AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರ ಗಮನಕ್ಕೆ: ಮಳೆ ಅವಾಂತರ ಸಂಬಂಧಿತ ದೂರುಗಳಿಗೆ ಈ ಸಂಖ್ಯೆಗೆ ಕರೆ ಮಾಡಿ

ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಹಲವೆಡೆ ಅವಘಡಗಳು ಸಂಭವಿಸಿವೆ. ಹೀಗಾಗಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಅವರು ಬಿಬಿಎಂಪಿ(BBMP) ಜೊತೆ ಸಭೆ ನಡೆಸಿದ್ದು, ತುರ್ತು ಸಂದರ್ಭ ಎದುರಿಸಲು ಸನ್ನದ್ಧರಾಗುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜೊತೆಗೆ ಇನ್ನು ಮುಂದೆ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಕಂಟ್ರೋಲ್ ರೂಂ ಓಪನ್ ಮಾಡಲಾಗಿದೆ.

ಬೆಂಗಳೂರಿಗರ ಗಮನಕ್ಕೆ: ಮಳೆ ಅವಾಂತರ ಸಂಬಂಧಿತ ದೂರುಗಳಿಗೆ ಈ ಸಂಖ್ಯೆಗೆ ಕರೆ ಮಾಡಿ
ಮಳೆ ಅವಾಂತರ ಸಂಬಂಧಿತ ದೂರುಗಳಿಗೆ ಈ ಸಂಖ್ಯೆಗೆ ಕರೆ ಮಾಡಿ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on:Oct 15, 2024 | 7:05 PM

Share

ಬೆಂಗಳೂರು, ಅ.15: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಅವಾಂತರಗಳು ಸೃಷ್ಟಿಯಾಗುತ್ತಿದೆ. ಹೀಗಾಗಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಅವರು ಬಿಬಿಎಂಪಿ(BBMP) ಜೊತೆ ಸಭೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಅವರು ‘ ಇನ್ನು ಮುಂದೆ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಕಂಟ್ರೋಲ್ ರೂಂ ಓಪನ್ ಮಾಡಲಾಗಿದೆ. ಸಿಎಸ್ ಸೂಚನೆ ಹಿನ್ನೆಲೆ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಮಳೆ ಸಂಬಂಧ ದೂರು ಬಂದರೆ ತಕ್ಷಣ ಸಮಸ್ಯೆ ಸರಿಪಡಿಸಲು ಸೂಚನೆ

ಇನ್ನು ತುರ್ತು ಸಂದರ್ಭ ಎದುರಿಸಲು ಸನ್ನದ್ಧರಾಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಎಲ್ಲಾ ಅಧಿಕಾರಿಗಳು ಕೇಂದ್ರಸ್ಥಾನದಲ್ಲೇ ಇದ್ದು ಕಾರ್ಯನಿರ್ವಹಿಸಲು ತಿಳಿಸಲಾಗಿದೆ. ಮಳೆ ಸಂಬಂಧ ದೂರು ಬಂದರೆ ತಕ್ಷಣ ಸಮಸ್ಯೆ ಸರಿಪಡಿಸಲು ಸೂಚಿಸಿದ್ದೇವೆ. ಬೆಂಗಳೂರು ನಗರದಲ್ಲಿ ಮಳೆಯಿಂದ ಸದ್ಯಕ್ಕೆ ಯಾವುದೇ ಅನಾಹುತ ಆಗಿಲ್ಲ. ಶಾಲೆಗಳಿಗೆ ರಜೆ ನೀಡುವ ಬಗ್ಗೆ ಸಿಎಸ್‌ ಮಾಹಿತಿ ಕೇಳಿದ್ದರು. ಬಿಬಿಎಂಪಿ ಮುಖ್ಯ ಆಯುಕ್ತರ ಜೊತೆ ನಾನು ಸಹ ಮಾತನಾಡಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ:ಬೆಂಗಳೂರಿನಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ: ರಸ್ತೆಗಳು ಜಲಾವೃತ, ವಾಹನ ಸವಾರರೇ ಎಚ್ಚರ..ಎಚ್ಚರ

ಮಳೆ ಅವಾಂತರ ಸಂಬಂಧಿತ ದೂರಿಗೆ ಈ ಸಂಖ್ಯೆಗೆ ಕರೆ ಮಾಡಿ

ನಗರದ 8 ವಲಯ ವ್ಯಾಪ್ತಿಯಲ್ಲಿ 8 ನಿಯಂತ್ರಣ ಕೊಠಡಿಗಳಿದ್ದು, ಪಾಲಿಕೆ ಕೇಂದ್ರ ಕಛೇರಿಯಲ್ಲಿ 1 ನಿಯಂತ್ರಣ ಕೊಠಡಿಯಿದೆ. ಮಳೆಯಿಂದಾಗಿ ಏನಾದರು ಸಮಸ್ಯೆಗಳಿದ್ದರೆ, ಸಾರ್ವಜನಿಕರು ಪಾಲಿಕೆಯ ಉಚಿತ ಸಹಾಯವಾಣಿ ಸಂಖ್ಯೆಯಾದ 1533ಗೆ ಕರೆ ಮಾಡಿ ದೂರು ನೀಡಬಹುದಾಗಿದೆ. ಸದರಿ ದೂರಗಳನ್ನು ಸಂಬಂಧಪಟ್ಟ ವಲಯ ಹಾಗೂ ಅಧಿಕಾರಿಗಳ ಗಮನಕ್ಕೆ ತಂದು ಶೀಘ್ರವಾಗಿ ಸಮಸ್ಯೆ ಬಗೆಹರಿಸುವ ಕೆಲಸ ಮಾಡಲಾಗುತ್ತದೆ ಎಂದು ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:31 pm, Tue, 15 October 24

Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್