AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಲಾಂಗ್ ಹಿಡಿದು ಉದ್ಯಮಿ ಮೇಲೆ ಹಲ್ಲೆ ಯತ್ನ;ಪ್ರಕರಣ ದಾಖಲಿಸಲು ವಿಳಂಬ, ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ದಾಖಲಾಯ್ತು ಕೇಸ್

ಲಾಂಗ್​ ಏಟಿನಿಂದ ತಲೆಗೆ ಗಂಭೀರ ಗಾಯವಾಗಿದ್ದರೂ, ಪೊಲೀಸರು ಕೇಸ್ ದಾಖಲಿಸಿರಲಿಲ್ಲ. ಈ ಉದ್ಯಮಿ ಮಾರ್ಗೊಂಡನಹಳ್ಳಿ ಬಳಿ ಜಮೀನು ಖರೀದಿಸಿದ್ದ. ಇದೇ ವಿಚಾರಕ್ಕೆ ಸ್ಥಳೀಯರಿಂದ ಉದ್ಯಮಿ ಮೇಲೆ ಪದೇಪದೆ ಹಲ್ಲೆಗೆ ಯತ್ನವಾಗುತ್ತಿತ್ತು. ಬಳಿಕ ಖರೀದಿಸಿದ ಜಮೀನಿನ ಕಾವಲಿಗೆ ಸೆಕ್ಯೂರಿಟಿ ನೇಮಿಸಿದ್ರು ಕೂಡ ಬೆದರಿಕೆ ಕೇಳಿಬಂದಿದ್ದು, ಸೆಕ್ಯೂರಿಟಿ ವಾಸವಾಗಿದ್ದ ಕಂಟೇನರ್​ಗೂ ಬೆಂಕಿಯಿಟ್ಟು ಅಟ್ಟಹಾಸ ಮೆರೆದಿದ್ದರು.

ಬೆಂಗಳೂರಿನಲ್ಲಿ ಲಾಂಗ್ ಹಿಡಿದು ಉದ್ಯಮಿ ಮೇಲೆ ಹಲ್ಲೆ ಯತ್ನ;ಪ್ರಕರಣ ದಾಖಲಿಸಲು ವಿಳಂಬ, ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ದಾಖಲಾಯ್ತು ಕೇಸ್
ಬೆಂಗಳೂರಿನಲ್ಲಿ ಉದ್ಯಮಿ ಮೇಲೆ ಹಲ್ಲೆ
ಜಗದೀಶ ಬಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on:Oct 29, 2023 | 6:45 PM

Share

ಬೆಂಗಳೂರು, ಅ.29: ಮಚ್ಚಿನಿಂದ ಉದ್ಯಮಿ ಮೇಲೆ ಹಲ್ಲೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರ ಗಾಯವಾದರೂ ಐಪಿಸಿ ಸೆಕ್ಷನ್ 307ರ ಅಡಿ ಆವಲಹಳ್ಳಿ ಪೊಲೀಸರು(Avalahalli Police Station) ಕೇಸ್ ದಾಖಲಿಸಿಲ್ಲ. ಈ ಹಿನ್ನಲೆ ರಿಯಲ್ ಎಸ್ಟೇಟ್‌ ದಂಧೆಕೋರರ ಜೊತೆ ಪೊಲೀಸರು ಶಾಮೀಲು ಆಗಿರುವ ಆರೋಪ ಕೇಳಿಬಂದಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಹಿರಿಯ ಅಧಿಕಾರಿಗಳು ಸೂಚನೆ  ನೀಡಿದ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಚ್ಚಿನೇಟಿನಿಂದ ತಲೆಗೆ ಗಂಭೀರ ಗಾಯವಾಗಿದ್ರೂ ಕೇಸ್ ದಾಖಲಿಸಿರಲಿಲ್ಲ

ಹೌದು, ಲಾಂಗ್​ ಏಟಿನಿಂದ ತಲೆಗೆ ಗಂಭೀರ ಗಾಯವಾಗಿದ್ದರೂ, ಪೊಲೀಸರು ಕೇಸ್ ದಾಖಲಿಸಿರಲಿಲ್ಲ. ಈ ಉದ್ಯಮಿ ಮಾರ್ಗೊಂಡನಹಳ್ಳಿ ಬಳಿ ಜಮೀನು ಖರೀದಿಸಿದ್ದ. ಇದೇ ವಿಚಾರಕ್ಕೆ ಸ್ಥಳೀಯರಿಂದ ಉದ್ಯಮಿ ಮೇಲೆ ಪದೇಪದೆ ಹಲ್ಲೆಗೆ ಯತ್ನವಾಗುತ್ತಿತ್ತು. ಬಳಿಕ ಖರೀದಿಸಿದ ಜಮೀನಿನ ಕಾವಲಿಗೆ ಸೆಕ್ಯೂರಿಟಿ ನೇಮಿಸಿದ್ರು ಕೂಡ ಬೆದರಿಕೆ ಕೇಳಿಬಂದಿದ್ದು, ಸೆಕ್ಯೂರಿಟಿ ವಾಸವಾಗಿದ್ದ ಕಂಟೇನರ್​ಗೂ ಬೆಂಕಿಯಿಟ್ಟು ಅಟ್ಟಹಾಸ ಮೆರೆದಿದ್ದರು. ಬಳಿಕ ಜಮೀನಿನಲ್ಲಿ ಕೆಲಸ ಮಾಡಿಸಲು ಹೋದ ಉದ್ಯಮಿ ಮೇಲೆ ಹಲ್ಲೆ ಮಾಡಿದ್ದರು. ಸ್ಥಳೀಯ ವ್ಯಕ್ತಿ ಲಾಂಗ್ ಹಿಡಿದುಕೊಂಡು ಬರುತ್ತಿರುವ ದೃಶ್ಯ ಟಿವಿ9ಗೆ ಲಭ್ಯವಾಗಿದೆ.

ಇದನ್ನೂ ಓದಿ:ನೆಲಮಂಗಲ: ಕಾರಿನ ಗ್ಲಾಸ್ ಒಡೆದು ವಿಜ್ಞಾನಿ ಮೇಲೆ ಹಲ್ಲೆಗೆ ಯತ್ನಿಸಿದ್ದ ಮೂವರು ದರೋಡೆಕೋರರು ಅರೆಸ್ಟ್, ಇಬ್ಬರು ಪರಾರಿ

ವೇಸ್ಟೆಜ್​​​​ ಸುಡಲು ಹಚ್ಚಿದ ಬೆಂಕಿಗೆ ಗ್ಯಾರೇಜ್​​​​ನಲ್ಲಿದ್ದ ಲಾರಿ ಬೆಂಕಿಗಾಹುತಿ

ವಿಜಯಪುರ: ವೇಸ್ಟೆಜ್​ ​​ಸುಡಲು ಹಚ್ಚಿದ ಬೆಂಕಿಯಿಂದ ಗ್ಯಾರೇಜ್​​​​ನಲ್ಲಿದ್ದ ಲಾರಿ ಬೆಂಕಿಗಾಹುತಿಯಾದ ಘಟನೆ ನಗರದ ಶಿಕಾರಖಾನೆ ಬಳಿಯ ಗ್ಯಾರೇಜ್​​ನಲ್ಲಿ ತಡರಾತ್ರಿ ನಡೆದಿದೆ. ನೂರ್ ಅಹ್ಮದ್ ಎಂಬುವರಿಗೆ ಸೇರಿದ ಲಾರಿ ಇದಾಗಿದ್ದು, ಬೆಂಕಿಯ ಕೆನ್ನಾಲಿಗೆಗೆ ಗ್ಯಾರೇಜ್​ನಲ್ಲಿದ್ದ ಲಾರಿ ಸೇರಿ ಇತರೇ ವಸ್ತುಗಳು ಸುಟ್ಟು ಭಸ್ಮವಾಗಿದೆ. ಬೆಂಕಿ ನಂದಿಸಲು ಅಗ್ನಿಶಾಮಕದಳ ಸಿಬ್ಬಂದಿ ಹರಸಾಹಸ ಪಟ್ಟಿದ್ದು, ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:40 pm, Sun, 29 October 23

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ