AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವನಹಳ್ಳಿ: ನಕಲಿ ಪಾಸ್​ಪೋರ್ಟ್ ಮೂಲಕ ಬ್ಯಾಂಕಾಕ್​ಗೆ ಹಾರಲು ಯತ್ನ; ನೇಪಾಳ ಮೂಲದ ವ್ಯಕ್ತಿ ಬಂಧನ

ಭಾರತ ಮೂಲದ ಹಾಗೂ ನೇಪಾಳಿ ಮೂಲದ ಮಹಿಳೆ ಜೊತೆ ತಲಾ ಒಬ್ಬರಿಂದ 8 ಲಕ್ಷ, ಜೊತೆಗೆ 1.5 ಲಕ್ಷ ಹಣ ಪಡೆದು ಇಂಡಿಗೋ ವಿಮಾನದಲ್ಲಿ ಬ್ಯಾಂಕಾಕ್​ಗೆ ತೆರಳಲು ಯತ್ನಿಸಿದ್ದ. ಈ ವೇಳೆ ಬಂಧಿಸಲಾಗಿದೆ. ಇನ್ನು ಆರೋಪಿಯನ್ನ ಬಂಧಿಸಿದ ಪೊಲೀಸರು‌, ಮತ್ತಿಬ್ಬರನ್ನು ವಾಪಸ್ ಕಳಿಸಿದ್ದಾರೆ.

ದೇವನಹಳ್ಳಿ: ನಕಲಿ ಪಾಸ್​ಪೋರ್ಟ್ ಮೂಲಕ ಬ್ಯಾಂಕಾಕ್​ಗೆ ಹಾರಲು ಯತ್ನ; ನೇಪಾಳ ಮೂಲದ ವ್ಯಕ್ತಿ ಬಂಧನ
ಬಂಧಿತ ಆರೋಪಿ
ನವೀನ್ ಕುಮಾರ್ ಟಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 20, 2023 | 3:57 PM

Share

ಬೆಂಗಳೂರು ಗ್ರಾಮಾಂತರ, ಸೆ.20: ನಕಲಿ ಪಾಸ್​​ಪೋರ್ಟ್​ ಬಳಸಿ ವಿದೇಶಕ್ಕೆ ತೆರಳುತ್ತಿದ್ದ ವ್ಯಕ್ತಿಯನ್ನು ಕೆಂಪೇಗೌಡ ವಿಮಾನ ನಿಲ್ದಾಣ(Kempegowda International Airport)ದಲ್ಲಿ ವಲಸೆ ವಿಭಾಗದ ಅಧಿಕಾರಿಗಳು ಬಂಧಿಸಿದ್ದಾರೆ. ಬಳಿಕ ಏರ್​ಪೋರ್ಟ್​ ಪೊಲೀಸರಿಗೆ ಒಪ್ಪಿಸಿದ್ದಾರೆ. ಉತ್ತಮ್ ಹಲಾಲ್ ಬಂಧಿತ ಆರೋಪಿ. ಇನ್ನು ಇತ ಕೇರಳ ಮೂಲದವನು ಎಂದು ನಕಲಿ ಪಾಸ್​ಪೋರ್ಟ್ ‌ಪಡೆದು, ಬೆಂಗಳೂರಿನಿಂದ ಬ್ಯಾಂಕಾಕ್​ಗೆ ತೆರಳುತ್ತಿದ್ದ. ಇನ್ನು ಆರೋಪಿ ಉತ್ತಮ್ ಹಲಾಲ್ ತನ್ನ ಜೊತೆಯಲ್ಲಿ ಮತ್ತಿಬ್ಬರಿಗೆ ಕೆಲಸ‌ ಕೊಡಿಸೋದಾಗಿ‌ ಕರೆದುಕೊಂಡು ಹೋಗುತ್ತಿದ್ದ ಭಾರತ ಹಾಗೂ ನೇಪಾಳಿ ಮೂಲದ ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ.

ಒಬ್ಬರಿಂದ 8 ಲಕ್ಷ ಪಡೆದು ಕರೆದುಕೊಂಡು ಹೋಗ್ತಿದ್ದ ಆರೋಪಿ

ಹೌದು, ಭಾರತ ಮೂಲದ ಹಾಗೂ ನೇಪಾಳಿ ಮೂಲದ ಮಹಿಳೆ ಜೊತೆ ತಲಾ ಒಬ್ಬರಿಂದ 8 ಲಕ್ಷ, ಜೊತೆಗೆ 1.5 ಲಕ್ಷ ಹಣ ಪಡೆದು ಇಂಡಿಗೋ ವಿಮಾನದಲ್ಲಿ ಬ್ಯಾಂಕಾಕ್​ಗೆ ತೆರಳಲು ಯತ್ನಿಸಿದ್ದ. ಈ ವೇಳೆ ಬಂಧಿಸಲಾಗಿದೆ. ಇನ್ನು ಆರೋಪಿಯನ್ನ ಬಂಧಿಸಿದ ಪೊಲೀಸರು‌, ಮತ್ತಿಬ್ಬರನ್ನು ವಾಪಸ್ ಕಳಿಸಿದ್ದಾರೆ. ಈ ಕುರಿತು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಈ ಘಟನೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಇದನ್ನೂ ಓದಿ:ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ದಾಖಲೆ ಪ್ರಮಾಣದ ಮಾವು ರಫ್ತು; ಬರೋಬ್ಬರಿ ಶೇ 124ರಷ್ಟು ಹೆಚ್ಚಳ

ಇನ್ನು ಕಳೆದ ಆಗಸ್ಟ್ 22 ರಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕ ಬ್ಯಾಗ್​ನಲ್ಲಿ ಹೆಬ್ಬಾವು, ಊಸರವಳ್ಳಿ, ಆಮೆ, ಮೊಸಳೆ ಮರಿ ಪತ್ತೆಯಾಗಿತ್ತು. ಹೌದು, ಒಟ್ಟು 234 ಪ್ರಾಣಿಗಳು ಇದ್ದು, ಕೆಂಪೇಗೌಡ ಏರ್‌ಪೋರ್ಟ್‌ನ ಕಸ್ಟಮ್ಸ್‌ ಅಧಿಕಾರಿಗಳ ಕಾರ್ಯಾಚರಣೆಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿತ್ತು. ಬ್ಯಾಂಕಾಕ್‌ನಿಂದ ‘ಎಫ್‌ಡಿ 137’ ವಿಮಾನದಲ್ಲಿ ಬಂದಿದ್ದ ಪ್ರಯಾಣಿಕನೊಬ್ಬ ತನ್ನ ಟ್ರ್ಯಾಲಿ ಬ್ಯಾಗ್​ನಲ್ಲಿ ವಿವಿಧ ಪ್ರಾಣಿಗಳನ್ನು ಮರೆಮಾಚಿ ಸಾಗಿಸುತ್ತಿದ್ದ. ಈ ವೇಳೆ ಪರಿಶೀಲಿಸಿದಾಗ ಪ್ರಾಣಿಗಳು ಪತ್ತೆಯಾಗಿತ್ತು. ಬಳಿಕ ಕಸ್ಟಮ್ಸ್ ಅಧಿಕಾರಿಗಳು ಪ್ರಾಣಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ವಶಕ್ಕೆ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ