ಮೆಟ್ರೋ ಪ್ರಯಾಣಿಕರೇ ಗಮನಿಸಿ: ಶುಕ್ರವಾರ ಸಂಚಾರ ಸಮಯದಲ್ಲಿಲ್ಲ ಬದಲಾವಣೆ

ಐಪಿಎಲ್ ಕ್ರಿಕೆಟ್ ಪಂದ್ಯಗಳಿದ್ದ ದಿನ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ನಮ್ಮ ಮೆಟ್ರೋ ಸೇವೆಯ ಅವಧಿಯನ್ನು ವಿಸ್ತರಿಸುತ್ತದೆ. ಅದರಂತೆ, ಶುಕ್ರವಾರ ಕೂಡ ರಾತ್ರಿ 1.30 ರ ವರೆಗೆ ವಿಸ್ತರಿಸಿ ಈ ಹಿಂದೆ ಸುತ್ತೋಲೆ ಹೊರಡಿಸಲಾಗಿತ್ತು. ಆದರೆ ಇದೀಗ ಬಿಎಂಆರ್​​ಸಿಎಲ್ ಮಹತ್ವದ ಅಪ್​​ಡೇಟ್ ನೀಡಿದೆ.

ಮೆಟ್ರೋ ಪ್ರಯಾಣಿಕರೇ ಗಮನಿಸಿ: ಶುಕ್ರವಾರ ಸಂಚಾರ ಸಮಯದಲ್ಲಿಲ್ಲ ಬದಲಾವಣೆ
ನಮ್ಮ ಮೆಟ್ರೋ (ಸಾಂದರ್ಭಿಕ ಚಿತ್ರ)

Updated on: May 22, 2025 | 7:28 AM

ಬೆಂಗಳೂರು, ಮೇ 22: ಮೆಟ್ರೋ ರೈಲು (Namma Metro) ಸೇವೆಯ ಅವಧಿಗೆ ಸಂಬಂಧಿಸಿದಂತೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಮಹತ್ವದ ಅಪ್​ಡೇಟ್ ನೀಡಿದೆ. ಅದರಂತೆ, ದಿನಾಂಕ 23 ರಂದು ಶುಕ್ರವಾರ ವಿಸ್ತರಿತ ಸೇವೆ ಲಭ್ಯವಿರುವುದಿಲ್ಲ ಎಂದು ತಿಳಿಸಿದೆ. ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಸಂದೇಶ ಪ್ರಕಟಿಸಿರುವ ಬಿಎಂಆರ್​ಸಿಎಲ್ (BMRCL), ಮೇ 23, 2025 ರಂದು ರಾತ್ರಿ 1:30 ರವರೆಗೆ ವಿಸ್ತರಿಸಿದ ಮೆಟ್ರೋ ರೈಲು ಸೇವೆಯನ್ನು ರದ್ದುಪಡಿಸಲಾಗಿದೆ ಎಂದು ತಿಳಿಸಿದೆ.

23ರ ಮೇ 2025 ರಂದು ಬೆಂಗಳೂರಿನಲ್ಲಿ ನಡೆಯಬೇಕಾಗಿದ್ದ ಐಪಿಎಲ್ ಪಂದ್ಯವನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು (BCCI) ಲಖನೌದಲ್ಲಿ ನಡೆಸಲಿದ್ದು, ಈ ಹಿಂದೆ ಪ್ರಕಟಿಸಿದಂತೆ ಮೇ 23, 2025 ರಂದು ರಾತ್ರಿ 1:30 ರವರೆಗೆ ವಿಸ್ತರಿಸಿದ ಮೆಟ್ರೋ ರೈಲು ಸೇವೆಯನ್ನು ರದ್ದುಪಡಿಸಲಾಗಿದೆ ಎಂದು ಬಿಎಂಆರ್​ಸಿಎಲ್ ಪ್ರಕಟಣೆ ತಿಳಿಸಿದೆ. ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಮೆಟ್ರೋ ರೈಲುಗಳು ಎಂದಿನಂತೆ ಸಾಮಾನ್ಯ ಸೇವೆ ಒದಗಿಸಲಿದೆ ಎಂದು ಬಿಎಂಆರ್​ಸಿಎಲ್ ತಿಳಿಸಿದೆ.

ಇದನ್ನೂ ಓದಿ
ಬೆಂಗಳೂರು: ರಾಜಕಾಲುವೆ ಒತ್ತುವರಿ ತೆರವಿಗೆ ಸಿದ್ದರಾಮಯ್ಯ ಸೂಚನೆ
ಬೆಂಗಳೂರಿನಲ್ಲಿ ಡೆಂಗಿ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯಿಂದ ಹೊಸ ಪ್ಲಾನ್​
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ಆರ್​ಸಿಬಿಯ ಮುಂದಿನ ಪಂದ್ಯ ಬೆಂಗಳೂರಿನಿಂದ​ ಬೇರೆಡೆಗೆ ಶಿಫ್ಟ್​!

ಬಿಎಂಆರ್​ಸಿಎಲ್ ಎಕ್ಸ್ ಸಂದೇಶ


ಬೆಂಗಳೂರಿನಲ್ಲಿ ಮಳೆ ಮುನ್ಸೂಚನೆ ಇರುವ ಕಾರಣ ಮೇ 23ರಂದು ಬೆಂಗಳೂರಿನಲ್ಲಿ ನಡೆಯಬೇಕಿದ್ದ ಸನ್​ರೈಸರ್ಸ್ ಹೈದರಾಬಾದ್ ಹಾಗೂ ಆರ್​ಸಿಬಿ ನಡುವಣ ಪಂದ್ಯವನ್ನು ಲಖನೌಗೆ ಸ್ಥಳಾಂತರ ಮಾಡಲಾಗಿದೆ. ಮೊನ್ನೆಯಷ್ಟೇ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಆರ್​ಸಿಬಿ ಹಾಗೂ ಕೆಕೆಆರ್ ಪಂದ್ಯ ಮಳೆಯಿಂದ ರದ್ದಾಗಿತ್ತು. ಇದರ ಬೆನ್ನಲ್ಲೇ ಬಿಸಿಸಿಐ ಮುಂದಿನ ಪಂದ್ಯ ಸ್ಥಳಾಂತರ ಮಾಡುವ ನಿರ್ಧಾರ ಕೈಗೊಂಡಿತ್ತು.

ಇದನ್ನೂ ಓದಿ: ಬೆಂಗಳೂರಿನಲ್ಲಿ ನಡೆಯಬೇಕಿದ್ದ ಆರ್​ಸಿಬಿಯ ಮುಂದಿನ ಪಂದ್ಯ​ ಬೇರೆಡೆಗೆ ಶಿಫ್ಟ್​: ಎಲ್ಲಿಗೆ ಗೊತ್ತಾ?

ಈ ವರ್ಷದ ಐಪಿಎಲ್ ಟೂರ್ನಿ ಆರಂಭವಾಗುವ ಸಂದರ್ಭದಲ್ಲೇ ಬಿಎಂಆರ್​ಸಿಎಲ್ ಪ್ರಕಟಣೆ ಹೊರಡಿಸಿ, ಐಪಿಎಲ್ ಪಂದ್ಯಗಳಿರುವ ದಿನಗಳಂದು ಮೆಟ್ರೋ ಸೇವೆ ವಿಸ್ತರಿಸುವುದಾಗಿ ತಿಳಿಸಿತ್ತು. ಅದರಂತೆ ಪಂದ್ಯಗಳಿರುವ ದಿನ ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಮೆಟ್ರೋ ರೈಲುಗಳು ರಾತ್ರಿ 1.30 ರ ವರೆಗೆ ಸಂಚಾರ ಮಾಡುತ್ತಿದ್ದವು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us