AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಗ್ರಾಮಾಂತರ ಎಸ್ಪಿ ಕಚೇರಿ ಆಸ್ತಿಯನ್ನೇ ಮಾರಾಟ ಮಾಡಲು ಯತ್ನ: ಆರೋಪಿಗಳ ಬಂಧನ

ಬೆಂಗಳೂರಿನ ಹೃದಯ ಭಾಗದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆಸ್ತಿ ದಾಖಲೆಯನ್ನು ನಕಲಿ ಮಾಡಿಕೊಂಡಿರೋ ಕೆಲ ಭೂಗಳ್ಳರು ಸದ್ದಿಲ್ಲದೇ ಎಸ್​ಪಿ ಕಚೇರಿಯ ಆಸ್ತಿಯನ್ನು ಮಾರಾಟ ಮಾಡಲು ಯತ್ನಿಸಿ ಸಿಕ್ಕಿಬಿದ್ದಿದ್ದಾರೆ.

ಬೆಂಗಳೂರಿನಲ್ಲಿ ಗ್ರಾಮಾಂತರ ಎಸ್ಪಿ ಕಚೇರಿ ಆಸ್ತಿಯನ್ನೇ ಮಾರಾಟ ಮಾಡಲು ಯತ್ನ: ಆರೋಪಿಗಳ ಬಂಧನ
ಸಾಂದರ್ಭಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Jun 07, 2024 | 9:32 AM

Share

ಬೆಂಗಳೂರು, ಜೂನ್ 7: ಬೆಂಗಳೂರು ನಗರದಲ್ಲಿ (Bengaluru) ಖಾಲಿ ಜಾಗ ಕಾಣಿಸಿದರೆ ಸಾಕು. ಯಾರದ್ದೋ ಜಾಗಕ್ಕೆ ಯಾರೋ ಬೇಲಿ ಹಾಕಲು ಮುಂದಾಗುತ್ತಾರೆ. ಇನ್ಯಾರೋ ಬೇಲಿ ಹಾಕ್ತಾರೆ. ಇಂತಹ ಪ್ರಕರಣಗಳಿಂದ ಜನ ತತ್ತರಿಸಿ ಹೋಗಿದ್ದಾರೆ. ಒಂದು ಸೈಟ್ ತೆಗೆದುಕೊಳ್ಳಬೇಕಾದರೆ ಸಾವಿರ ಸಲ ಯೋಚನೆ ಮಾಡಿ, ದಾಖಲೆಗಳ ಪರಿಶೀಲಿಸಿ ಖರೀದಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರ ನಡುವೆ, ಖಾಲಿ ಸೈಟ್​ಗಳ ನಕಲಿ ದಾಖಲೆ ಸೃಷ್ಟಿಸಿ ಭೂ ಕಬಳಿಕೆ ಮಾಡ್ತಿರುವ‌ ಭೂಗಳ್ಳರು ಧೈರ್ಯ ಮಾಡಿ ಸೂಪರಿಡೆಂಟ್ ಆಪ್ ಪೊಲೀಸ್ ಕಚೇರಿಯ (Bengaluru Rural SP Office) ಆಸ್ತಿಯನ್ನೇ ನಕಲಿ ದಾಖಲೆ ಸೃಷ್ಟಿಸಿ ಮಾರಾಟಕ್ಕೆ ಯತ್ನಿಸಿ ಪೊಲೀಸರ ಅತಿಥಿಯಾಗಿದ್ದಾರೆ.

ಬೆಂಗಳೂರಿನ ಹೃದಯ ಭಾಗದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ನೇಪಾಳ ರಾಜರ ಹೆಸರಿನಲ್ಲಿದೆಯಂತೆ! ಅದೊಂದ್ ಕಡೆ ಸಿವಿಲ್ ಡಿಸ್​​ಪ್ಯೂಟ್ ಇದೆ. ಇದರ ನಡುವೆ ಎಸ್​ಪಿ ಕಚೇರಿಯ ಆಸ್ತಿ ದಾಖಲೆಗಳನ್ನು ನಕಲಿ ಮಾಡಿಕೊಂಡಿರೋ ಕೆಲ ಭೂಗಳ್ಳರು ಸದ್ದಿಲ್ಲದೇ ಎಸ್​ಪಿ ಕಚೇರಿಯ ಆಸ್ತಿಯನ್ನು ಮಾರಾಟ ಮಾಡಲು ಯತ್ನಿಸಿದ್ದಾರೆ.

ಅದರ ಮೊದಲ ಹಂತವಾಗಿ ಹನೀಫ್ ಎಂಬಾತ ಎಸ್​​ಪಿ ಕಚೇರಿಯ ಪೋಟೋಗಳು ಹಾಗೂ ವಿಡಿಯೋಗಳನ್ನು ತೆಗೆದು ಗ್ರಾಹಕರಿಗೆ ಶೇರ್ ಮಾಡಲು ಯತ್ನಿಸಿದ್ದಾನೆ. ಅದನ್ನು ಗಮನಿಸಿದ ಎಸ್​​ಪಿ ಕಚೇರಿಯಲ್ಲಿ ಕೆಲಸ ಮಾಡುವ ವೈರ್ ಲೆಸ್ ವಿಭಾಗದ ಇನ್ಸ್​​ಪೆಕ್ಟರ್ ಸಂತೋಷ್ ಗೌಡ ಪ್ರಶ್ನಿಸಿದ್ದಾರೆ. ಈ ವೇಳೆ ಆರೋಪಿ ಈ ಜಾಗ ನಮ್ಮದು, ನನ್ನ ಹೆಸರಿಗೆ ಜಿಪಿಎ ಇದೆ ಎಂದು ಅವಾಜ್ ಹಾಕಿದ್ದಾನೆ. ಇದರಿಂದ ಆತಂಕಕ್ಕೊಳಗಾದ ಇನ್ಸ್​​ಪೆಕ್ಟರ್ ಸಂತೋಷ್ ಗೌಡ ಹಿರಿಯ ಅಧಿಕಾರಿಗಳ ಗಮನಕ್ಕೆ ವಿಷಯ ಮುಟ್ಟಿಸಿ ಹನೀಫ್ ಸೇರಿದಂತೆ ನಕಲಿ ದಾಖಲೆ ಸೃಷ್ಟಿಸಿ ಎಸ್​ಪಿ ಕಚೇರಿ ಆಸ್ತಿಯ ಮಾರಾಟಕ್ಕೆ ಮುಂದಾದ ರಾಜಶೇಖರ್, ಮೊಹಮದ್ ನದೀಮ್, ಮೋಹನ್ ಶೆಟ್ಟಿ ಹಾಗೂ ಗಣಪತಿ ಎಂಬುವರ ಮೇಲೆ ದೂರು‌ ದಾಖಲಿಸಿದ್ದಾರೆ.

ಇದನ್ನೂ ಓದಿ: ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 4.77 ಕೋಟಿ ರೂ. ಮೌಲ್ಯದ ಚಿನ್ನ ಬೆಂಗಳೂರಿನಲ್ಲಿ ಸೀಜ್: ಇಬ್ಬರ ಬಂಧನ​​

ಈ ದೂರಿನ ಆಧಾರದ ಮೇಲೆ ಐಪಿಸಿ ಸೆಕ್ಷನ್ 353, 447 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಹೈಗ್ರೌಂಡ್ಸ್ ಪೊಲೀಸರು ಸದ್ಯ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಉಳಿದಂತೆ ಕೆಲವರು ತಲೆಮರೆಸಿಕೊಂಡಿದ್ದು ಅವರ ಬಂಧನಕ್ಕೂ ಹೈಗ್ರೌಂಡ್ಸ್ ಪೊಲೀಸರು ಬಲೆ ಬೀಸಿದ್ದಾರೆ.

ರಾಜ್ಯದ ಮತ್ತಷ್ಟುವ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:08 am, Fri, 7 June 24

Follow Us
ಪ್ರಜ್ವಲ್​ ಕುಮಾರ್ ಎನ್​ ವೈ
ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್