AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಪೊಲೀಸ್​​ ಠಾಣೆಯಲ್ಲಿ ವಿಚಾರಣೆ ವೇಳೆ PSI ಮೇಲೆ ಹಲ್ಲೆ ಆರೋಪ

ವಿಚಾರಣೆ ವೇಳೆ ಪಿಎಸ್​ಐ ಮೇಲೆ ಹಲ್ಲೆ ಮಾಡಿರುವ ಘಟನೆ ಪೀಣ್ಯ ಪೊಲೀಸ್​​ ಠಾಣೆಯಲ್ಲಿ ನಡೆದಿದೆ.

Bengaluru News: ಪೊಲೀಸ್​​ ಠಾಣೆಯಲ್ಲಿ ವಿಚಾರಣೆ ವೇಳೆ PSI ಮೇಲೆ ಹಲ್ಲೆ ಆರೋಪ
ಪೀಣ್ಯ ಪೊಲೀಸ್​ ಠಾಣೆ
ವಿವೇಕ ಬಿರಾದಾರ
|

Updated on:Jun 14, 2023 | 3:36 PM

Share

ಬೆಂಗಳೂರು: ವಿಚಾರಣೆ ವೇಳೆ ಪಿಎಸ್​ಐ (PSI) ಮೇಲೆ ಹಲ್ಲೆ ಮಾಡಿರುವ ಘಟನೆ ಪೀಣ್ಯ ಪೊಲೀಸ್​​ ಠಾಣೆಯಲ್ಲಿ (Peenya Police Station) ನಡೆದಿದೆ. ಮೌನೇಶ್ ಎಂಬಾತ ಹಲ್ಲೆ ಮಾಡಿರುವ ವ್ಯಕ್ತಿ. ಪಾಸ್ ವಿಚಾರಕ್ಕೆ ಬಿಎಂಟಿಸಿ (BMTC) ಕಂಡಕ್ಟರ್ ಜತೆ ಮೌನೇಶ್​​ ಗಲಾಟೆ ಮಾಡಿದ್ದನು. ಹೀಗಾಗಿ ಬಿಎಂಟಿಸಿ ಸಿಬ್ಬಂದಿ ಬಸ್ ಸಮೇತ ಆತನನ್ನು ಪೊಲೀಸ್​ ಠಾಣೆಗೆ ಕರೆತಂದಿದ್ದರು. ಈ ಬಗ್ಗೆ ಮೌನೇಶ್​ನನ್ನು ಪಿಎಸ್​ಐ ಸಿದ್ದು ಹೂಗಾರ್ ವಿಚಾರಣೆ ಮಾಡುತ್ತಿದ್ದಾಗ ಅವರ ಮೇಲೆ ಹಲ್ಲೆ ಮಾಡಿದ್ದಾನೆ. ಗಾಯಗೊಂಡ ಪಿಎಸ್​ಐ ಸಿದ್ದು ಹೂಗಾರ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೀಣ್ಯ ಪೊಲೀಸ್​ ಠಾಣೆಗೆ ಹಿರಿಯ ಪೊಲೀಸ್​ ಅಧಿಕಾರಿಗಳು ದೌಡಾಯಿಸಿದ್ದಾರೆ.

ಮೌನೇಶ್  ಡೆಂಟಲ್ ಮೆಡಿಕಲ್ ಓದುತ್ತಿದ್ದು, ಕುವೆಂಪುನಗರದಲ್ಲಿರುವ ಮನೆಯಿಂದ ಗೊರಗುಂಟೆಪಾಳ್ಯದಲ್ಲಿರುವ ಕಾಲೇಜಿಗೆ ತೆರಳುತಿದ್ದನು. ಈ ಸಂಬಂಧ ಮೌನೇಶ್ ಬಿಎಂಟಿಸಿ ಬಸ್ ಹತ್ತಿದ್ದನು. ನಿರ್ವಾಹಕರಿಗೆ  ಯುವಕ ಮೌನೇಶ್ ಬಸ್ ಪಾಸ್ ಜೆರಾಕ್ಸ್ ತೋರಿಸಿದ್ದನು.

ಇದನ್ನೂ ಓದಿ: ಜೆಸಿಬಿ ಹರಿದು ಜಮೀನಿನಲ್ಲಿ ಮಲಗಿದ್ದ ಮೂವರು ಸಾವು

ಆಗ ನಿರ್ವಾಹಕ ಜೆರಾಕ್ಸ್ ಅಲ್ಲ ಒರಿಜಿನಲ್ ತೋರಿಸು ಎಂದಿದ್ದಾರೆ. ಆಗ ಮೌನೇಶ್​ ಮಹಿಳೆಯರು ಆಧಾರ್ ಕಾರ್ಡ್ ಜೆರಾಕ್ಸ್​ ತೋರಿಸಿದರೇ ಸುಮ್ಮನಿರುತ್ತೀಯಾ, ನಾನು ಪಾಸ್​ ತೋರಿಸಿದರೇ, ಯಾಕೆ ಗಲಾಟೆ ಮಾಡುತ್ತೀಯಾ ಅಂತ ನಿರ್ವಾಹಕನಿಗೆ ಹೊಡೆದಿದ್ದಾನೆ.

ನಂತರ ಬಸ್​​ನಲ್ಲಿದ್ದ ಎಲ್ಲರೂ ಸೇರಿ ಮೌನೇಶ್​ ಅವರನ್ನು ಪೀಣ್ಯ ಪೊಲೀಸ್​ ಠಾಣೆಗೆ ಕರೆತದ್ದಿದ್ದರು. ಮೌನೇಶ್​ನನ್ನು  ಠಾಣೆ ಒಳಗೆ ಕೂರಿಸಿದ್ದ ವೇಳೆ,  ಮೌನೇಶ್ ಅಣ್ಣ ಠಾಣೆ ಬಳಿ ಬಂದು ಗಲಾಟೆ ಮಾಡಿದ್ದಾನೆ. ಈ ವೇಳೆ ಠಾಣೆಯಲ್ಲಿ ಕುಳಿತಿದ್ದ ಮೌನೇಶ್ ಬಂದು ಏಕಾ ಏಕಿ ಪಿಎಸ್​ಐ ಮೇಲೆ ಹಲ್ಲೆ ಮಾಡಿದ್ದಾನೆ. ಪಿಎಸ್​ಐ ದವಡೆಗೆ ಪಂಚ್ ಮಾಡಿ ಬಳಿಕ ಮರ್ಮಾಂಗಕ್ಕೆ ಒದ್ದು ಹಲ್ಲೆ ಮಾಡಿದ್ದಾನೆ. ಸದ್ಯ ಪೊಲೀಸರು ಮೌನೇಶ್​ನನ್ನು ವಶಕ್ಕೆ ಪಡೆದಿದ್ದು, ಮೌನೇಶ್ ಅಣ್ಣ ಠಾಣೆಯಿಂದ ಪರಾರಿಯಾಗಿದ್ದಾನೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:53 pm, Wed, 14 June 23

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!