AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಗ್ರಾಮಾಂತರ ಎಸ್ಪಿ ಕಚೇರಿ ಆಸ್ತಿಯನ್ನೇ ಮಾರಾಟ ಮಾಡಲು ಯತ್ನ: ಆರೋಪಿಗಳ ಬಂಧನ

ಬೆಂಗಳೂರಿನ ಹೃದಯ ಭಾಗದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆಸ್ತಿ ದಾಖಲೆಯನ್ನು ನಕಲಿ ಮಾಡಿಕೊಂಡಿರೋ ಕೆಲ ಭೂಗಳ್ಳರು ಸದ್ದಿಲ್ಲದೇ ಎಸ್​ಪಿ ಕಚೇರಿಯ ಆಸ್ತಿಯನ್ನು ಮಾರಾಟ ಮಾಡಲು ಯತ್ನಿಸಿ ಸಿಕ್ಕಿಬಿದ್ದಿದ್ದಾರೆ.

ಬೆಂಗಳೂರಿನಲ್ಲಿ ಗ್ರಾಮಾಂತರ ಎಸ್ಪಿ ಕಚೇರಿ ಆಸ್ತಿಯನ್ನೇ ಮಾರಾಟ ಮಾಡಲು ಯತ್ನ: ಆರೋಪಿಗಳ ಬಂಧನ
ಸಾಂದರ್ಭಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Jun 07, 2024 | 9:32 AM

Share

ಬೆಂಗಳೂರು, ಜೂನ್ 7: ಬೆಂಗಳೂರು ನಗರದಲ್ಲಿ (Bengaluru) ಖಾಲಿ ಜಾಗ ಕಾಣಿಸಿದರೆ ಸಾಕು. ಯಾರದ್ದೋ ಜಾಗಕ್ಕೆ ಯಾರೋ ಬೇಲಿ ಹಾಕಲು ಮುಂದಾಗುತ್ತಾರೆ. ಇನ್ಯಾರೋ ಬೇಲಿ ಹಾಕ್ತಾರೆ. ಇಂತಹ ಪ್ರಕರಣಗಳಿಂದ ಜನ ತತ್ತರಿಸಿ ಹೋಗಿದ್ದಾರೆ. ಒಂದು ಸೈಟ್ ತೆಗೆದುಕೊಳ್ಳಬೇಕಾದರೆ ಸಾವಿರ ಸಲ ಯೋಚನೆ ಮಾಡಿ, ದಾಖಲೆಗಳ ಪರಿಶೀಲಿಸಿ ಖರೀದಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರ ನಡುವೆ, ಖಾಲಿ ಸೈಟ್​ಗಳ ನಕಲಿ ದಾಖಲೆ ಸೃಷ್ಟಿಸಿ ಭೂ ಕಬಳಿಕೆ ಮಾಡ್ತಿರುವ‌ ಭೂಗಳ್ಳರು ಧೈರ್ಯ ಮಾಡಿ ಸೂಪರಿಡೆಂಟ್ ಆಪ್ ಪೊಲೀಸ್ ಕಚೇರಿಯ (Bengaluru Rural SP Office) ಆಸ್ತಿಯನ್ನೇ ನಕಲಿ ದಾಖಲೆ ಸೃಷ್ಟಿಸಿ ಮಾರಾಟಕ್ಕೆ ಯತ್ನಿಸಿ ಪೊಲೀಸರ ಅತಿಥಿಯಾಗಿದ್ದಾರೆ.

ಬೆಂಗಳೂರಿನ ಹೃದಯ ಭಾಗದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ನೇಪಾಳ ರಾಜರ ಹೆಸರಿನಲ್ಲಿದೆಯಂತೆ! ಅದೊಂದ್ ಕಡೆ ಸಿವಿಲ್ ಡಿಸ್​​ಪ್ಯೂಟ್ ಇದೆ. ಇದರ ನಡುವೆ ಎಸ್​ಪಿ ಕಚೇರಿಯ ಆಸ್ತಿ ದಾಖಲೆಗಳನ್ನು ನಕಲಿ ಮಾಡಿಕೊಂಡಿರೋ ಕೆಲ ಭೂಗಳ್ಳರು ಸದ್ದಿಲ್ಲದೇ ಎಸ್​ಪಿ ಕಚೇರಿಯ ಆಸ್ತಿಯನ್ನು ಮಾರಾಟ ಮಾಡಲು ಯತ್ನಿಸಿದ್ದಾರೆ.

ಅದರ ಮೊದಲ ಹಂತವಾಗಿ ಹನೀಫ್ ಎಂಬಾತ ಎಸ್​​ಪಿ ಕಚೇರಿಯ ಪೋಟೋಗಳು ಹಾಗೂ ವಿಡಿಯೋಗಳನ್ನು ತೆಗೆದು ಗ್ರಾಹಕರಿಗೆ ಶೇರ್ ಮಾಡಲು ಯತ್ನಿಸಿದ್ದಾನೆ. ಅದನ್ನು ಗಮನಿಸಿದ ಎಸ್​​ಪಿ ಕಚೇರಿಯಲ್ಲಿ ಕೆಲಸ ಮಾಡುವ ವೈರ್ ಲೆಸ್ ವಿಭಾಗದ ಇನ್ಸ್​​ಪೆಕ್ಟರ್ ಸಂತೋಷ್ ಗೌಡ ಪ್ರಶ್ನಿಸಿದ್ದಾರೆ. ಈ ವೇಳೆ ಆರೋಪಿ ಈ ಜಾಗ ನಮ್ಮದು, ನನ್ನ ಹೆಸರಿಗೆ ಜಿಪಿಎ ಇದೆ ಎಂದು ಅವಾಜ್ ಹಾಕಿದ್ದಾನೆ. ಇದರಿಂದ ಆತಂಕಕ್ಕೊಳಗಾದ ಇನ್ಸ್​​ಪೆಕ್ಟರ್ ಸಂತೋಷ್ ಗೌಡ ಹಿರಿಯ ಅಧಿಕಾರಿಗಳ ಗಮನಕ್ಕೆ ವಿಷಯ ಮುಟ್ಟಿಸಿ ಹನೀಫ್ ಸೇರಿದಂತೆ ನಕಲಿ ದಾಖಲೆ ಸೃಷ್ಟಿಸಿ ಎಸ್​ಪಿ ಕಚೇರಿ ಆಸ್ತಿಯ ಮಾರಾಟಕ್ಕೆ ಮುಂದಾದ ರಾಜಶೇಖರ್, ಮೊಹಮದ್ ನದೀಮ್, ಮೋಹನ್ ಶೆಟ್ಟಿ ಹಾಗೂ ಗಣಪತಿ ಎಂಬುವರ ಮೇಲೆ ದೂರು‌ ದಾಖಲಿಸಿದ್ದಾರೆ.

ಇದನ್ನೂ ಓದಿ: ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 4.77 ಕೋಟಿ ರೂ. ಮೌಲ್ಯದ ಚಿನ್ನ ಬೆಂಗಳೂರಿನಲ್ಲಿ ಸೀಜ್: ಇಬ್ಬರ ಬಂಧನ​​

ಈ ದೂರಿನ ಆಧಾರದ ಮೇಲೆ ಐಪಿಸಿ ಸೆಕ್ಷನ್ 353, 447 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಹೈಗ್ರೌಂಡ್ಸ್ ಪೊಲೀಸರು ಸದ್ಯ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಉಳಿದಂತೆ ಕೆಲವರು ತಲೆಮರೆಸಿಕೊಂಡಿದ್ದು ಅವರ ಬಂಧನಕ್ಕೂ ಹೈಗ್ರೌಂಡ್ಸ್ ಪೊಲೀಸರು ಬಲೆ ಬೀಸಿದ್ದಾರೆ.

ರಾಜ್ಯದ ಮತ್ತಷ್ಟುವ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:08 am, Fri, 7 June 24

ಬೆಂಗಳೂರು ಲ್ಯಾಂಬೋರ್ಗಿನಿ ಕಾರಿನ ಕಳ್ಳಾಟದ ರಹಸ್ಯ ಬಿಚ್ಚಿಟ್ಟ RTO
ಬೆಂಗಳೂರು ಲ್ಯಾಂಬೋರ್ಗಿನಿ ಕಾರಿನ ಕಳ್ಳಾಟದ ರಹಸ್ಯ ಬಿಚ್ಚಿಟ್ಟ RTO
ಈಗ ನನಗೆ ಜ್ಞಾನೋದಯವಾಗಿದೆ, ಇನ್ಮೇಲೆ ನಾನು ಕೊಡೋದೆ ಬೇರೆ: ಆರ್ ಚಂದ್ರು
ಈಗ ನನಗೆ ಜ್ಞಾನೋದಯವಾಗಿದೆ, ಇನ್ಮೇಲೆ ನಾನು ಕೊಡೋದೆ ಬೇರೆ: ಆರ್ ಚಂದ್ರು
ಭಾರತಕ್ಕೆ ಬಂದ ಯುವ ಚಾಂಪಿಯನ್ಸ್​ಗೆ ಅದ್ಧೂರಿ ಸ್ವಾಗತ
ಭಾರತಕ್ಕೆ ಬಂದ ಯುವ ಚಾಂಪಿಯನ್ಸ್​ಗೆ ಅದ್ಧೂರಿ ಸ್ವಾಗತ
ಲಕ್ಕುಂಡಿಯಲ್ಲಿ ನಿಧಿ ರಹಸ್ಯ: ಬಸವಣ್ಣ ದೇವಸ್ಥಾನದಲ್ಲಿ ಸರ್ಪದ ಪೊರೆ ಪತ್ತೆ
ಲಕ್ಕುಂಡಿಯಲ್ಲಿ ನಿಧಿ ರಹಸ್ಯ: ಬಸವಣ್ಣ ದೇವಸ್ಥಾನದಲ್ಲಿ ಸರ್ಪದ ಪೊರೆ ಪತ್ತೆ
ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಆಗಿದ್ದೇನು?
ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಆಗಿದ್ದೇನು?
ಕಾಂಗ್ರೆಸ್ ಭವನಕ್ಕೆ ಕೋಟಿ ಕೋಟಿ ಮೌಲ್ಯದ ಸಿಎ ಸೈಟ್ ಮೂರ್ಕಾಸಿಗೆ
ಕಾಂಗ್ರೆಸ್ ಭವನಕ್ಕೆ ಕೋಟಿ ಕೋಟಿ ಮೌಲ್ಯದ ಸಿಎ ಸೈಟ್ ಮೂರ್ಕಾಸಿಗೆ
ಮಲ್ಲನ ಮ್ಯಾಜಿಕ್​ಗೆ ಕರಗಿದ ಸಾಲ್ಟ್
ಮಲ್ಲನ ಮ್ಯಾಜಿಕ್​ಗೆ ಕರಗಿದ ಸಾಲ್ಟ್
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಹಾಸನ: ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!
ಹಾಸನ: ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ