AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ತಿಬೆಲೆ ಅಗ್ನಿ ದುರಂತ: ಸಾವಿನ ಸಂಖ್ಯೆ 16ಕ್ಕೆ ಏರಿಕೆ, ಪಟಾಕಿ ಖರೀದಿಸಲು ಹೋಗಿ ದುರಂತ ಅಂತ್ಯಕಂಡ

Attibele Fire CrackersTragedy: ಬೆಂಗಳೂರಿನ ಆನೇಕಲ್​ ತಾಲೂಕಿನ ಅತ್ತಿಬೆಲೆ ಪಟಾಕಿ ಅಗ್ನಿ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವನ್ನಪ್ಪಿದ್ದಾನೆ. ಇದರಿಂದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಗೆಳೆಯ ಬರ್ತ್​ಡೇಗೆ ಪಟಾಕಿ ಖರಿದೀಸಲು ಹೋಗಿದ್ದ ವೆಂಕಟೇಶ್​ ಎನ್ನುವಾತ ದುರಂತ ಅಂತ್ಯ ಕಂಡಿದ್ದಾನೆ.

ಅತ್ತಿಬೆಲೆ ಅಗ್ನಿ ದುರಂತ: ಸಾವಿನ ಸಂಖ್ಯೆ 16ಕ್ಕೆ ಏರಿಕೆ, ಪಟಾಕಿ ಖರೀದಿಸಲು ಹೋಗಿ ದುರಂತ ಅಂತ್ಯಕಂಡ
ಅತ್ತಿಬೆಲೆ ಅಗ್ನಿ ದುರಂತ
Follow us
ರಾಮು, ಆನೇಕಲ್​
| Updated By: ರಮೇಶ್ ಬಿ. ಜವಳಗೇರಾ

Updated on: Oct 12, 2023 | 10:10 AM

ಬೆಂಗಳೂರು, (ಅಕ್ಟೋಬರ್ 12): ಅತ್ತಿಬೆಲೆ ಪಟಾಕಿ ಅಗ್ನಿ ದುರಂದಲ್ಲಿ (Attibele Fire Crackers Tragedy) ಗಾಯಗೊಂಡಿದ್ದ ಯುವಕನೋರ್ವ ಮೃತಪಟ್ಟಿದ್ದಾನೆ. ಇದರೊಂದಿಗೆ ದರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಅಗ್ನಿ ದುರಂತದಲ್ಲಿ ಗಾಯಗೊಂಡಿದ್ದ ಬೊಮ್ಮನಹಳ್ಳಿಯ ಗಾರೇಬಾವಿಪಾಳ್ಯದ ನಿವಾಸಿ ವೆಂಕಟೇಶ್ ಅವರು ಇಂದು (ಅಕ್ಟೋಬರ್ 12) ಬೆಳಗ್ಗೆ ಬೆಂಗಳೂರಿನ ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಪಟಾಕಿ ಖರೀದಿಸಲು ಹೋಗಿ ದುರಂತ ಅಂತ್ಯಕಂಡ

ಸ್ನೇಹಿತನ ಬರ್ತಡೇಗೆಂದು ಅತ್ತಿಬೆಲೆಯ ಬಾಲಾಜಿ ಟ್ರೇಡರ್ಸ್​ಗೆ ಪಟಾಕಿ ಖರೀದಿಸಲು ಹೋಗಿದ್ದರು. ಅದೇ ವೇಳೆಯೇ ಅಗ್ನಿ ದುರಂತ ಸಂಭವಿಸಿತ್ತು. ಈ ದುರ್ಘಟನೆಯಲ್ಲಿ ವೆಂಕಟೇಶ್​ ಸಿಲುಕಿಕೊಂಡು ಗಂಭೀರವಾಗಿ ಗಾಯಗೊಂಡಿದ್ದರು. ಬೆಂಕಿ ಅವಘಡದಲ್ಲಿ 50ರಷ್ಟು ದೇಹ ಸುಟ್ಟಿತ್ತು. ಕೂಡಲೇ ಗಾಯಾಳು ವೆಂಕಟೇಶ್ ನನ್ನು ಸೆಂಟ್ ಜಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ವೆಂಕಟೇಶ್ ಸಾವನ್ನಪ್ಪಿದ್ದಾನೆ.

ಇದನ್ನೂ ಓದಿ: ಅತ್ತಿಬೆಲೆ ಪಟಾಕಿ ದುರಂತ: ನಾಲ್ವರು ಅಧಿಕಾರಿಗಳ ಅಮಾನತು, ಇನ್ನಷ್ಟು ತಲೆದಂಡ ಸಾಧ್ಯತೆ

ಇದೇ ಅಕ್ಟೋಬರ್ 07ರಂದು ಬೆಂಗಳೂರು ನಗರ ಜಿಲ್ಲೆಯ ಆನೇಕಲ್ (Anekal) ತಾಲೂಕಿನ ಅತ್ತಿಬೆಲೆಯಲ್ಲಿ (Attibele) ಪಟಾಕಿ ಗೋದಾಮಿನಲ್ಲಿ ಅಗ್ನಿ ದುರಂತ ಸಂಭವಿಸಿತ್ತು. ಈ ಅಗ್ನಿ ಅವಘಡದಲ್ಲಿ ಪಟಾಕಿಗಳು ಹೊತ್ತಿ ಉರಿದಿದ್ದವು. ಇದರಿಂದ ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದ ತಮಿಳುನಾಡಿನ ಮೂಲದ 15 ಜನ ಮೃತಪಟ್ಟಿದ್ದರು. ಇನ್ನು ಪಟಾಕಿ ಖರೀದಿಗೆ ಹೋಗಿದ್ದ ವೆಂಕಟೇಶ್​ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ್ದ.

ಒಟ್ಟಿನಲ್ಲಿ ಗೆಳೆಯನ ಹುಟ್ಟುಹಬ್ಬವನ್ನು ಭರ್ಜರಿಯಾಗಿಯಾಗಿ ಆಚರಿಸಲು ಪಟಾಕಿ ಖದೀಸಲು ಹೋಗಿದ್ದ ವೆಂಕಟೇಶ್​ ಇದೀಗ ದುರಂತ ಅಂತ್ಯ ಕಂಡಿದ್ದಾನೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್
ಸಿದ್ದರಾಮಯ್ಯ ಏನು ಮಾಡುತ್ತಾರೋ ಎಂಬ ಭಯವಂತೂ ಇದೆ: ನಾಡಗೌಡ
ಸಿದ್ದರಾಮಯ್ಯ ಏನು ಮಾಡುತ್ತಾರೋ ಎಂಬ ಭಯವಂತೂ ಇದೆ: ನಾಡಗೌಡ