AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರ ಗಮನಕ್ಕೆ: ಮಳೆ ಅವಾಂತರ ಸಂಬಂಧಿತ ದೂರುಗಳಿಗೆ ಈ ಸಂಖ್ಯೆಗೆ ಕರೆ ಮಾಡಿ

ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಹಲವೆಡೆ ಅವಘಡಗಳು ಸಂಭವಿಸಿವೆ. ಹೀಗಾಗಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಅವರು ಬಿಬಿಎಂಪಿ(BBMP) ಜೊತೆ ಸಭೆ ನಡೆಸಿದ್ದು, ತುರ್ತು ಸಂದರ್ಭ ಎದುರಿಸಲು ಸನ್ನದ್ಧರಾಗುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜೊತೆಗೆ ಇನ್ನು ಮುಂದೆ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಕಂಟ್ರೋಲ್ ರೂಂ ಓಪನ್ ಮಾಡಲಾಗಿದೆ.

ಬೆಂಗಳೂರಿಗರ ಗಮನಕ್ಕೆ: ಮಳೆ ಅವಾಂತರ ಸಂಬಂಧಿತ ದೂರುಗಳಿಗೆ ಈ ಸಂಖ್ಯೆಗೆ ಕರೆ ಮಾಡಿ
ಮಳೆ ಅವಾಂತರ ಸಂಬಂಧಿತ ದೂರುಗಳಿಗೆ ಈ ಸಂಖ್ಯೆಗೆ ಕರೆ ಮಾಡಿ
ಕಿರಣ್ ಹನುಮಂತ್​ ಮಾದಾರ್
|

Updated on:Oct 15, 2024 | 7:05 PM

Share

ಬೆಂಗಳೂರು, ಅ.15: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಅವಾಂತರಗಳು ಸೃಷ್ಟಿಯಾಗುತ್ತಿದೆ. ಹೀಗಾಗಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಅವರು ಬಿಬಿಎಂಪಿ(BBMP) ಜೊತೆ ಸಭೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಅವರು ‘ ಇನ್ನು ಮುಂದೆ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಕಂಟ್ರೋಲ್ ರೂಂ ಓಪನ್ ಮಾಡಲಾಗಿದೆ. ಸಿಎಸ್ ಸೂಚನೆ ಹಿನ್ನೆಲೆ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಮಳೆ ಸಂಬಂಧ ದೂರು ಬಂದರೆ ತಕ್ಷಣ ಸಮಸ್ಯೆ ಸರಿಪಡಿಸಲು ಸೂಚನೆ

ಇನ್ನು ತುರ್ತು ಸಂದರ್ಭ ಎದುರಿಸಲು ಸನ್ನದ್ಧರಾಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಎಲ್ಲಾ ಅಧಿಕಾರಿಗಳು ಕೇಂದ್ರಸ್ಥಾನದಲ್ಲೇ ಇದ್ದು ಕಾರ್ಯನಿರ್ವಹಿಸಲು ತಿಳಿಸಲಾಗಿದೆ. ಮಳೆ ಸಂಬಂಧ ದೂರು ಬಂದರೆ ತಕ್ಷಣ ಸಮಸ್ಯೆ ಸರಿಪಡಿಸಲು ಸೂಚಿಸಿದ್ದೇವೆ. ಬೆಂಗಳೂರು ನಗರದಲ್ಲಿ ಮಳೆಯಿಂದ ಸದ್ಯಕ್ಕೆ ಯಾವುದೇ ಅನಾಹುತ ಆಗಿಲ್ಲ. ಶಾಲೆಗಳಿಗೆ ರಜೆ ನೀಡುವ ಬಗ್ಗೆ ಸಿಎಸ್‌ ಮಾಹಿತಿ ಕೇಳಿದ್ದರು. ಬಿಬಿಎಂಪಿ ಮುಖ್ಯ ಆಯುಕ್ತರ ಜೊತೆ ನಾನು ಸಹ ಮಾತನಾಡಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ:ಬೆಂಗಳೂರಿನಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ: ರಸ್ತೆಗಳು ಜಲಾವೃತ, ವಾಹನ ಸವಾರರೇ ಎಚ್ಚರ..ಎಚ್ಚರ

ಮಳೆ ಅವಾಂತರ ಸಂಬಂಧಿತ ದೂರಿಗೆ ಈ ಸಂಖ್ಯೆಗೆ ಕರೆ ಮಾಡಿ

ನಗರದ 8 ವಲಯ ವ್ಯಾಪ್ತಿಯಲ್ಲಿ 8 ನಿಯಂತ್ರಣ ಕೊಠಡಿಗಳಿದ್ದು, ಪಾಲಿಕೆ ಕೇಂದ್ರ ಕಛೇರಿಯಲ್ಲಿ 1 ನಿಯಂತ್ರಣ ಕೊಠಡಿಯಿದೆ. ಮಳೆಯಿಂದಾಗಿ ಏನಾದರು ಸಮಸ್ಯೆಗಳಿದ್ದರೆ, ಸಾರ್ವಜನಿಕರು ಪಾಲಿಕೆಯ ಉಚಿತ ಸಹಾಯವಾಣಿ ಸಂಖ್ಯೆಯಾದ 1533ಗೆ ಕರೆ ಮಾಡಿ ದೂರು ನೀಡಬಹುದಾಗಿದೆ. ಸದರಿ ದೂರಗಳನ್ನು ಸಂಬಂಧಪಟ್ಟ ವಲಯ ಹಾಗೂ ಅಧಿಕಾರಿಗಳ ಗಮನಕ್ಕೆ ತಂದು ಶೀಘ್ರವಾಗಿ ಸಮಸ್ಯೆ ಬಗೆಹರಿಸುವ ಕೆಲಸ ಮಾಡಲಾಗುತ್ತದೆ ಎಂದು ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:31 pm, Tue, 15 October 24

Follow Us
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು