೆ ಕರೆತಂದಿದ್ದರು. ಈ ಬಗ್ಗೆ ಮೌನೇಶ್​ನನ್ನು ಪಿಎಸ್​ಐ ಸಿದ್ದು ಹೂಗಾರ್ ವಿಚಾರಣೆ ಮಾಡುತ್ತಿದ್ದಾಗ ಅವರ ಮೇಲೆ ಹಲ್ಲೆ ಮಾಡಿದ್ದಾನೆ. ಗಾಯಗೊಂಡ ಪಿಎಸ್​ಐ ಸಿದ್ದು ಹೂಗಾರ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೀಣ್ಯ ಪೊಲೀಸ್​ ಠಾಣೆಗೆ ಹಿರಿಯ ಪೊಲೀಸ್​ ಅಧಿಕಾರಿಗಳು ದೌಡಾಯಿಸಿದ್ದಾರೆ.

ಮೌನೇಶ್  ಡೆಂಟಲ್ ಮೆಡಿಕಲ್ ಓದುತ್ತಿದ್ದು, ಕುವೆಂಪುನಗರದಲ್ಲಿರುವ ಮನೆಯಿಂದ ಗೊರಗುಂಟೆಪಾಳ್ಯದಲ್ಲಿರುವ ಕಾಲೇಜಿಗೆ ತೆರಳುತಿದ್ದನು. ಈ ಸಂಬಂಧ ಮೌನೇಶ್ ಬಿಎಂಟಿಸಿ ಬಸ್ ಹತ್ತಿದ್ದನು. ನಿರ್ವಾಹಕರಿಗೆ  ಯುವಕ ಮೌನೇಶ್ ಬಸ್ ಪಾಸ್ ಜೆರಾಕ್ಸ್ ತೋರಿಸಿದ್ದನು.

ಇದನ್ನೂ ಓದಿ: ಜೆಸಿಬಿ ಹರಿದು ಜಮೀನಿನಲ್ಲಿ ಮಲಗಿದ್ದ ಮೂವರು ಸಾವು

ಆಗ ನಿರ್ವಾಹಕ ಜೆರಾಕ್ಸ್ ಅಲ್ಲ ಒರಿಜಿನಲ್ ತೋರಿಸು ಎಂದಿದ್ದಾರೆ. ಆಗ ಮೌನೇಶ್​ ಮಹಿಳೆಯರು ಆಧಾರ್ ಕಾರ್ಡ್ ಜೆರಾಕ್ಸ್​ ತೋರಿಸಿದರೇ ಸುಮ್ಮನಿರುತ್ತೀಯಾ, ನಾನು ಪಾಸ್​ ತೋರಿಸಿದರೇ, ಯಾಕೆ ಗಲಾಟೆ ಮಾಡುತ್ತೀಯಾ ಅಂತ ನಿರ್ವಾಹಕನಿಗೆ ಹೊಡೆದಿದ್ದಾನೆ.

ನಂತರ ಬಸ್​​ನಲ್ಲಿದ್ದ ಎಲ್ಲರೂ ಸೇರಿ ಮೌನೇಶ್​ ಅವರನ್ನು ಪೀಣ್ಯ ಪೊಲೀಸ್​ ಠಾಣೆಗೆ ಕರೆತದ್ದಿದ್ದರು. ಮೌನೇಶ್​ನನ್ನು  ಠಾಣೆ ಒಳಗೆ ಕೂರಿಸಿದ್ದ ವೇಳೆ,  ಮೌನೇಶ್ ಅಣ್ಣ ಠಾಣೆ ಬಳಿ ಬಂದು ಗಲಾಟೆ ಮಾಡಿದ್ದಾನೆ. ಈ ವೇಳೆ ಠಾಣೆಯಲ್ಲಿ ಕುಳಿತಿದ್ದ ಮೌನೇಶ್ ಬಂದು ಏಕಾ ಏಕಿ ಪಿಎಸ್​ಐ ಮೇಲೆ ಹಲ್ಲೆ ಮಾಡಿದ್ದಾನೆ. ಪಿಎಸ್​ಐ ದವಡೆಗೆ ಪಂಚ್ ಮಾಡಿ ಬಳಿಕ ಮರ್ಮಾಂಗಕ್ಕೆ ಒದ್ದು ಹಲ್ಲೆ ಮಾಡಿದ್ದಾನೆ. ಸದ್ಯ ಪೊಲೀಸರು ಮೌನೇಶ್​ನನ್ನು ವಶಕ್ಕೆ ಪಡೆದಿದ್ದು, ಮೌನೇಶ್ ಅಣ್ಣ ಠಾಣೆಯಿಂದ ಪರಾರಿಯಾಗಿದ್ದಾನೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:53 pm, Wed, 14 June 23

Video: ತ್ರಿವೇಣಿ ಸಂಗಮದಲ್ಲಿ ತಾನು ಮುಳುಗೇಳುವ ಬದಲು ಮೊಬೈಲ್ ಮುಳುಗಿಸಿದ ಯು
Video: ತ್ರಿವೇಣಿ ಸಂಗಮದಲ್ಲಿ ತಾನು ಮುಳುಗೇಳುವ ಬದಲು ಮೊಬೈಲ್ ಮುಳುಗಿಸಿದ ಯು
ಹಾವೇರಿ: ದನದ ಕೊಟ್ಟಿಗೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ವಸತಿ ನಿಲಯ
ಹಾವೇರಿ: ದನದ ಕೊಟ್ಟಿಗೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ವಸತಿ ನಿಲಯ
ಮದುವೆ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟ ಡಾಲಿ ಧನಂಜಯ
ಮದುವೆ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟ ಡಾಲಿ ಧನಂಜಯ
Video: ಮದುವೆ ಮನೆಗೆ ಕುದುರೆ ಮೇಲೆ ಬಂದ ವರ, ಅಲ್ಲೇ ಕುಸಿದು ಸಾವು
Video: ಮದುವೆ ಮನೆಗೆ ಕುದುರೆ ಮೇಲೆ ಬಂದ ವರ, ಅಲ್ಲೇ ಕುಸಿದು ಸಾವು
ಬಿಮ್ಸ್​​ನ ಟ್ರಾಮಾ ಕೇರ್ ಸೆಂಟರ್​ನಲ್ಲಿ ಮೊಬೈಲ್ ಟಾರ್ಚ್​ನಲ್ಲಿ ಚಿಕಿತ್ಸೆ
ಬಿಮ್ಸ್​​ನ ಟ್ರಾಮಾ ಕೇರ್ ಸೆಂಟರ್​ನಲ್ಲಿ ಮೊಬೈಲ್ ಟಾರ್ಚ್​ನಲ್ಲಿ ಚಿಕಿತ್ಸೆ
ದೆಹಲಿ ರೈಲ್ವೆ ನಿಲ್ದಾಣದಲ್ಲಾದ ಕಾಲ್ತುಳಿತದ ಬಳಿಕ ಅಲ್ಲಿನ ಅವಸ್ಥೆ ಹೇಗಿದೆ?
ದೆಹಲಿ ರೈಲ್ವೆ ನಿಲ್ದಾಣದಲ್ಲಾದ ಕಾಲ್ತುಳಿತದ ಬಳಿಕ ಅಲ್ಲಿನ ಅವಸ್ಥೆ ಹೇಗಿದೆ?
ಧನಂಜಯ ಕಟ್ಟಿದ ತಾಳಿ ಕಣ್ಣಿಗೆ ಒತ್ತಿಕೊಂಡ ಧನ್ಯತಾ; ಇದು ಭಾವುಕ ಕ್ಷಣ
ಧನಂಜಯ ಕಟ್ಟಿದ ತಾಳಿ ಕಣ್ಣಿಗೆ ಒತ್ತಿಕೊಂಡ ಧನ್ಯತಾ; ಇದು ಭಾವುಕ ಕ್ಷಣ
ಮೆರಿಕದಿಂದ ಅಮೃತಸರಕ್ಕೆ ಬಂದಿಳಿದ 116 ಅಕ್ರಮ ವಲಸಿಗರನ್ನು ಹೊತ್ತ ವಿಮಾನ
ಮೆರಿಕದಿಂದ ಅಮೃತಸರಕ್ಕೆ ಬಂದಿಳಿದ 116 ಅಕ್ರಮ ವಲಸಿಗರನ್ನು ಹೊತ್ತ ವಿಮಾನ
ದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ ಸಂದರ್ಭದ ವಿಡಿಯೋ
ದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ ಸಂದರ್ಭದ ವಿಡಿಯೋ
ಡಾಲಿ ಧನಂಜಯ-ಧನ್ಯತಾ ಅದ್ದೂರಿ ಮದುವೆ; ಇಲ್ಲಿದೆ ಲೈವ್ ವಿಡಿಯೋ
ಡಾಲಿ ಧನಂಜಯ-ಧನ್ಯತಾ ಅದ್ದೂರಿ ಮದುವೆ; ಇಲ್ಲಿದೆ ಲೈವ್ ವಿಡಿಯೋ