AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ತಿಬೆಲೆ ಪಟಾಕಿ ದುರಂತ: ಮೃತರ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ಚೆಕ್ ವಿತರಿಸಿದ ತಹಶೀಲ್ದಾರ್

ಅತ್ತಿಬೆಲೆ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಆನೇಕಲ್ ತಹಶೀಲ್ದಾರ್ ಶಿವಪ್ಪ ಲಮಾಣಿ ನೇತೃತ್ವದಲ್ಲಿ 5 ಲಕ್ಷ ರೂಪಾಯಿ ಪರಿಹಾರ ಚೆಕ್ ವಿತರಣೆ ಮಾಡಲಾಗಿದೆ. ತಮಿಳುನಾಡಿನ ತಹಶೀಲ್ದಾರ್​ಗಳ ಸಹಭಾಗಿತ್ವದಲ್ಲಿ ತಮಿಳುನಾಡಿನ ಕಾರ್ಮಿಕರ ಕುಟುಂಬಗಳಿಗೆ ತಹಶೀಲ್ದಾರ್ ಚೆಕ್ ವಿತರಿಸಿದ್ದಾರೆ.

ಅತ್ತಿಬೆಲೆ ಪಟಾಕಿ ದುರಂತ: ಮೃತರ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ಚೆಕ್ ವಿತರಿಸಿದ ತಹಶೀಲ್ದಾರ್
ಚೆಕ್ ವಿತರಣೆ
Follow us
ರಾಮು, ಆನೇಕಲ್​
| Updated By: ಗಂಗಾಧರ​ ಬ. ಸಾಬೋಜಿ

Updated on: Oct 28, 2023 | 6:26 PM

ಆನೇಕಲ್, ಅಕ್ಟೋಬರ್​​​​ 28: ಆನೆಕಲ್​ ತಾಲೂಕಿನ ಅತ್ತಿಬೆಲೆಯಲ್ಲಿನ (Attibele) ಪಟಾಕಿ ಗೋಡೌನ್​ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಕುಟುಂಬಸ್ಥರಿಗೆ ಸಿಎಂ ಸಿದ್ದರಾಮಯ್ಯ ಈ ಹಿಂದೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದರು. ಇದೀಗ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಆನೇಕಲ್ ತಹಶೀಲ್ದಾರ್ ಶಿವಪ್ಪ ಲಮಾಣಿ ನೇತೃತ್ವದಲ್ಲಿ 5 ಲಕ್ಷ ರೂಪಾಯಿ ಪರಿಹಾರ ಚೆಕ್ ವಿತರಣೆ ಮಾಡಲಾಗಿದೆ. ತಮಿಳುನಾಡಿನ ತಹಶೀಲ್ದಾರ್​ಗಳ ಸಹಭಾಗಿತ್ವದಲ್ಲಿ ತಮಿಳುನಾಡಿನ ಕಾರ್ಮಿಕರ ಕುಟುಂಬಗಳಿಗೆ ತಹಶೀಲ್ದಾರ್ ಚೆಕ್ ವಿತರಿಸಿದ್ದಾರೆ.

ವೆಲ್ಲಾಕುಟ್ಟೈ ಗ್ರಾಮದ ರಾಜೇಶ್, ದಿನೇಶ್, ಸಂತೋಷ್ ಕುಮಾರ್, ನಿತೀಶ್​, ಅಮ್ಮಪೆಟೈ ಗ್ರಾಮದ ವೇದಪ್ಪನ್, ಆದಿಕೇಶವನ್, ವಿಜಯರಾಘವನ್​ ಆಕಾಶ್ ರಾಜ್, ಗಿರಿ, ಇಂಬರ್ತಿ, ಮುನಿವೇಲ್, ನೀಪತುರೈನ ಪ್ರಕಾಶರಾಜ್​, ಹೊಸೂರಿನ ಆಂಥೋನಿ ಪೌಲಾರಾಜ್ ಸೇರಿ 13 ಕಾರ್ಮಿಕರಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ 5 ಲಕ್ಷ ರೂ. ಪರಿಹಾರ ಚೆಕ್ ವಿತರಣೆ ಮಾಡಲಾಗಿದೆ. ಉಳಿದ ಮೂವರು ಕಾರ್ಮಿಕರ ಕುಟುಂಬಗಳಿಗೆ ಇನ್ನೆರಡು ದಿನದಲ್ಲಿ ಪರಿಹಾರ ನೀಡಲಿದ್ದಾರೆ.

ಇದನ್ನೂ ಓದಿ: ಆನೇಕಲ್: ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಪಟಾಕಿ ಅಂಗಡಿ: 13 ಜನರು ಸಜೀವದಹನ

ಪ್ರಕರಣಕ್ಕೆ ಸಂಬಂಧಿಸಿದಂತೆ ಪಟಾಕಿ ಮಾಲೀಕ ರಾಮಸ್ವಾಮಿ ರೆಡ್ಡಿ, ಪುತ್ರ ನವೀನ್​ ಮತ್ತು ಕಟ್ಟಡದ ಮಾಲೀಕ ಅನಿಲ್​ನನ್ನು ಪೊಲೀಸರು ಬಂಧಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಗೋಡೌನ್​​ನಲ್ಲಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿಲ್ಲ. ಪಟಾಕಿ ಮಾರಾಟ ಮಾಡಲು ಹಾಗೂ ಸಂಗ್ರಹಿಸಲು ಎರಡಕ್ಕೂ ಲೈಸೆನ್ಸ್ ಇದೆಯಾ? ಎಂಬುವುದನ್ನು ಪರಿಶೀಲಿಸಲಾಗಿದೆ.

ಇದನ್ನೂ ಓದಿ: ಅಗ್ನಿ ದುರಂತದಲ್ಲಿ 13 ಜನ ಸಜೀವದಹನ: ಸ್ಥಳಕ್ಕೆ ಡಿಕೆ ಶಿವಕುಮಾರ್​ ಭೇಟಿ, ಪರಿಹಾರ ನೀಡುವಂತೆ ಬೊಮ್ಮಾಯಿ ಆಗ್ರಹ

ಅಕ್ಟೋಬರ್​​ 07 ರಂದು ಲಾರಿಯಿಂದ ಪಟಾಕಿ ಅನ್​ಲೋಡ್ ಮಾಡುವಾಗ ಆಕಸ್ಮಿಕ ಬೆಂಕಿ ತಗುಲಿ ಪಟಾಕಿ  ಅಂಗಡಿ ಹೊತ್ತಿ ಉರಿದಿದ್ದು, 13 ಜನರು ಸಜೀವದಹನವಾಗಿರುವಂತಹ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ನಡೆದಿತ್ತು.

ಅಗ್ನಿ ದುರಂತದಲ್ಲಿ ಕೋಟ್ಯಂತರ ಮೌಲ್ಯದ ಪಟಾಕಿ ಅಗ್ನಿಗಾಹುತಿಯಾಗುವುದರೊಂದಿಗೆ 1 ಕ್ಯಾಂಟ್ರೋ, 2 ಬೊಲೆರೋ, 7 ಬೈಕ್​ಗಳು ಸಹ ಬೆಂಕಿಗಾಹುತಿ ಆಗಿತ್ತು. ವಾಹನ ಸವಾರರಿಗೆ ಪಟಾಕಿ ಅಂಗಡಿ ದುರಂತ ಎಫೆಕ್ಟ್ ತಟ್ಟಿದ್ದು, ಅತ್ತಿಬೆಲೆ ಕಡೆ ತೆರಳುವ ಮಾರ್ಗದಲ್ಲಿ ಟ್ರಾಫಿಕ್​ ಜಾಮ್ ಉಂಟಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು