AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಲಾಂಗ್ ಹಿಡಿದು ಉದ್ಯಮಿ ಮೇಲೆ ಹಲ್ಲೆ ಯತ್ನ;ಪ್ರಕರಣ ದಾಖಲಿಸಲು ವಿಳಂಬ, ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ದಾಖಲಾಯ್ತು ಕೇಸ್

ಲಾಂಗ್​ ಏಟಿನಿಂದ ತಲೆಗೆ ಗಂಭೀರ ಗಾಯವಾಗಿದ್ದರೂ, ಪೊಲೀಸರು ಕೇಸ್ ದಾಖಲಿಸಿರಲಿಲ್ಲ. ಈ ಉದ್ಯಮಿ ಮಾರ್ಗೊಂಡನಹಳ್ಳಿ ಬಳಿ ಜಮೀನು ಖರೀದಿಸಿದ್ದ. ಇದೇ ವಿಚಾರಕ್ಕೆ ಸ್ಥಳೀಯರಿಂದ ಉದ್ಯಮಿ ಮೇಲೆ ಪದೇಪದೆ ಹಲ್ಲೆಗೆ ಯತ್ನವಾಗುತ್ತಿತ್ತು. ಬಳಿಕ ಖರೀದಿಸಿದ ಜಮೀನಿನ ಕಾವಲಿಗೆ ಸೆಕ್ಯೂರಿಟಿ ನೇಮಿಸಿದ್ರು ಕೂಡ ಬೆದರಿಕೆ ಕೇಳಿಬಂದಿದ್ದು, ಸೆಕ್ಯೂರಿಟಿ ವಾಸವಾಗಿದ್ದ ಕಂಟೇನರ್​ಗೂ ಬೆಂಕಿಯಿಟ್ಟು ಅಟ್ಟಹಾಸ ಮೆರೆದಿದ್ದರು.

ಬೆಂಗಳೂರಿನಲ್ಲಿ ಲಾಂಗ್ ಹಿಡಿದು ಉದ್ಯಮಿ ಮೇಲೆ ಹಲ್ಲೆ ಯತ್ನ;ಪ್ರಕರಣ ದಾಖಲಿಸಲು ವಿಳಂಬ, ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ದಾಖಲಾಯ್ತು ಕೇಸ್
ಬೆಂಗಳೂರಿನಲ್ಲಿ ಉದ್ಯಮಿ ಮೇಲೆ ಹಲ್ಲೆ
Jagadisha B
| Updated By: ಕಿರಣ್ ಹನುಮಂತ್​ ಮಾದಾರ್

Updated on:Oct 29, 2023 | 6:45 PM

Share

ಬೆಂಗಳೂರು, ಅ.29: ಮಚ್ಚಿನಿಂದ ಉದ್ಯಮಿ ಮೇಲೆ ಹಲ್ಲೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರ ಗಾಯವಾದರೂ ಐಪಿಸಿ ಸೆಕ್ಷನ್ 307ರ ಅಡಿ ಆವಲಹಳ್ಳಿ ಪೊಲೀಸರು(Avalahalli Police Station) ಕೇಸ್ ದಾಖಲಿಸಿಲ್ಲ. ಈ ಹಿನ್ನಲೆ ರಿಯಲ್ ಎಸ್ಟೇಟ್‌ ದಂಧೆಕೋರರ ಜೊತೆ ಪೊಲೀಸರು ಶಾಮೀಲು ಆಗಿರುವ ಆರೋಪ ಕೇಳಿಬಂದಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಹಿರಿಯ ಅಧಿಕಾರಿಗಳು ಸೂಚನೆ  ನೀಡಿದ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಚ್ಚಿನೇಟಿನಿಂದ ತಲೆಗೆ ಗಂಭೀರ ಗಾಯವಾಗಿದ್ರೂ ಕೇಸ್ ದಾಖಲಿಸಿರಲಿಲ್ಲ

ಹೌದು, ಲಾಂಗ್​ ಏಟಿನಿಂದ ತಲೆಗೆ ಗಂಭೀರ ಗಾಯವಾಗಿದ್ದರೂ, ಪೊಲೀಸರು ಕೇಸ್ ದಾಖಲಿಸಿರಲಿಲ್ಲ. ಈ ಉದ್ಯಮಿ ಮಾರ್ಗೊಂಡನಹಳ್ಳಿ ಬಳಿ ಜಮೀನು ಖರೀದಿಸಿದ್ದ. ಇದೇ ವಿಚಾರಕ್ಕೆ ಸ್ಥಳೀಯರಿಂದ ಉದ್ಯಮಿ ಮೇಲೆ ಪದೇಪದೆ ಹಲ್ಲೆಗೆ ಯತ್ನವಾಗುತ್ತಿತ್ತು. ಬಳಿಕ ಖರೀದಿಸಿದ ಜಮೀನಿನ ಕಾವಲಿಗೆ ಸೆಕ್ಯೂರಿಟಿ ನೇಮಿಸಿದ್ರು ಕೂಡ ಬೆದರಿಕೆ ಕೇಳಿಬಂದಿದ್ದು, ಸೆಕ್ಯೂರಿಟಿ ವಾಸವಾಗಿದ್ದ ಕಂಟೇನರ್​ಗೂ ಬೆಂಕಿಯಿಟ್ಟು ಅಟ್ಟಹಾಸ ಮೆರೆದಿದ್ದರು. ಬಳಿಕ ಜಮೀನಿನಲ್ಲಿ ಕೆಲಸ ಮಾಡಿಸಲು ಹೋದ ಉದ್ಯಮಿ ಮೇಲೆ ಹಲ್ಲೆ ಮಾಡಿದ್ದರು. ಸ್ಥಳೀಯ ವ್ಯಕ್ತಿ ಲಾಂಗ್ ಹಿಡಿದುಕೊಂಡು ಬರುತ್ತಿರುವ ದೃಶ್ಯ ಟಿವಿ9ಗೆ ಲಭ್ಯವಾಗಿದೆ.

ಇದನ್ನೂ ಓದಿ:ನೆಲಮಂಗಲ: ಕಾರಿನ ಗ್ಲಾಸ್ ಒಡೆದು ವಿಜ್ಞಾನಿ ಮೇಲೆ ಹಲ್ಲೆಗೆ ಯತ್ನಿಸಿದ್ದ ಮೂವರು ದರೋಡೆಕೋರರು ಅರೆಸ್ಟ್, ಇಬ್ಬರು ಪರಾರಿ

ವೇಸ್ಟೆಜ್​​​​ ಸುಡಲು ಹಚ್ಚಿದ ಬೆಂಕಿಗೆ ಗ್ಯಾರೇಜ್​​​​ನಲ್ಲಿದ್ದ ಲಾರಿ ಬೆಂಕಿಗಾಹುತಿ

ವಿಜಯಪುರ: ವೇಸ್ಟೆಜ್​ ​​ಸುಡಲು ಹಚ್ಚಿದ ಬೆಂಕಿಯಿಂದ ಗ್ಯಾರೇಜ್​​​​ನಲ್ಲಿದ್ದ ಲಾರಿ ಬೆಂಕಿಗಾಹುತಿಯಾದ ಘಟನೆ ನಗರದ ಶಿಕಾರಖಾನೆ ಬಳಿಯ ಗ್ಯಾರೇಜ್​​ನಲ್ಲಿ ತಡರಾತ್ರಿ ನಡೆದಿದೆ. ನೂರ್ ಅಹ್ಮದ್ ಎಂಬುವರಿಗೆ ಸೇರಿದ ಲಾರಿ ಇದಾಗಿದ್ದು, ಬೆಂಕಿಯ ಕೆನ್ನಾಲಿಗೆಗೆ ಗ್ಯಾರೇಜ್​ನಲ್ಲಿದ್ದ ಲಾರಿ ಸೇರಿ ಇತರೇ ವಸ್ತುಗಳು ಸುಟ್ಟು ಭಸ್ಮವಾಗಿದೆ. ಬೆಂಕಿ ನಂದಿಸಲು ಅಗ್ನಿಶಾಮಕದಳ ಸಿಬ್ಬಂದಿ ಹರಸಾಹಸ ಪಟ್ಟಿದ್ದು, ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:40 pm, Sun, 29 October 23

ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!