AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಗ್ರಾಮಾಂತರ ಎಸ್ಪಿ ಕಚೇರಿ ಆಸ್ತಿಯನ್ನೇ ಮಾರಾಟ ಮಾಡಲು ಯತ್ನ: ಆರೋಪಿಗಳ ಬಂಧನ

ಬೆಂಗಳೂರಿನ ಹೃದಯ ಭಾಗದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆಸ್ತಿ ದಾಖಲೆಯನ್ನು ನಕಲಿ ಮಾಡಿಕೊಂಡಿರೋ ಕೆಲ ಭೂಗಳ್ಳರು ಸದ್ದಿಲ್ಲದೇ ಎಸ್​ಪಿ ಕಚೇರಿಯ ಆಸ್ತಿಯನ್ನು ಮಾರಾಟ ಮಾಡಲು ಯತ್ನಿಸಿ ಸಿಕ್ಕಿಬಿದ್ದಿದ್ದಾರೆ.

ಬೆಂಗಳೂರಿನಲ್ಲಿ ಗ್ರಾಮಾಂತರ ಎಸ್ಪಿ ಕಚೇರಿ ಆಸ್ತಿಯನ್ನೇ ಮಾರಾಟ ಮಾಡಲು ಯತ್ನ: ಆರೋಪಿಗಳ ಬಂಧನ
ಸಾಂದರ್ಭಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Updated By: Ganapathi Sharma|

Updated on:Jun 07, 2024 | 9:32 AM

Share

ಬೆಂಗಳೂರು, ಜೂನ್ 7: ಬೆಂಗಳೂರು ನಗರದಲ್ಲಿ (Bengaluru) ಖಾಲಿ ಜಾಗ ಕಾಣಿಸಿದರೆ ಸಾಕು. ಯಾರದ್ದೋ ಜಾಗಕ್ಕೆ ಯಾರೋ ಬೇಲಿ ಹಾಕಲು ಮುಂದಾಗುತ್ತಾರೆ. ಇನ್ಯಾರೋ ಬೇಲಿ ಹಾಕ್ತಾರೆ. ಇಂತಹ ಪ್ರಕರಣಗಳಿಂದ ಜನ ತತ್ತರಿಸಿ ಹೋಗಿದ್ದಾರೆ. ಒಂದು ಸೈಟ್ ತೆಗೆದುಕೊಳ್ಳಬೇಕಾದರೆ ಸಾವಿರ ಸಲ ಯೋಚನೆ ಮಾಡಿ, ದಾಖಲೆಗಳ ಪರಿಶೀಲಿಸಿ ಖರೀದಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರ ನಡುವೆ, ಖಾಲಿ ಸೈಟ್​ಗಳ ನಕಲಿ ದಾಖಲೆ ಸೃಷ್ಟಿಸಿ ಭೂ ಕಬಳಿಕೆ ಮಾಡ್ತಿರುವ‌ ಭೂಗಳ್ಳರು ಧೈರ್ಯ ಮಾಡಿ ಸೂಪರಿಡೆಂಟ್ ಆಪ್ ಪೊಲೀಸ್ ಕಚೇರಿಯ (Bengaluru Rural SP Office) ಆಸ್ತಿಯನ್ನೇ ನಕಲಿ ದಾಖಲೆ ಸೃಷ್ಟಿಸಿ ಮಾರಾಟಕ್ಕೆ ಯತ್ನಿಸಿ ಪೊಲೀಸರ ಅತಿಥಿಯಾಗಿದ್ದಾರೆ.

ಬೆಂಗಳೂರಿನ ಹೃದಯ ಭಾಗದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ನೇಪಾಳ ರಾಜರ ಹೆಸರಿನಲ್ಲಿದೆಯಂತೆ! ಅದೊಂದ್ ಕಡೆ ಸಿವಿಲ್ ಡಿಸ್​​ಪ್ಯೂಟ್ ಇದೆ. ಇದರ ನಡುವೆ ಎಸ್​ಪಿ ಕಚೇರಿಯ ಆಸ್ತಿ ದಾಖಲೆಗಳನ್ನು ನಕಲಿ ಮಾಡಿಕೊಂಡಿರೋ ಕೆಲ ಭೂಗಳ್ಳರು ಸದ್ದಿಲ್ಲದೇ ಎಸ್​ಪಿ ಕಚೇರಿಯ ಆಸ್ತಿಯನ್ನು ಮಾರಾಟ ಮಾಡಲು ಯತ್ನಿಸಿದ್ದಾರೆ.

ಅದರ ಮೊದಲ ಹಂತವಾಗಿ ಹನೀಫ್ ಎಂಬಾತ ಎಸ್​​ಪಿ ಕಚೇರಿಯ ಪೋಟೋಗಳು ಹಾಗೂ ವಿಡಿಯೋಗಳನ್ನು ತೆಗೆದು ಗ್ರಾಹಕರಿಗೆ ಶೇರ್ ಮಾಡಲು ಯತ್ನಿಸಿದ್ದಾನೆ. ಅದನ್ನು ಗಮನಿಸಿದ ಎಸ್​​ಪಿ ಕಚೇರಿಯಲ್ಲಿ ಕೆಲಸ ಮಾಡುವ ವೈರ್ ಲೆಸ್ ವಿಭಾಗದ ಇನ್ಸ್​​ಪೆಕ್ಟರ್ ಸಂತೋಷ್ ಗೌಡ ಪ್ರಶ್ನಿಸಿದ್ದಾರೆ. ಈ ವೇಳೆ ಆರೋಪಿ ಈ ಜಾಗ ನಮ್ಮದು, ನನ್ನ ಹೆಸರಿಗೆ ಜಿಪಿಎ ಇದೆ ಎಂದು ಅವಾಜ್ ಹಾಕಿದ್ದಾನೆ. ಇದರಿಂದ ಆತಂಕಕ್ಕೊಳಗಾದ ಇನ್ಸ್​​ಪೆಕ್ಟರ್ ಸಂತೋಷ್ ಗೌಡ ಹಿರಿಯ ಅಧಿಕಾರಿಗಳ ಗಮನಕ್ಕೆ ವಿಷಯ ಮುಟ್ಟಿಸಿ ಹನೀಫ್ ಸೇರಿದಂತೆ ನಕಲಿ ದಾಖಲೆ ಸೃಷ್ಟಿಸಿ ಎಸ್​ಪಿ ಕಚೇರಿ ಆಸ್ತಿಯ ಮಾರಾಟಕ್ಕೆ ಮುಂದಾದ ರಾಜಶೇಖರ್, ಮೊಹಮದ್ ನದೀಮ್, ಮೋಹನ್ ಶೆಟ್ಟಿ ಹಾಗೂ ಗಣಪತಿ ಎಂಬುವರ ಮೇಲೆ ದೂರು‌ ದಾಖಲಿಸಿದ್ದಾರೆ.

ಇದನ್ನೂ ಓದಿ: ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 4.77 ಕೋಟಿ ರೂ. ಮೌಲ್ಯದ ಚಿನ್ನ ಬೆಂಗಳೂರಿನಲ್ಲಿ ಸೀಜ್: ಇಬ್ಬರ ಬಂಧನ​​

ಈ ದೂರಿನ ಆಧಾರದ ಮೇಲೆ ಐಪಿಸಿ ಸೆಕ್ಷನ್ 353, 447 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಹೈಗ್ರೌಂಡ್ಸ್ ಪೊಲೀಸರು ಸದ್ಯ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಉಳಿದಂತೆ ಕೆಲವರು ತಲೆಮರೆಸಿಕೊಂಡಿದ್ದು ಅವರ ಬಂಧನಕ್ಕೂ ಹೈಗ್ರೌಂಡ್ಸ್ ಪೊಲೀಸರು ಬಲೆ ಬೀಸಿದ್ದಾರೆ.

ರಾಜ್ಯದ ಮತ್ತಷ್ಟುವ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:08 am, Fri, 7 June 24

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್