AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವನಹಳ್ಳಿ: ನಕಲಿ ಪಾಸ್​ಪೋರ್ಟ್ ಮೂಲಕ ಬ್ಯಾಂಕಾಕ್​ಗೆ ಹಾರಲು ಯತ್ನ; ನೇಪಾಳ ಮೂಲದ ವ್ಯಕ್ತಿ ಬಂಧನ

ಭಾರತ ಮೂಲದ ಹಾಗೂ ನೇಪಾಳಿ ಮೂಲದ ಮಹಿಳೆ ಜೊತೆ ತಲಾ ಒಬ್ಬರಿಂದ 8 ಲಕ್ಷ, ಜೊತೆಗೆ 1.5 ಲಕ್ಷ ಹಣ ಪಡೆದು ಇಂಡಿಗೋ ವಿಮಾನದಲ್ಲಿ ಬ್ಯಾಂಕಾಕ್​ಗೆ ತೆರಳಲು ಯತ್ನಿಸಿದ್ದ. ಈ ವೇಳೆ ಬಂಧಿಸಲಾಗಿದೆ. ಇನ್ನು ಆರೋಪಿಯನ್ನ ಬಂಧಿಸಿದ ಪೊಲೀಸರು‌, ಮತ್ತಿಬ್ಬರನ್ನು ವಾಪಸ್ ಕಳಿಸಿದ್ದಾರೆ.

ದೇವನಹಳ್ಳಿ: ನಕಲಿ ಪಾಸ್​ಪೋರ್ಟ್ ಮೂಲಕ ಬ್ಯಾಂಕಾಕ್​ಗೆ ಹಾರಲು ಯತ್ನ; ನೇಪಾಳ ಮೂಲದ ವ್ಯಕ್ತಿ ಬಂಧನ
ಬಂಧಿತ ಆರೋಪಿ
ನವೀನ್ ಕುಮಾರ್ ಟಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 20, 2023 | 3:57 PM

Share

ಬೆಂಗಳೂರು ಗ್ರಾಮಾಂತರ, ಸೆ.20: ನಕಲಿ ಪಾಸ್​​ಪೋರ್ಟ್​ ಬಳಸಿ ವಿದೇಶಕ್ಕೆ ತೆರಳುತ್ತಿದ್ದ ವ್ಯಕ್ತಿಯನ್ನು ಕೆಂಪೇಗೌಡ ವಿಮಾನ ನಿಲ್ದಾಣ(Kempegowda International Airport)ದಲ್ಲಿ ವಲಸೆ ವಿಭಾಗದ ಅಧಿಕಾರಿಗಳು ಬಂಧಿಸಿದ್ದಾರೆ. ಬಳಿಕ ಏರ್​ಪೋರ್ಟ್​ ಪೊಲೀಸರಿಗೆ ಒಪ್ಪಿಸಿದ್ದಾರೆ. ಉತ್ತಮ್ ಹಲಾಲ್ ಬಂಧಿತ ಆರೋಪಿ. ಇನ್ನು ಇತ ಕೇರಳ ಮೂಲದವನು ಎಂದು ನಕಲಿ ಪಾಸ್​ಪೋರ್ಟ್ ‌ಪಡೆದು, ಬೆಂಗಳೂರಿನಿಂದ ಬ್ಯಾಂಕಾಕ್​ಗೆ ತೆರಳುತ್ತಿದ್ದ. ಇನ್ನು ಆರೋಪಿ ಉತ್ತಮ್ ಹಲಾಲ್ ತನ್ನ ಜೊತೆಯಲ್ಲಿ ಮತ್ತಿಬ್ಬರಿಗೆ ಕೆಲಸ‌ ಕೊಡಿಸೋದಾಗಿ‌ ಕರೆದುಕೊಂಡು ಹೋಗುತ್ತಿದ್ದ ಭಾರತ ಹಾಗೂ ನೇಪಾಳಿ ಮೂಲದ ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ.

ಒಬ್ಬರಿಂದ 8 ಲಕ್ಷ ಪಡೆದು ಕರೆದುಕೊಂಡು ಹೋಗ್ತಿದ್ದ ಆರೋಪಿ

ಹೌದು, ಭಾರತ ಮೂಲದ ಹಾಗೂ ನೇಪಾಳಿ ಮೂಲದ ಮಹಿಳೆ ಜೊತೆ ತಲಾ ಒಬ್ಬರಿಂದ 8 ಲಕ್ಷ, ಜೊತೆಗೆ 1.5 ಲಕ್ಷ ಹಣ ಪಡೆದು ಇಂಡಿಗೋ ವಿಮಾನದಲ್ಲಿ ಬ್ಯಾಂಕಾಕ್​ಗೆ ತೆರಳಲು ಯತ್ನಿಸಿದ್ದ. ಈ ವೇಳೆ ಬಂಧಿಸಲಾಗಿದೆ. ಇನ್ನು ಆರೋಪಿಯನ್ನ ಬಂಧಿಸಿದ ಪೊಲೀಸರು‌, ಮತ್ತಿಬ್ಬರನ್ನು ವಾಪಸ್ ಕಳಿಸಿದ್ದಾರೆ. ಈ ಕುರಿತು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಈ ಘಟನೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಇದನ್ನೂ ಓದಿ:ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ದಾಖಲೆ ಪ್ರಮಾಣದ ಮಾವು ರಫ್ತು; ಬರೋಬ್ಬರಿ ಶೇ 124ರಷ್ಟು ಹೆಚ್ಚಳ

ಇನ್ನು ಕಳೆದ ಆಗಸ್ಟ್ 22 ರಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕ ಬ್ಯಾಗ್​ನಲ್ಲಿ ಹೆಬ್ಬಾವು, ಊಸರವಳ್ಳಿ, ಆಮೆ, ಮೊಸಳೆ ಮರಿ ಪತ್ತೆಯಾಗಿತ್ತು. ಹೌದು, ಒಟ್ಟು 234 ಪ್ರಾಣಿಗಳು ಇದ್ದು, ಕೆಂಪೇಗೌಡ ಏರ್‌ಪೋರ್ಟ್‌ನ ಕಸ್ಟಮ್ಸ್‌ ಅಧಿಕಾರಿಗಳ ಕಾರ್ಯಾಚರಣೆಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿತ್ತು. ಬ್ಯಾಂಕಾಕ್‌ನಿಂದ ‘ಎಫ್‌ಡಿ 137’ ವಿಮಾನದಲ್ಲಿ ಬಂದಿದ್ದ ಪ್ರಯಾಣಿಕನೊಬ್ಬ ತನ್ನ ಟ್ರ್ಯಾಲಿ ಬ್ಯಾಗ್​ನಲ್ಲಿ ವಿವಿಧ ಪ್ರಾಣಿಗಳನ್ನು ಮರೆಮಾಚಿ ಸಾಗಿಸುತ್ತಿದ್ದ. ಈ ವೇಳೆ ಪರಿಶೀಲಿಸಿದಾಗ ಪ್ರಾಣಿಗಳು ಪತ್ತೆಯಾಗಿತ್ತು. ಬಳಿಕ ಕಸ್ಟಮ್ಸ್ ಅಧಿಕಾರಿಗಳು ಪ್ರಾಣಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ವಶಕ್ಕೆ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More