AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ತಿಬೆಲೆ ಅಗ್ನಿ ದುರಂತ: ಸಾವಿನ ಸಂಖ್ಯೆ 16ಕ್ಕೆ ಏರಿಕೆ, ಪಟಾಕಿ ಖರೀದಿಸಲು ಹೋಗಿ ದುರಂತ ಅಂತ್ಯಕಂಡ

Attibele Fire CrackersTragedy: ಬೆಂಗಳೂರಿನ ಆನೇಕಲ್​ ತಾಲೂಕಿನ ಅತ್ತಿಬೆಲೆ ಪಟಾಕಿ ಅಗ್ನಿ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವನ್ನಪ್ಪಿದ್ದಾನೆ. ಇದರಿಂದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಗೆಳೆಯ ಬರ್ತ್​ಡೇಗೆ ಪಟಾಕಿ ಖರಿದೀಸಲು ಹೋಗಿದ್ದ ವೆಂಕಟೇಶ್​ ಎನ್ನುವಾತ ದುರಂತ ಅಂತ್ಯ ಕಂಡಿದ್ದಾನೆ.

ಅತ್ತಿಬೆಲೆ ಅಗ್ನಿ ದುರಂತ: ಸಾವಿನ ಸಂಖ್ಯೆ 16ಕ್ಕೆ ಏರಿಕೆ, ಪಟಾಕಿ ಖರೀದಿಸಲು ಹೋಗಿ ದುರಂತ ಅಂತ್ಯಕಂಡ
ಅತ್ತಿಬೆಲೆ ಅಗ್ನಿ ದುರಂತ
ರಾಮು, ಆನೇಕಲ್​
| Edited By: |

Updated on: Oct 12, 2023 | 10:10 AM

Share

ಬೆಂಗಳೂರು, (ಅಕ್ಟೋಬರ್ 12): ಅತ್ತಿಬೆಲೆ ಪಟಾಕಿ ಅಗ್ನಿ ದುರಂದಲ್ಲಿ (Attibele Fire Crackers Tragedy) ಗಾಯಗೊಂಡಿದ್ದ ಯುವಕನೋರ್ವ ಮೃತಪಟ್ಟಿದ್ದಾನೆ. ಇದರೊಂದಿಗೆ ದರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಅಗ್ನಿ ದುರಂತದಲ್ಲಿ ಗಾಯಗೊಂಡಿದ್ದ ಬೊಮ್ಮನಹಳ್ಳಿಯ ಗಾರೇಬಾವಿಪಾಳ್ಯದ ನಿವಾಸಿ ವೆಂಕಟೇಶ್ ಅವರು ಇಂದು (ಅಕ್ಟೋಬರ್ 12) ಬೆಳಗ್ಗೆ ಬೆಂಗಳೂರಿನ ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಪಟಾಕಿ ಖರೀದಿಸಲು ಹೋಗಿ ದುರಂತ ಅಂತ್ಯಕಂಡ

ಸ್ನೇಹಿತನ ಬರ್ತಡೇಗೆಂದು ಅತ್ತಿಬೆಲೆಯ ಬಾಲಾಜಿ ಟ್ರೇಡರ್ಸ್​ಗೆ ಪಟಾಕಿ ಖರೀದಿಸಲು ಹೋಗಿದ್ದರು. ಅದೇ ವೇಳೆಯೇ ಅಗ್ನಿ ದುರಂತ ಸಂಭವಿಸಿತ್ತು. ಈ ದುರ್ಘಟನೆಯಲ್ಲಿ ವೆಂಕಟೇಶ್​ ಸಿಲುಕಿಕೊಂಡು ಗಂಭೀರವಾಗಿ ಗಾಯಗೊಂಡಿದ್ದರು. ಬೆಂಕಿ ಅವಘಡದಲ್ಲಿ 50ರಷ್ಟು ದೇಹ ಸುಟ್ಟಿತ್ತು. ಕೂಡಲೇ ಗಾಯಾಳು ವೆಂಕಟೇಶ್ ನನ್ನು ಸೆಂಟ್ ಜಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ವೆಂಕಟೇಶ್ ಸಾವನ್ನಪ್ಪಿದ್ದಾನೆ.

ಇದನ್ನೂ ಓದಿ: ಅತ್ತಿಬೆಲೆ ಪಟಾಕಿ ದುರಂತ: ನಾಲ್ವರು ಅಧಿಕಾರಿಗಳ ಅಮಾನತು, ಇನ್ನಷ್ಟು ತಲೆದಂಡ ಸಾಧ್ಯತೆ

ಇದೇ ಅಕ್ಟೋಬರ್ 07ರಂದು ಬೆಂಗಳೂರು ನಗರ ಜಿಲ್ಲೆಯ ಆನೇಕಲ್ (Anekal) ತಾಲೂಕಿನ ಅತ್ತಿಬೆಲೆಯಲ್ಲಿ (Attibele) ಪಟಾಕಿ ಗೋದಾಮಿನಲ್ಲಿ ಅಗ್ನಿ ದುರಂತ ಸಂಭವಿಸಿತ್ತು. ಈ ಅಗ್ನಿ ಅವಘಡದಲ್ಲಿ ಪಟಾಕಿಗಳು ಹೊತ್ತಿ ಉರಿದಿದ್ದವು. ಇದರಿಂದ ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದ ತಮಿಳುನಾಡಿನ ಮೂಲದ 15 ಜನ ಮೃತಪಟ್ಟಿದ್ದರು. ಇನ್ನು ಪಟಾಕಿ ಖರೀದಿಗೆ ಹೋಗಿದ್ದ ವೆಂಕಟೇಶ್​ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ್ದ.

ಒಟ್ಟಿನಲ್ಲಿ ಗೆಳೆಯನ ಹುಟ್ಟುಹಬ್ಬವನ್ನು ಭರ್ಜರಿಯಾಗಿಯಾಗಿ ಆಚರಿಸಲು ಪಟಾಕಿ ಖದೀಸಲು ಹೋಗಿದ್ದ ವೆಂಕಟೇಶ್​ ಇದೀಗ ದುರಂತ ಅಂತ್ಯ ಕಂಡಿದ್ದಾನೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು