AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವನಹಳ್ಳಿ: ನಕಲಿ ಪಾಸ್​ಪೋರ್ಟ್ ಮೂಲಕ ಬ್ಯಾಂಕಾಕ್​ಗೆ ಹಾರಲು ಯತ್ನ; ನೇಪಾಳ ಮೂಲದ ವ್ಯಕ್ತಿ ಬಂಧನ

ಭಾರತ ಮೂಲದ ಹಾಗೂ ನೇಪಾಳಿ ಮೂಲದ ಮಹಿಳೆ ಜೊತೆ ತಲಾ ಒಬ್ಬರಿಂದ 8 ಲಕ್ಷ, ಜೊತೆಗೆ 1.5 ಲಕ್ಷ ಹಣ ಪಡೆದು ಇಂಡಿಗೋ ವಿಮಾನದಲ್ಲಿ ಬ್ಯಾಂಕಾಕ್​ಗೆ ತೆರಳಲು ಯತ್ನಿಸಿದ್ದ. ಈ ವೇಳೆ ಬಂಧಿಸಲಾಗಿದೆ. ಇನ್ನು ಆರೋಪಿಯನ್ನ ಬಂಧಿಸಿದ ಪೊಲೀಸರು‌, ಮತ್ತಿಬ್ಬರನ್ನು ವಾಪಸ್ ಕಳಿಸಿದ್ದಾರೆ.

ದೇವನಹಳ್ಳಿ: ನಕಲಿ ಪಾಸ್​ಪೋರ್ಟ್ ಮೂಲಕ ಬ್ಯಾಂಕಾಕ್​ಗೆ ಹಾರಲು ಯತ್ನ; ನೇಪಾಳ ಮೂಲದ ವ್ಯಕ್ತಿ ಬಂಧನ
ಬಂಧಿತ ಆರೋಪಿ
ನವೀನ್ ಕುಮಾರ್ ಟಿ
| Edited By: |

Updated on: Sep 20, 2023 | 3:57 PM

Share

ಬೆಂಗಳೂರು ಗ್ರಾಮಾಂತರ, ಸೆ.20: ನಕಲಿ ಪಾಸ್​​ಪೋರ್ಟ್​ ಬಳಸಿ ವಿದೇಶಕ್ಕೆ ತೆರಳುತ್ತಿದ್ದ ವ್ಯಕ್ತಿಯನ್ನು ಕೆಂಪೇಗೌಡ ವಿಮಾನ ನಿಲ್ದಾಣ(Kempegowda International Airport)ದಲ್ಲಿ ವಲಸೆ ವಿಭಾಗದ ಅಧಿಕಾರಿಗಳು ಬಂಧಿಸಿದ್ದಾರೆ. ಬಳಿಕ ಏರ್​ಪೋರ್ಟ್​ ಪೊಲೀಸರಿಗೆ ಒಪ್ಪಿಸಿದ್ದಾರೆ. ಉತ್ತಮ್ ಹಲಾಲ್ ಬಂಧಿತ ಆರೋಪಿ. ಇನ್ನು ಇತ ಕೇರಳ ಮೂಲದವನು ಎಂದು ನಕಲಿ ಪಾಸ್​ಪೋರ್ಟ್ ‌ಪಡೆದು, ಬೆಂಗಳೂರಿನಿಂದ ಬ್ಯಾಂಕಾಕ್​ಗೆ ತೆರಳುತ್ತಿದ್ದ. ಇನ್ನು ಆರೋಪಿ ಉತ್ತಮ್ ಹಲಾಲ್ ತನ್ನ ಜೊತೆಯಲ್ಲಿ ಮತ್ತಿಬ್ಬರಿಗೆ ಕೆಲಸ‌ ಕೊಡಿಸೋದಾಗಿ‌ ಕರೆದುಕೊಂಡು ಹೋಗುತ್ತಿದ್ದ ಭಾರತ ಹಾಗೂ ನೇಪಾಳಿ ಮೂಲದ ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ.

ಒಬ್ಬರಿಂದ 8 ಲಕ್ಷ ಪಡೆದು ಕರೆದುಕೊಂಡು ಹೋಗ್ತಿದ್ದ ಆರೋಪಿ

ಹೌದು, ಭಾರತ ಮೂಲದ ಹಾಗೂ ನೇಪಾಳಿ ಮೂಲದ ಮಹಿಳೆ ಜೊತೆ ತಲಾ ಒಬ್ಬರಿಂದ 8 ಲಕ್ಷ, ಜೊತೆಗೆ 1.5 ಲಕ್ಷ ಹಣ ಪಡೆದು ಇಂಡಿಗೋ ವಿಮಾನದಲ್ಲಿ ಬ್ಯಾಂಕಾಕ್​ಗೆ ತೆರಳಲು ಯತ್ನಿಸಿದ್ದ. ಈ ವೇಳೆ ಬಂಧಿಸಲಾಗಿದೆ. ಇನ್ನು ಆರೋಪಿಯನ್ನ ಬಂಧಿಸಿದ ಪೊಲೀಸರು‌, ಮತ್ತಿಬ್ಬರನ್ನು ವಾಪಸ್ ಕಳಿಸಿದ್ದಾರೆ. ಈ ಕುರಿತು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಈ ಘಟನೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಇದನ್ನೂ ಓದಿ:ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ದಾಖಲೆ ಪ್ರಮಾಣದ ಮಾವು ರಫ್ತು; ಬರೋಬ್ಬರಿ ಶೇ 124ರಷ್ಟು ಹೆಚ್ಚಳ

ಇನ್ನು ಕಳೆದ ಆಗಸ್ಟ್ 22 ರಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕ ಬ್ಯಾಗ್​ನಲ್ಲಿ ಹೆಬ್ಬಾವು, ಊಸರವಳ್ಳಿ, ಆಮೆ, ಮೊಸಳೆ ಮರಿ ಪತ್ತೆಯಾಗಿತ್ತು. ಹೌದು, ಒಟ್ಟು 234 ಪ್ರಾಣಿಗಳು ಇದ್ದು, ಕೆಂಪೇಗೌಡ ಏರ್‌ಪೋರ್ಟ್‌ನ ಕಸ್ಟಮ್ಸ್‌ ಅಧಿಕಾರಿಗಳ ಕಾರ್ಯಾಚರಣೆಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿತ್ತು. ಬ್ಯಾಂಕಾಕ್‌ನಿಂದ ‘ಎಫ್‌ಡಿ 137’ ವಿಮಾನದಲ್ಲಿ ಬಂದಿದ್ದ ಪ್ರಯಾಣಿಕನೊಬ್ಬ ತನ್ನ ಟ್ರ್ಯಾಲಿ ಬ್ಯಾಗ್​ನಲ್ಲಿ ವಿವಿಧ ಪ್ರಾಣಿಗಳನ್ನು ಮರೆಮಾಚಿ ಸಾಗಿಸುತ್ತಿದ್ದ. ಈ ವೇಳೆ ಪರಿಶೀಲಿಸಿದಾಗ ಪ್ರಾಣಿಗಳು ಪತ್ತೆಯಾಗಿತ್ತು. ಬಳಿಕ ಕಸ್ಟಮ್ಸ್ ಅಧಿಕಾರಿಗಳು ಪ್ರಾಣಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ವಶಕ್ಕೆ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?