AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಲಾಂಗ್ ಹಿಡಿದು ಉದ್ಯಮಿ ಮೇಲೆ ಹಲ್ಲೆ ಯತ್ನ;ಪ್ರಕರಣ ದಾಖಲಿಸಲು ವಿಳಂಬ, ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ದಾಖಲಾಯ್ತು ಕೇಸ್

ಲಾಂಗ್​ ಏಟಿನಿಂದ ತಲೆಗೆ ಗಂಭೀರ ಗಾಯವಾಗಿದ್ದರೂ, ಪೊಲೀಸರು ಕೇಸ್ ದಾಖಲಿಸಿರಲಿಲ್ಲ. ಈ ಉದ್ಯಮಿ ಮಾರ್ಗೊಂಡನಹಳ್ಳಿ ಬಳಿ ಜಮೀನು ಖರೀದಿಸಿದ್ದ. ಇದೇ ವಿಚಾರಕ್ಕೆ ಸ್ಥಳೀಯರಿಂದ ಉದ್ಯಮಿ ಮೇಲೆ ಪದೇಪದೆ ಹಲ್ಲೆಗೆ ಯತ್ನವಾಗುತ್ತಿತ್ತು. ಬಳಿಕ ಖರೀದಿಸಿದ ಜಮೀನಿನ ಕಾವಲಿಗೆ ಸೆಕ್ಯೂರಿಟಿ ನೇಮಿಸಿದ್ರು ಕೂಡ ಬೆದರಿಕೆ ಕೇಳಿಬಂದಿದ್ದು, ಸೆಕ್ಯೂರಿಟಿ ವಾಸವಾಗಿದ್ದ ಕಂಟೇನರ್​ಗೂ ಬೆಂಕಿಯಿಟ್ಟು ಅಟ್ಟಹಾಸ ಮೆರೆದಿದ್ದರು.

ಬೆಂಗಳೂರಿನಲ್ಲಿ ಲಾಂಗ್ ಹಿಡಿದು ಉದ್ಯಮಿ ಮೇಲೆ ಹಲ್ಲೆ ಯತ್ನ;ಪ್ರಕರಣ ದಾಖಲಿಸಲು ವಿಳಂಬ, ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ದಾಖಲಾಯ್ತು ಕೇಸ್
ಬೆಂಗಳೂರಿನಲ್ಲಿ ಉದ್ಯಮಿ ಮೇಲೆ ಹಲ್ಲೆ
Jagadisha B
| Edited By: ಕಿರಣ್ ಹನುಮಂತ್​ ಮಾದಾರ್|

Updated on:Oct 29, 2023 | 6:45 PM

Share

ಬೆಂಗಳೂರು, ಅ.29: ಮಚ್ಚಿನಿಂದ ಉದ್ಯಮಿ ಮೇಲೆ ಹಲ್ಲೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರ ಗಾಯವಾದರೂ ಐಪಿಸಿ ಸೆಕ್ಷನ್ 307ರ ಅಡಿ ಆವಲಹಳ್ಳಿ ಪೊಲೀಸರು(Avalahalli Police Station) ಕೇಸ್ ದಾಖಲಿಸಿಲ್ಲ. ಈ ಹಿನ್ನಲೆ ರಿಯಲ್ ಎಸ್ಟೇಟ್‌ ದಂಧೆಕೋರರ ಜೊತೆ ಪೊಲೀಸರು ಶಾಮೀಲು ಆಗಿರುವ ಆರೋಪ ಕೇಳಿಬಂದಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಹಿರಿಯ ಅಧಿಕಾರಿಗಳು ಸೂಚನೆ  ನೀಡಿದ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಚ್ಚಿನೇಟಿನಿಂದ ತಲೆಗೆ ಗಂಭೀರ ಗಾಯವಾಗಿದ್ರೂ ಕೇಸ್ ದಾಖಲಿಸಿರಲಿಲ್ಲ

ಹೌದು, ಲಾಂಗ್​ ಏಟಿನಿಂದ ತಲೆಗೆ ಗಂಭೀರ ಗಾಯವಾಗಿದ್ದರೂ, ಪೊಲೀಸರು ಕೇಸ್ ದಾಖಲಿಸಿರಲಿಲ್ಲ. ಈ ಉದ್ಯಮಿ ಮಾರ್ಗೊಂಡನಹಳ್ಳಿ ಬಳಿ ಜಮೀನು ಖರೀದಿಸಿದ್ದ. ಇದೇ ವಿಚಾರಕ್ಕೆ ಸ್ಥಳೀಯರಿಂದ ಉದ್ಯಮಿ ಮೇಲೆ ಪದೇಪದೆ ಹಲ್ಲೆಗೆ ಯತ್ನವಾಗುತ್ತಿತ್ತು. ಬಳಿಕ ಖರೀದಿಸಿದ ಜಮೀನಿನ ಕಾವಲಿಗೆ ಸೆಕ್ಯೂರಿಟಿ ನೇಮಿಸಿದ್ರು ಕೂಡ ಬೆದರಿಕೆ ಕೇಳಿಬಂದಿದ್ದು, ಸೆಕ್ಯೂರಿಟಿ ವಾಸವಾಗಿದ್ದ ಕಂಟೇನರ್​ಗೂ ಬೆಂಕಿಯಿಟ್ಟು ಅಟ್ಟಹಾಸ ಮೆರೆದಿದ್ದರು. ಬಳಿಕ ಜಮೀನಿನಲ್ಲಿ ಕೆಲಸ ಮಾಡಿಸಲು ಹೋದ ಉದ್ಯಮಿ ಮೇಲೆ ಹಲ್ಲೆ ಮಾಡಿದ್ದರು. ಸ್ಥಳೀಯ ವ್ಯಕ್ತಿ ಲಾಂಗ್ ಹಿಡಿದುಕೊಂಡು ಬರುತ್ತಿರುವ ದೃಶ್ಯ ಟಿವಿ9ಗೆ ಲಭ್ಯವಾಗಿದೆ.

ಇದನ್ನೂ ಓದಿ:ನೆಲಮಂಗಲ: ಕಾರಿನ ಗ್ಲಾಸ್ ಒಡೆದು ವಿಜ್ಞಾನಿ ಮೇಲೆ ಹಲ್ಲೆಗೆ ಯತ್ನಿಸಿದ್ದ ಮೂವರು ದರೋಡೆಕೋರರು ಅರೆಸ್ಟ್, ಇಬ್ಬರು ಪರಾರಿ

ವೇಸ್ಟೆಜ್​​​​ ಸುಡಲು ಹಚ್ಚಿದ ಬೆಂಕಿಗೆ ಗ್ಯಾರೇಜ್​​​​ನಲ್ಲಿದ್ದ ಲಾರಿ ಬೆಂಕಿಗಾಹುತಿ

ವಿಜಯಪುರ: ವೇಸ್ಟೆಜ್​ ​​ಸುಡಲು ಹಚ್ಚಿದ ಬೆಂಕಿಯಿಂದ ಗ್ಯಾರೇಜ್​​​​ನಲ್ಲಿದ್ದ ಲಾರಿ ಬೆಂಕಿಗಾಹುತಿಯಾದ ಘಟನೆ ನಗರದ ಶಿಕಾರಖಾನೆ ಬಳಿಯ ಗ್ಯಾರೇಜ್​​ನಲ್ಲಿ ತಡರಾತ್ರಿ ನಡೆದಿದೆ. ನೂರ್ ಅಹ್ಮದ್ ಎಂಬುವರಿಗೆ ಸೇರಿದ ಲಾರಿ ಇದಾಗಿದ್ದು, ಬೆಂಕಿಯ ಕೆನ್ನಾಲಿಗೆಗೆ ಗ್ಯಾರೇಜ್​ನಲ್ಲಿದ್ದ ಲಾರಿ ಸೇರಿ ಇತರೇ ವಸ್ತುಗಳು ಸುಟ್ಟು ಭಸ್ಮವಾಗಿದೆ. ಬೆಂಕಿ ನಂದಿಸಲು ಅಗ್ನಿಶಾಮಕದಳ ಸಿಬ್ಬಂದಿ ಹರಸಾಹಸ ಪಟ್ಟಿದ್ದು, ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:40 pm, Sun, 29 October 23

Follow Us
Jagadisha B
Jagadisha B

ಜಗದೀಶ್​ ಬಸವರಾಜು ಟಿವಿ9 ಕನ್ನಡದ ವರದಿಗಾರರಲ್ಲಿ ಒಬ್ಬರು. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು