AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಮನಿಸಿ: ನವೆಂಬರ್ 5 ರಂದು ಎಂಜಿ ರಸ್ತೆಯಿಂದ ಬೈಯ್ಯಪ್ಪನಹಳ್ಳಿವರೆಗೆ ನಮ್ಮ‌ ಮೆಟ್ರೋ ಕೆಲಕಾಲ ಸ್ಥಗಿತ

ನಿರ್ವಹಣಾ ಕಾಮಗಾರಿ ಹಿನ್ನೆಲೆ ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣದಿಂದ ಇಂದಿರಾನಗರದವರೆಗೆ ನವೆಂಬರ್ 5 ರಂದು ಬೆಳಗ್ಗೆ 9 ಗಂಟೆವರೆಗೆ ನಮ್ಮ ಮೆಟ್ರೋ ಸೇವೆ ಸ್ಥಗಿತಗೊಳ್ಳಲಿದೆ. ಎಂಜಿ ರಸ್ತೆಯಿಂದ ಬೈಯ್ಯಪ್ಪನಹಳ್ಳಿವರೆಗೆ ಮೆಟ್ರೋ ಸೇವೆ ಇರುವುದಿಲ್ಲ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಿಂದ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಗಮನಿಸಿ: ನವೆಂಬರ್ 5 ರಂದು ಎಂಜಿ ರಸ್ತೆಯಿಂದ ಬೈಯ್ಯಪ್ಪನಹಳ್ಳಿವರೆಗೆ ನಮ್ಮ‌ ಮೆಟ್ರೋ ಕೆಲಕಾಲ ಸ್ಥಗಿತ
ನಮ್ಮ ಮೆಟ್ರೋ
Kiran Surya
| Edited By: |

Updated on:Nov 03, 2023 | 10:03 PM

Share

ಬೆಂಗಳೂರು, ನವೆಂಬರ್​​​​ 03: ನಿರ್ವಹಣಾ ಕಾಮಗಾರಿ ಹಿನ್ನೆಲೆ ಸ್ವಾಮಿ ವಿವೇಕಾನಂದ ಮೆಟ್ರೋ (Metro) ನಿಲ್ದಾಣದಿಂದ ಇಂದಿರಾನಗರದವರೆಗೆ ನವೆಂಬರ್ 5 ರಂದು ಬೆಳಗ್ಗೆ 9 ಗಂಟೆವರೆಗೆ ನಮ್ಮ ಮೆಟ್ರೋ ಸೇವೆ ಸ್ಥಗಿತಗೊಳ್ಳಲಿದೆ. ಎಂಜಿ ರಸ್ತೆಯಿಂದ ಬೈಯ್ಯಪ್ಪನಹಳ್ಳಿವರೆಗೆ ಮೆಟ್ರೋ ಸೇವೆ ಇರುವುದಿಲ್ಲ. ಕಾಮಗಾರಿ ಪೂರ್ಣ ಬಳಿಕ ಮೆಟ್ರೋ ಸೇವೆ ಯಥಾಸ್ಥಿತಿ ಆರಂಭಗೊಳ್ಳುವುದಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಿಂದ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ನವೆಂಬರ್​ 5 ರಂದು ನೇರಳೆ ಮಾರ್ಗದಲ್ಲಿ ಸ್ವಾಮಿ ವಿವೇಕಾನಂದ ರಸ್ತೆ ಮತ್ತು ಇಂದಿರಾನಗರ ಮೆಟ್ರೋ ನಿಲ್ದಾಣಗಳ ನಡುವೆ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿದ್ದು, ಸದರಿ ಕಾರ್ಯವನ್ನು ನಿರ್ವಹಿಸಲು ಎಂ.ಜಿ ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವಿನ ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲು ಸೇವೆಗಳು ಬೆಳಗ್ಗೆ 7.00ಗಂಟೆಗೆ ಬದಲಾಗಿ 9.00 ಗಂಟೆಗೆ ಪ್ರಾರಂಭವಾಗಲಿದೆ.

ಇದನ್ನೂ ಓದಿ: Namma Metro: ನಮ್ಮ ಮೆಟ್ರೋಗೆ ಬಸವೇಶ್ವರ ಮೆಟ್ರೋ ಅಂತ ಹೆಸರಿಡಲು‌ ಸಿಎಂ ಬಳಿ‌ ಚರ್ಚಿಸಿ ತೀರ್ಮಾನ; ಎಂಬಿ ಪಾಟೀಲ್​​

ಬೆಳಗ್ಗೆ 9.00 ಗಂಟೆಯ ನಂತರ ಎಂ.ಜಿ. ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆಗಳು ಎಂದಿನಂತೆ ಲಭ್ಯವಿರುತ್ತದೆ.

ಚಲ್ಲಘಟ್ಟ ಮತ್ತು ಎಂ.ಜಿ ರಸ್ತೆ, ಬೈಯಪ್ಪನಹಳ್ಳಿ ಮತ್ತು ವೈಟ್‌ಫೀಲ್ಡ್ (ಕಾಡುಗೋಡಿ), ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಡುವಿನ ಮಾರ್ಗಗಳಲ್ಲಿ, ರೈಲುಗಳ ಸೇವೆಯು ಬೆಳಿಗ್ಗೆ 7.00 ಗಂಟೆಗೆ ಆಯಾ ಟರ್ಮಿನಲ್ ನಿಲ್ದಾಣಗಳಿಂದ ವೇಳಾಪಟ್ಟಿಯ ಪಕಾರ ಸಂಚರಿಸಲಿದೆ. ನಮ್ಮ ಮೆಟ್ರೋ ಪಯಾಣಿಕರು ಸದರಿ ಬದಲಾವಣೆಯನ್ನು ಗಮನಿಸಬೇಕೆಂದು ಬೆಂಗಳೂರು ಮೆಟ್ರೋ ರೈಲು ನಿಗಮ ಕೋರಿದ್ದು, ಪ್ರಯಾಣಿಕರಿಗೆ ಇದರಿಂದಾಗುವ ಅನಾನುಕೂಲಗಳ ಬಗ್ಗೆ ವಿಷಾದ ವ್ಯಕ್ತಪಡಿಸಿದೆ.

ನಮ್ಮ ಮೆಟ್ರೋ ಹೆಸರು ಬದಲಾವಣೆ 

ಸಿಲಿಕಾನ್ ಸಿಟಿಯ ಲಕ್ಷಾಂತರ ಮಂದಿಗೆ ಅನುಕೂಲವಾಗಿರುವ ನಮ್ಮ ಮೆಟ್ರೋ ಸಂಪೂರ್ಣ ಜಾಲಕ್ಕೆ 12ನೇ ಶತಮಾನದ ಬಸವೇಶ್ವರರ ಹೆಸರನ್ನು ನಾಮಕರಣ ಮಾಡುವ ಪ್ರಸ್ತಾವನೆಗೆ ಸ್ಥಳೀಯರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ನಮ್ಮ ಮೆಟ್ರೋ ಕೇವಲ ಹೆಸರಲ್ಲ. ಅದು ಬೆಂಗಳೂರಿನ ಜನರಿಗೆ ಭಾವನಾತ್ಮಕ ವಿಷಯ. ಇಂತಹ ವಿಷಯಗಳ ಜತೆ ಆಟವಾಡುವುದನ್ನು ಬಿಟ್ಟುಬಿಡಿ. ಹೆಸರು ಬದಲಾವಣೆ ಮಾಡುವ ಬಗ್ಗೆ ತಲೆ ಕೆಡಿಸಿಕೊಳ್ಳುವುದನ್ನು ಬಿಟ್ಟು ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ತಲೆ ಕೆಡಿಸಿಕೊಳ್ಳಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಮೆಟ್ರೋ ಕಾಮಗಾರಿ: ಇಂದಿನಿಂದ 4 ತಿಂಗಳವರೆಗೆ ಸೆಂಟ್ರಲ್ ಜಂಕ್ಷನ್ ಫ್ಲೈಓವರ್ ಬಂದ್

ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರಿನಂತೆ ನಮ್ಮ ಮೆಟ್ರೋಗೆ ಬಸವೇಶ್ವರರ ಹೆಸರನ್ನು ಮರುನಾಮಕರಣ ಮಾಡುವ ಬಗ್ಗೆ ಸಲಹೆಗಳು ಬಂದಿವೆ ಎಂದು ಸಚಿವ ಎಂ.ಬಿ.ಪಾಟೀಲ್ ಇತ್ತೀಚೆಗೆ ಪ್ರಸ್ತಾಪಿಸಿದ್ದರು. ಇದಕ್ಕೆ ಜನರಿಂದ ವಿರೋಧ ವ್ಯಕ್ತವಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಬಿಸಿ ಬಿಸಿ ಚರ್ಚೆ ಕೂಡ ಶುರುವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:27 pm, Fri, 3 November 23

ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಬಿಗ್​​ಬಾಸ್ ಮನೆಯಲ್ಲಿ ಸ್ಪಂದನಾ-ರಾಶಿಕಾ ಕುಸ್ತಿ: ವಿಡಿಯೋ
ಬಿಗ್​​ಬಾಸ್ ಮನೆಯಲ್ಲಿ ಸ್ಪಂದನಾ-ರಾಶಿಕಾ ಕುಸ್ತಿ: ವಿಡಿಯೋ
New Year 2026: ಹೊಸ ವರ್ಷ ಸ್ವಾಗತಿಸಿದ ಮೊದಲ ದೇಶ ನ್ಯೂಜಿಲೆಂಡ್‌
New Year 2026: ಹೊಸ ವರ್ಷ ಸ್ವಾಗತಿಸಿದ ಮೊದಲ ದೇಶ ನ್ಯೂಜಿಲೆಂಡ್‌