AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವನಹಳ್ಳಿ: ನಕಲಿ ಪಾಸ್​ಪೋರ್ಟ್ ಮೂಲಕ ಬ್ಯಾಂಕಾಕ್​ಗೆ ಹಾರಲು ಯತ್ನ; ನೇಪಾಳ ಮೂಲದ ವ್ಯಕ್ತಿ ಬಂಧನ

ಭಾರತ ಮೂಲದ ಹಾಗೂ ನೇಪಾಳಿ ಮೂಲದ ಮಹಿಳೆ ಜೊತೆ ತಲಾ ಒಬ್ಬರಿಂದ 8 ಲಕ್ಷ, ಜೊತೆಗೆ 1.5 ಲಕ್ಷ ಹಣ ಪಡೆದು ಇಂಡಿಗೋ ವಿಮಾನದಲ್ಲಿ ಬ್ಯಾಂಕಾಕ್​ಗೆ ತೆರಳಲು ಯತ್ನಿಸಿದ್ದ. ಈ ವೇಳೆ ಬಂಧಿಸಲಾಗಿದೆ. ಇನ್ನು ಆರೋಪಿಯನ್ನ ಬಂಧಿಸಿದ ಪೊಲೀಸರು‌, ಮತ್ತಿಬ್ಬರನ್ನು ವಾಪಸ್ ಕಳಿಸಿದ್ದಾರೆ.

ದೇವನಹಳ್ಳಿ: ನಕಲಿ ಪಾಸ್​ಪೋರ್ಟ್ ಮೂಲಕ ಬ್ಯಾಂಕಾಕ್​ಗೆ ಹಾರಲು ಯತ್ನ; ನೇಪಾಳ ಮೂಲದ ವ್ಯಕ್ತಿ ಬಂಧನ
ಬಂಧಿತ ಆರೋಪಿ
Follow us
ನವೀನ್ ಕುಮಾರ್ ಟಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 20, 2023 | 3:57 PM

ಬೆಂಗಳೂರು ಗ್ರಾಮಾಂತರ, ಸೆ.20: ನಕಲಿ ಪಾಸ್​​ಪೋರ್ಟ್​ ಬಳಸಿ ವಿದೇಶಕ್ಕೆ ತೆರಳುತ್ತಿದ್ದ ವ್ಯಕ್ತಿಯನ್ನು ಕೆಂಪೇಗೌಡ ವಿಮಾನ ನಿಲ್ದಾಣ(Kempegowda International Airport)ದಲ್ಲಿ ವಲಸೆ ವಿಭಾಗದ ಅಧಿಕಾರಿಗಳು ಬಂಧಿಸಿದ್ದಾರೆ. ಬಳಿಕ ಏರ್​ಪೋರ್ಟ್​ ಪೊಲೀಸರಿಗೆ ಒಪ್ಪಿಸಿದ್ದಾರೆ. ಉತ್ತಮ್ ಹಲಾಲ್ ಬಂಧಿತ ಆರೋಪಿ. ಇನ್ನು ಇತ ಕೇರಳ ಮೂಲದವನು ಎಂದು ನಕಲಿ ಪಾಸ್​ಪೋರ್ಟ್ ‌ಪಡೆದು, ಬೆಂಗಳೂರಿನಿಂದ ಬ್ಯಾಂಕಾಕ್​ಗೆ ತೆರಳುತ್ತಿದ್ದ. ಇನ್ನು ಆರೋಪಿ ಉತ್ತಮ್ ಹಲಾಲ್ ತನ್ನ ಜೊತೆಯಲ್ಲಿ ಮತ್ತಿಬ್ಬರಿಗೆ ಕೆಲಸ‌ ಕೊಡಿಸೋದಾಗಿ‌ ಕರೆದುಕೊಂಡು ಹೋಗುತ್ತಿದ್ದ ಭಾರತ ಹಾಗೂ ನೇಪಾಳಿ ಮೂಲದ ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ.

ಒಬ್ಬರಿಂದ 8 ಲಕ್ಷ ಪಡೆದು ಕರೆದುಕೊಂಡು ಹೋಗ್ತಿದ್ದ ಆರೋಪಿ

ಹೌದು, ಭಾರತ ಮೂಲದ ಹಾಗೂ ನೇಪಾಳಿ ಮೂಲದ ಮಹಿಳೆ ಜೊತೆ ತಲಾ ಒಬ್ಬರಿಂದ 8 ಲಕ್ಷ, ಜೊತೆಗೆ 1.5 ಲಕ್ಷ ಹಣ ಪಡೆದು ಇಂಡಿಗೋ ವಿಮಾನದಲ್ಲಿ ಬ್ಯಾಂಕಾಕ್​ಗೆ ತೆರಳಲು ಯತ್ನಿಸಿದ್ದ. ಈ ವೇಳೆ ಬಂಧಿಸಲಾಗಿದೆ. ಇನ್ನು ಆರೋಪಿಯನ್ನ ಬಂಧಿಸಿದ ಪೊಲೀಸರು‌, ಮತ್ತಿಬ್ಬರನ್ನು ವಾಪಸ್ ಕಳಿಸಿದ್ದಾರೆ. ಈ ಕುರಿತು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಈ ಘಟನೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಇದನ್ನೂ ಓದಿ:ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ದಾಖಲೆ ಪ್ರಮಾಣದ ಮಾವು ರಫ್ತು; ಬರೋಬ್ಬರಿ ಶೇ 124ರಷ್ಟು ಹೆಚ್ಚಳ

ಇನ್ನು ಕಳೆದ ಆಗಸ್ಟ್ 22 ರಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕ ಬ್ಯಾಗ್​ನಲ್ಲಿ ಹೆಬ್ಬಾವು, ಊಸರವಳ್ಳಿ, ಆಮೆ, ಮೊಸಳೆ ಮರಿ ಪತ್ತೆಯಾಗಿತ್ತು. ಹೌದು, ಒಟ್ಟು 234 ಪ್ರಾಣಿಗಳು ಇದ್ದು, ಕೆಂಪೇಗೌಡ ಏರ್‌ಪೋರ್ಟ್‌ನ ಕಸ್ಟಮ್ಸ್‌ ಅಧಿಕಾರಿಗಳ ಕಾರ್ಯಾಚರಣೆಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿತ್ತು. ಬ್ಯಾಂಕಾಕ್‌ನಿಂದ ‘ಎಫ್‌ಡಿ 137’ ವಿಮಾನದಲ್ಲಿ ಬಂದಿದ್ದ ಪ್ರಯಾಣಿಕನೊಬ್ಬ ತನ್ನ ಟ್ರ್ಯಾಲಿ ಬ್ಯಾಗ್​ನಲ್ಲಿ ವಿವಿಧ ಪ್ರಾಣಿಗಳನ್ನು ಮರೆಮಾಚಿ ಸಾಗಿಸುತ್ತಿದ್ದ. ಈ ವೇಳೆ ಪರಿಶೀಲಿಸಿದಾಗ ಪ್ರಾಣಿಗಳು ಪತ್ತೆಯಾಗಿತ್ತು. ಬಳಿಕ ಕಸ್ಟಮ್ಸ್ ಅಧಿಕಾರಿಗಳು ಪ್ರಾಣಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ವಶಕ್ಕೆ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ