AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ತಿಬೆಲೆ ದುರಂತ ನಮಗೊಂದು ಪಾಠ: ರಾಜ್ಯಾದ್ಯಂತ ಪಟಾಕಿ ನಿಷೇಧಕ್ಕೆ ಚಿಂತನೆ: ಗೃಹ ಸಚಿವ ಜಿ ಪರಮೇಶ್ವರ್

ಅತ್ತಿಬೆಲೆ ಪಟಾಕಿ ದುರಂತದಲ್ಲಿ 17 ಮಂದಿ ಸಾವು ವಿಷಾದನೀಯ. ಆ ಪ್ರಕರಣ ನಮಗೆ ಪಾಠ ಕಲಿಸಿದೆ. ಹಾಗಾಗಿ ರಾಜ್ಯಾದ್ಯಂತ ಪಟಾಕಿ ನಿಷೇಧಕ್ಕೆ ಚಿಂತನೆ ಮಾಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಸಾಧಕ ಬಾಧಕ ಗಮನಿಸಿ ಕನಿಷ್ಠ ಬೆಂಗಳೂರಿನಲ್ಲಿ ಪಟಾಕಿ ಬ್ಯಾನ್ ಮಾಡಲು ಚಿಂತನೆ ಮಾಡಲಾಗುವುದು ಎಂದಿದ್ದಾರೆ.

ಅತ್ತಿಬೆಲೆ ದುರಂತ ನಮಗೊಂದು ಪಾಠ: ರಾಜ್ಯಾದ್ಯಂತ ಪಟಾಕಿ ನಿಷೇಧಕ್ಕೆ ಚಿಂತನೆ: ಗೃಹ ಸಚಿವ ಜಿ ಪರಮೇಶ್ವರ್
ಗೃಹಸಚಿವ ಜಿ.ಪರಮೇಶ್ವರ್
ರಾಮು, ಆನೇಕಲ್​
| Edited By: |

Updated on:Oct 18, 2023 | 3:30 PM

Share

ಆನೇಕಲ್, ಅಕ್ಟೋಬರ್​​​​ 18: ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ ನಮಗೆ ಪಾಠ ಕಲಿಸಿದೆ. ಹಾಗಾಗಿ ರಾಜ್ಯಾದ್ಯಂತ ಪಟಾಕಿ ನಿಷೇಧಕ್ಕೆ ಚಿಂತನೆ ಮಾಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ (G Parameshwara) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾಧಕ ಬಾಧಕ ಗಮನಿಸಿ ಕನಿಷ್ಠ ಬೆಂಗಳೂರಿನಲ್ಲಿ ಪಟಾಕಿ ಬ್ಯಾನ್ ಮಾಡಲು ಚಿಂತನೆ ಮಾಡಲಾಗುವುದು. ಬೆಂಗಳೂರಿನಲ್ಲಿ ಹೆಚ್ಚು ಜನ ವಾಸ ಹಿನ್ನೆಲೆ, ಜೊತೆಗೆ ಇತ್ತೀಚೆಗೆ ಪಟಾಕಿ ಅವಘಡಗಳಲ್ಲಿ ಅಮಾಯಕರು ಮೃತಪಟ್ಟಿದ್ದಾರೆ. ದೆಹಲಿ ಮಾದರಿಯಲ್ಲಿ ರಾಜ್ಯದಲ್ಲಿ ಪಟಾಕಿ ಬ್ಯಾನ್​ಗೆ ಚಿಂತನೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಅತ್ತಿಬೆಲೆ ಪಟಾಕಿ ದುರಂತದಲ್ಲಿ 17 ಮಂದಿ ಸಾವು ವಿಷಾದನೀಯ. ಪಟಾಕಿ ಮಳಿಗೆ ಮಾಲೀಕ 2017 ರಿಂದ 2022 ವರೆಗೆ ನೂತನ ಪರವಾನಗಿ ನವೀಕರಣ ನಡುವೆ ಫೇಕ್ ಲೈಸೆನ್ಸ್ ಸೃಷ್ಟಿ ಮಾಡಲಾಗಿದೆ. ಕೇವಲ 1 ಸಾವಿರ ಕೆಜಿ ಪಟಾಕಿ ಮಾರಾಟಕ್ಕೆ ಪರವಾನಗಿ ನೀಡಲಾಗಿದೆ. ಆದರೆ 50 ಟನ್​ಗೂ ಅಧಿಕ ಪಟಾಕಿ ಅಕ್ರಮವಾಗಿ ದಸ್ತಾನು ಮಾಡಲಾಗಿತ್ತು.

ಇದನ್ನೂ ಓದಿ: ಪಬ್ ಬೆಂಕಿ ದುರಂತ, ಬೆಂಗಳೂರು; ಸುತ್ತಮುತ್ತ ಶಾಲಾ ಕಾಲೇಜುಗಳಿದ್ದರೂ ಪಬ್ ನಡೆಸಲು ಅನುಮತಿ ನೀಡಲಾಗಿದೆ: ಪ್ರತ್ಯಕ್ಷದರ್ಶಿ

ಅಕ್ರಮ ದಸ್ತಾನು ಪರಿಶೀಲನೆ ವೇಳೆ ತಹಶಿಲ್ದಾರ್ ಸೇರಿದಂತೆ ಕಂದಾಯ ಅಧಿಕಾರಿಗಳು, ಪೊಲೀಸ್, ಪೈರ್ ಮತ್ತು ಟ್ರಾನ್ಸ್‌ಪೋರ್ಟ್‌ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದು, ಗಡಿಯಲ್ಲಿ ಆರ್ಟಿಓ ಅಧಿಕಾರಿಗಳು ಪರಿಶೀಲಿಸಿ ಕ್ರಮ ವಹಿಸಿಲ್ಲ. ಹಾಗಾಗಿ ತಹಶಿಲ್ದಾರ್ ಸೇರಿದಂತೆ ಹಲವು ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ದುರಂತ ನಡೆದ ಸ್ಥಳಕ್ಕೆ ಗೃಹ ಸಚಿವ ಪರಮೇಶ್ವರ್​ ಭೇಟಿ

ಅತ್ತಿಬೆಲೆ ಪಟಾಕಿ ಗೋಡೌನ್​ನಲ್ಲಿ ಅಗ್ನಿ ದುರಂತ ನಡೆದ ಸ್ಥಳಕ್ಕೆ ಗೃಹ ಇಲಾಖೆ ಸಚಿವ ಪರಮೇಶ್ವರ್​ ಇಂದು ಭೇಟಿ ಮಾಡಿದ್ದು, ಘಟನೆ ಅಗ್ನಿಶಾಮಕ ಡಿಐಜಿ ಪಂತ್, ಐಜಿಪಿ ರವಿಕಾಂತೇಗೌಡರಿಂದ ಮಾಹಿತಿ ಪಡೆದುಕೊಂಡಿದ್ದಾರೆ.​ ಮಳಿಗೆ ಮಾಲೀಕನ ಬಗ್ಗೆ ಡಿಸಿಯಿಂದ ಮಾಹಿತಿ ಪಡೆದಿದ್ದು,​ ನಕಲಿ ಲೈಸೆನ್ಸ್ ಸೃಷ್ಟಿಸಿದ್ದರು ಎಂದು ಡಿಸಿ ದಯಾನಂದ್​ ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಫೋರಂ ಮಾಲ್ ಬಳಿ ಅಗ್ನಿ ಅವಘಡ, ಪ್ರಾಣ ಉಳಿಸಿಕೊಳ್ಳಲು 4ನೇ ಮಹಡಿಯಿಂದ ಜಿಗಿದ ವ್ಯಕ್ತಿ

ದುರಂತದಲ್ಲಿ ಹದಿನಾಲ್ಕು ಮಂದಿ ಸಜೀವ ದಹನಗೊಂಡಿದ್ದರು. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದರು. ನಾಲ್ವರ ಪೈಕಿ ಚಿಕಿತ್ಸೆ ಫಲಕಾರಿಯಾಗದೆ ಮೂವರು ಸಾವನ್ನಪ್ಪಿದರು. ಸೆಂಟ್ ಜಾನ್ಸ್ ಆಸ್ಪತ್ರೆಗೆ ಮೂವರು ಗಾಯಾಳುಗಳನ್ನ ರವಾನಿಸಲಾಗಿತ್ತು. ವಿಕ್ಟೋರಿಯಾ ಆಸ್ಪತ್ರೆಗೆ ಓರ್ವ ಗಾಯಾಳುವನ್ನ ರವಾನೆ ಮಾಡಲಾಗಿತ್ತು.

  • ಕಳೆದ 11ನೇ ದಿನಾಂಕದಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕಾರ್ಮಿಕ ದಿನೇಶ್ ಸಾವನ್ನಪ್ಪಿದ್ದ.
  • ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ವೆಂಕಟೇಶ್ ಕಳೆದ ಅ.12ರಂದು ಮೃತ ಪಟ್ಟಿದ್ದ.
  • ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಗಾಯಾಳು ಕಾರ್ಮಿಕ ರಾಜೇಶ್​ ಸಾವು.
  • ಪಟಾಕಿ ಅಂಗಡಿ ಮಾಲೀಕ ನವೀನ್​​ ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:08 pm, Wed, 18 October 23

Follow Us
Ramu Ram
Ramu Ram

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?