ಬೆಂಗಳೂರು: ಆಪ್​ ರಾಜ್ಯ ​ಯುವ ಘಟಕದ ಉಪಾಧ್ಯಕ್ಷರ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆಗೆ ಯತ್ನ

ಆಮ್​ ಆದ್ಮಿ ಪಾರ್ಟಿ ರಾಜ್ಯ ​ಯುವ ಘಟಕದ ಉಪಾಧ್ಯಕ್ಷ ಗಿರೀಶ್ ಕುಮಾರ್ ನಾಯ್ಡು ಅವರ ಮೇಲೆ ಗಾಜಿನ ಬಿಯರ್ ಬಾಟಲಿಯಿಂದ ಹಲ್ಲೆ ಮಾಡಲು ಯತ್ನಿಸಿರುವ ಘಟನೆ ಅಮೃತಹಳ್ಳಿ ಠಾಣೆ ವ್ಯಾಪ್ತಿಯ ಜಕ್ಕೂರು ಮುಖ್ಯರಸ್ತೆಯಲ್ಲಿ ನಡೆದಿದೆ.

ಬೆಂಗಳೂರು: ಆಪ್​ ರಾಜ್ಯ ​ಯುವ ಘಟಕದ ಉಪಾಧ್ಯಕ್ಷರ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆಗೆ ಯತ್ನ
ಸಾಂಧರ್ಬಿಕ ಚಿತ್ರ

Updated on: Mar 19, 2023 | 10:10 AM

ಬೆಂಗಳೂರು: ಆಮ್​ ಆದ್ಮಿ ಪಾರ್ಟಿ (AAP) ರಾಜ್ಯ ​ಯುವ ಘಟಕದ ಉಪಾಧ್ಯಕ್ಷ (AAP state youth unit vice president) ಗಿರೀಶ್ ಕುಮಾರ್ ನಾಯ್ಡು ಅವರ ಮೇಲೆ ಗಾಜಿನ ಬಿಯರ್ ಬಾಟಲಿಯಿಂದ ಹಲ್ಲೆ ಮಾಡಲು ಯತ್ನಿಸಿರುವ ಘಟನೆ ಅಮೃತಹಳ್ಳಿ ಠಾಣೆ ವ್ಯಾಪ್ತಿಯ ಜಕ್ಕೂರು ಮುಖ್ಯರಸ್ತೆಯಲ್ಲಿ ನಡೆದಿದೆ. ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗಿರೀಶ್ ಕುಮಾರ್ ನಾಯ್ಡು, ಯಲಹಂಕದಿಂದ ಕೆ.ಆರ್​.ಪುರಂ ಆಸ್ಪತ್ರೆಗೆ ತೆರಳುತ್ತಿದ್ದರು. ಮಾರ್ಗ ಮಧ್ಯೆ 2 ಡಿಯೋ ಬೈಕ್​ನಲ್ಲಿ ಬಂದ ನಾಲ್ವರು ಯುವಕರು, ಕಾರಿಗೆ ಓವರ್ ಟೇಕ್ ಮಾಡಿ ಕಾರನ್ನು ಅಡ್ಡಗಟ್ಟಿದ್ದಾರೆ. ನಂತರ ಬಿಯರ್ ಬಾಟಲ್ ಒಡೆದು, ಬಾಟಲ್ ಗಾಜಿನಿಂದ ಗಿರೀಶ್​ ಮತ್ತು ಜೊತೆಯಲ್ಲಿದ್ದವರ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದಾರೆ.

ಸದ್ಯ ಗಿರೀಶ್​ ಕುಮಾರ್​ ನಾಯ್ಡು ಪೊಲೀಸ್ ಆಯುಕ್ತರಿಗೆ ಹಾಗೂ ಅಮೃತಹಳ್ಳಿ ಠಾಣೆಗೆ ದೂರು ನೀಡಿದ್ದಾರೆ. ದೂರಿನನ್ವಯ ಅಮೃತಹಳ್ಳಿ ಪೊಲೀಸ್ ಠಾಣೆ ಪೊಲೀಸರು ಎಫ್.ಐ.ಆರ್ ದಾಖಲಿಸಿದ್ದು, ಪೊಲೀಸರು ಆರೋಪಿಗಳಿಗಾಗಿ ತಲಾಶ್ ನಡೆಸಿದ್ದಾರೆ.

ಇದನ್ನೂ ಓದಿ: ಚುನಾವಣೆ ಹೊಸ್ತಿಲಲ್ಲಿ ಫುಲ್ ಅಲರ್ಟ್ ಆದ ಪೊಲೀಸರು; ಮತದಾರರಿಗೆ ಹಂಚಲು ಸಂಗ್ರಹಿಸಿದ್ದ ಅಕ್ಕಿ ಚೀಲ, ಮದ್ಯ ವಶ

ಗಿರೀಶ್​ ಕುಮಾರ್​ ನಾಯ್ಡು ಈ ಹಿಂದೆ ಓರ್ವ ಬಿಲ್ಡರ್ ಸೇರಿ ಬಿಬಿಎಂಪಿ, ಬಿಡಿಎ, ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳು, ಮತ್ತು ರಾಜಕಾರಣಿಗಳ ವಿರುದ್ಧ 430 ಕ್ಕೂ ಹೆಚ್ಚು ದೂರು ನೀಡಿದ್ದರು. ಈ ಹಿನ್ನೆಲೆ ಅಪರಿಚಿತ ಸಂಖ್ಯೆಯಿಂದ ಬೆದರಿಕೆ ಕರೆಗಳು ಬರುತ್ತಿದ್ದವು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:03 am, Sun, 19 March 23