AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

AICC ಹೆಸರಲ್ಲಿ ಕರೆ ಮಾಡಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ವಂಚನೆ ಯತ್ನ; ಎಚ್ಚರವಹಿಸುಂತೆ ಸೂಚನೆ

ಟಿಕೆಟ್ ಆಕಾಂಕ್ಷಿಗಳಿಗೆ AICC ಹೆಸರಲ್ಲಿ ಕರೆ ಮಾಡಿ ವಂಚನೆಗೆ ಯತ್ನಿಸಲಾಗುತ್ತಿದೆ. ಇಂತಹ ಕರೆಗಳಿಗೆ ಕಿವಿಗೊಡದಂತೆ ಎಚ್ಚರವಹಿಸುಂತೆ ಸೂಚನೆ ನೀಡಲಾಗಿದೆ.

ಆಯೇಷಾ ಬಾನು
|

Updated on:Mar 19, 2023 | 9:50 AM

Share

ಬೆಂಗಳೂರು: ಕರ್ನಾಟಕ ವಿಧಾನ ಸಭಾ ಚುನಾವಣೆಗೆ(Karnataka Assembly Elections 2023) ವೇದಿಕೆ ಸಜ್ಜಾಗಿದೆ. ರಾಜಕೀಯ ಪಕ್ಷಗಳು ಕಾಲಿಗೆ ಚಕ್ರ ಕಟ್ಟಿಕೊಂಡು ಪ್ರಚಾರ ಆರಂಭಿಸಿವೆ. ಇನ್ನು ಮತ್ತೊಂದೆಡೆ ಚುನಾವಣೆಯ ಲಾಭ ಪಡೆಯಲು ವಂಚಕರು ಖತರ್ನಾಕ್ ಪ್ಲಾನ್​ಗಳನ್ನು ಮಾಡುತ್ತಿದ್ದಾರೆ. ಟಿಕೆಟ್ ಆಕಾಂಕ್ಷಿಗಳಿಗೆ AICC ಹೆಸರಲ್ಲಿ ಕರೆ ಮಾಡಿ ವಂಚನೆಗೆ ಯತ್ನಿಸಿರುವ ಘಟನೆ ನಡೆದಿದೆ. ದೆಹಲಿಯ ಎಐಸಿಸಿ ಕಚೇರಿಯಿಂದ ಮಾತಾಡುತ್ತಿದ್ದೇವೆ ಎಂದು ಟಿಕೆಟ್ ಆಕಾಂಕ್ಷಿಗಳಿಗೆ ಕರೆ ಮಾಡಿ ವಂಚನೆಗೆ ಯತ್ನ ನಡೆದಿದೆ.

8287309623 ಮೊಬೈಲ್ ನಂಬರ್​​ನಿಂದ ಅಪರಿಚಿತ ವ್ಯಕ್ತಿಗಳು ಆಕಾಂಕ್ಷಿಗಳಿಗೆ ಕರೆ ಮಾಡಿ ಹಣ ಪೀಕಲು ಮುಂದಾಗಿದ್ದಾರೆ. 2 ಮತ್ತು 3ನೇ ಸಾಲಿನ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ವಂಚಕರು ಕರೆ ಮಾಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಮೊದಲಿಗೆ ವಂಚಕರು ಆಕಾಂಕ್ಷಿಗಳಿಗೆ ಕರೆ ಮಾಡಿ, ವಿಧಾನಸಭಾ ಚುನಾವಣೆ ಸ್ಪರ್ಧೆ ಸಂಬಂಧ ಪಟ್ಟಿ ಸಿದ್ಧಗೊಂಡಿದೆ. ಚುನಾವಣೆ ಪಟ್ಟಿಯಲ್ಲಿ ನಿಮ್ಮ ಹೆಸರಿದೆ ಎಂದು ಆಸೆ ಹೊಟ್ಟಿಸುತ್ತಾರೆ. ಬಳಿಕ ದಯವಿಟ್ಟು ನಿಮ್ಮ ಗುರುತಿನ ಚೀಟಿ ಜೊತೆ ಹಣ ಕಳುಹಿಸಿ ಎಂದು ಬೇಡಿಕೆ ಇಡುತ್ತಾರೆ. ಗುರುತಿನ ಚೀಟಿಯನ್ನು ₹39,000 ರೂ ಜೊತೆಗೆ 48,000 ರೂ. ಕಳಿಸುವಂತೆ ಡಿಮ್ಯಾಂಡ್ ಮಾಡುತ್ತಾರೆ.ಸದ್ಯ AICC ಹೆಸರಲ್ಲಿ ವಂಚನೆ ಗ್ಯಾಂಗ್ ಕೃತ್ಯವೆಸಗುತ್ತಿರುವ ಶಂಕೆ ವ್ಯಕ್ತವಾಗಿದ್ದು ಈ ಕುರಿತು ಪಕ್ಷದ ಎಲ್ಲಾ ಉನ್ನತ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಇಂತಹ ಕರೆಗಳಿಗೆ ಕಿವಿಗೊಡದಂತೆ ಎಚ್ಚರವಹಿಸುಂತೆ ಸೂಚನೆ ನೀಡಲಾಗಿದೆ. ಟಿಕೆಟ್​ ಆಕಾಂಕ್ಷಿಗಳಿಗೆ ಸೂಚಿಸಿರುವ ಸ್ಕ್ರೀನ್​​ ಶಾಟ್​​ ವೈರಲ್​​ ಆಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:27 am, Sun, 19 March 23

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ