AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

AICC ಹೆಸರಲ್ಲಿ ಕರೆ ಮಾಡಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ವಂಚನೆ ಯತ್ನ; ಎಚ್ಚರವಹಿಸುಂತೆ ಸೂಚನೆ

ಟಿಕೆಟ್ ಆಕಾಂಕ್ಷಿಗಳಿಗೆ AICC ಹೆಸರಲ್ಲಿ ಕರೆ ಮಾಡಿ ವಂಚನೆಗೆ ಯತ್ನಿಸಲಾಗುತ್ತಿದೆ. ಇಂತಹ ಕರೆಗಳಿಗೆ ಕಿವಿಗೊಡದಂತೆ ಎಚ್ಚರವಹಿಸುಂತೆ ಸೂಚನೆ ನೀಡಲಾಗಿದೆ.

ಆಯೇಷಾ ಬಾನು
ಆಯೇಷಾ ಬಾನು|

Updated on:Mar 19, 2023 | 9:50 AM

Share

ಬೆಂಗಳೂರು: ಕರ್ನಾಟಕ ವಿಧಾನ ಸಭಾ ಚುನಾವಣೆಗೆ(Karnataka Assembly Elections 2023) ವೇದಿಕೆ ಸಜ್ಜಾಗಿದೆ. ರಾಜಕೀಯ ಪಕ್ಷಗಳು ಕಾಲಿಗೆ ಚಕ್ರ ಕಟ್ಟಿಕೊಂಡು ಪ್ರಚಾರ ಆರಂಭಿಸಿವೆ. ಇನ್ನು ಮತ್ತೊಂದೆಡೆ ಚುನಾವಣೆಯ ಲಾಭ ಪಡೆಯಲು ವಂಚಕರು ಖತರ್ನಾಕ್ ಪ್ಲಾನ್​ಗಳನ್ನು ಮಾಡುತ್ತಿದ್ದಾರೆ. ಟಿಕೆಟ್ ಆಕಾಂಕ್ಷಿಗಳಿಗೆ AICC ಹೆಸರಲ್ಲಿ ಕರೆ ಮಾಡಿ ವಂಚನೆಗೆ ಯತ್ನಿಸಿರುವ ಘಟನೆ ನಡೆದಿದೆ. ದೆಹಲಿಯ ಎಐಸಿಸಿ ಕಚೇರಿಯಿಂದ ಮಾತಾಡುತ್ತಿದ್ದೇವೆ ಎಂದು ಟಿಕೆಟ್ ಆಕಾಂಕ್ಷಿಗಳಿಗೆ ಕರೆ ಮಾಡಿ ವಂಚನೆಗೆ ಯತ್ನ ನಡೆದಿದೆ.

8287309623 ಮೊಬೈಲ್ ನಂಬರ್​​ನಿಂದ ಅಪರಿಚಿತ ವ್ಯಕ್ತಿಗಳು ಆಕಾಂಕ್ಷಿಗಳಿಗೆ ಕರೆ ಮಾಡಿ ಹಣ ಪೀಕಲು ಮುಂದಾಗಿದ್ದಾರೆ. 2 ಮತ್ತು 3ನೇ ಸಾಲಿನ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ವಂಚಕರು ಕರೆ ಮಾಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಮೊದಲಿಗೆ ವಂಚಕರು ಆಕಾಂಕ್ಷಿಗಳಿಗೆ ಕರೆ ಮಾಡಿ, ವಿಧಾನಸಭಾ ಚುನಾವಣೆ ಸ್ಪರ್ಧೆ ಸಂಬಂಧ ಪಟ್ಟಿ ಸಿದ್ಧಗೊಂಡಿದೆ. ಚುನಾವಣೆ ಪಟ್ಟಿಯಲ್ಲಿ ನಿಮ್ಮ ಹೆಸರಿದೆ ಎಂದು ಆಸೆ ಹೊಟ್ಟಿಸುತ್ತಾರೆ. ಬಳಿಕ ದಯವಿಟ್ಟು ನಿಮ್ಮ ಗುರುತಿನ ಚೀಟಿ ಜೊತೆ ಹಣ ಕಳುಹಿಸಿ ಎಂದು ಬೇಡಿಕೆ ಇಡುತ್ತಾರೆ. ಗುರುತಿನ ಚೀಟಿಯನ್ನು ₹39,000 ರೂ ಜೊತೆಗೆ 48,000 ರೂ. ಕಳಿಸುವಂತೆ ಡಿಮ್ಯಾಂಡ್ ಮಾಡುತ್ತಾರೆ.ಸದ್ಯ AICC ಹೆಸರಲ್ಲಿ ವಂಚನೆ ಗ್ಯಾಂಗ್ ಕೃತ್ಯವೆಸಗುತ್ತಿರುವ ಶಂಕೆ ವ್ಯಕ್ತವಾಗಿದ್ದು ಈ ಕುರಿತು ಪಕ್ಷದ ಎಲ್ಲಾ ಉನ್ನತ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಇಂತಹ ಕರೆಗಳಿಗೆ ಕಿವಿಗೊಡದಂತೆ ಎಚ್ಚರವಹಿಸುಂತೆ ಸೂಚನೆ ನೀಡಲಾಗಿದೆ. ಟಿಕೆಟ್​ ಆಕಾಂಕ್ಷಿಗಳಿಗೆ ಸೂಚಿಸಿರುವ ಸ್ಕ್ರೀನ್​​ ಶಾಟ್​​ ವೈರಲ್​​ ಆಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:27 am, Sun, 19 March 23

Follow Us
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ