Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಳಿ ಸಹಿತ ಮಳೆಗೆ ಅಟಲ್ ಬಿಹಾರಿ ವಾಜಪೇಯಿ ಸ್ಟೇಡಿಯಂನ ಗ್ಯಾಲರಿ ಕುಸಿತ; ಇದು ಕಳಪೆ ಕಾಮಗಾರಿಗೆ ಸಾಕ್ಷಿ ಎಂದ ಆಪ್ ಪಕ್ಷ

ಎಚ್ಎಸ್ಆರ್ ಲೇಔಟ್ನಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಸ್ಟೇಡಿಯಂನ ಗ್ಯಾಲರಿಯ ಮೇಲ್ಛಾವಣಿ ಕುಸಿದುಬಿದ್ದಿದೆ.

ಗಾಳಿ ಸಹಿತ ಮಳೆಗೆ ಅಟಲ್ ಬಿಹಾರಿ ವಾಜಪೇಯಿ ಸ್ಟೇಡಿಯಂನ ಗ್ಯಾಲರಿ ಕುಸಿತ; ಇದು ಕಳಪೆ ಕಾಮಗಾರಿಗೆ ಸಾಕ್ಷಿ ಎಂದ ಆಪ್ ಪಕ್ಷ
ಅಟಲ್ ಬಿಹಾರಿ ವಾಜಪೇಯಿ ಸ್ಟೇಡಿಯಂನ ಗ್ಯಾಲರಿ ಕುಸಿತ
Follow us
TV9 Web
| Updated By: ಆಯೇಷಾ ಬಾನು

Updated on:May 09, 2022 | 5:06 PM

ಬೆಂಗಳೂರು: ನಿನ್ನೆ(ಏಪ್ರಿಲ್ 08) ಸುರಿದ ಗಾಳಿ ಸಹಿತ ಮಳೆಗೆ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದ ಗ್ಯಾಲರಿ ಕುಸಿದುಬಿದ್ದಿದೆ. ಬೊಮ್ಮನಹಳ್ಳಿ ವಾರ್ಡ್ ವ್ಯಾಪ್ತಿಯ ಎಚ್ಎಸ್ಆರ್ ಲೇಔಟ್ನಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಸ್ಟೇಡಿಯಂನ ಗ್ಯಾಲರಿಯ ಮೇಲ್ಛಾವಣಿ ಕುಸಿದುಬಿದ್ದಿದೆ. ಹೀಗಾಗಿ ಆಪ್ ಕಾರ್ಯಕರ್ತರು ಸ್ಟೇಡಿಯಂ ಪರಿಸ್ಥಿತಿ ನೋಡಲು ಸ್ಥಳಕ್ಕೆ ಬಂದಿದ್ದಾರೆ.

ಅಟಲ್ ಬಿಹಾರಿ ವಾಜಪೇಯಿ ಸ್ಟೇಡಿಯಂ ಕಟ್ಟುವಾಗ ಕಳಪೆ ಕಾಮಗಾರಿ ಆಗಿದೆ ಎಂದು ಆರೋಪ ಮಾಡಿದ್ದಾರೆ. ಸ್ಟೇಡಿಯಂ ಕಟ್ಟಿ ಮೂರು ತಿಂಗಳು ಕಳೆದಿಲ್ಲ ಆಗಲೇ ಈ ರೀತಿಯಾಗಿ ಗಾಳಿಗೆ ಕುಸಿದು ಬಿದ್ದಿದೆ ಎಂದು ಆಪ್ ಪಕ್ಷ ಆರೋಪ ಮಾಡಿದೆ. ಆಗ ಅಲ್ಲಿದ್ದ ಸ್ಥಳೀಯರು ನೋಡಿ ಆಪ್ ಕಾರ್ಯಕರ್ತರ ಜೊತೆಗೆ ವಾಗ್ವಾದಕ್ಕೆ ಇಳಿದಿದ್ದಾರೆ. ಎರಡು ಗ್ಯಾಂಗ್ ನಡುವೆ ನೀನಾ ನಾನಾ ಎನ್ನುವ ಮಟ್ಟಿಗೆ ಮಾತಿನ ಚಕಮಕಿ ನಡೆದಿದೆ. ಪೊಲೀಸರು ಮಧ್ಯ ಪ್ರವೇಶಿಸಿದ ಬಳಿಕವಷ್ಟೇ ಪರಿಸ್ಥಿತಿ ಕಂಟ್ರೋಲ್ಗೆ ಬಂದಿದೆ.

ಸುಮಾರು 50 ಕೋಟಿ ರು ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದ 3.5 ಕೋಟಿ ರು ವೆಚ್ಚದ ಕಾಮಗಾರಿಯನ್ನು ಮಾರ್ಚ್ 1ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿದ್ದರು. ಆದ್ರೆ ನಿನ್ನೆ ಸಂಜೆ ಬೀಸಿದ ಬಿರುಗಾಳಿ ಮಳೆಗೆ ಕ್ರೀಡಾಂಗಣದ ಗ್ಯಾಲರಿ ಒಂದು ಭಾಗ ಧರೆಗುರುಳಿದ್ದರೆ, ಇನ್ನೊಂದು ಭಾಗ ಮುರಿದು ಬಿದ್ದಿದೆ. ಈ ಸ್ಟೇಡಿಯಂನ ವ್ಯಾಪ್ತಿಯಲ್ಲಿರುವ ಒಳಾಂಗಣ ಸ್ಟೇಡಿಯಂ ಸುಮಾರು ನಾಲ್ಕು ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಂಡಿದೆ. ಬಿಬಿಎಂಪಿ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ಕ್ರೀಡಾಂಗಣ ಮಳೆಗೆ ಹಾನಿಗೊಂಡಿದ್ದು, ಕಳಪೆ ಕಾಮಗಾರಿಗೆ ಸಾಕ್ಷಿಯಾಗಿದೆ.

ಮಳೆಯ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:06 pm, Mon, 9 May 22

‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್