AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತುಲ್ ಸುಭಾಷ್‌ ಆತ್ಮಹತ್ಯೆ ಕೇಸ್​: ನಿಖಿತಾ ಸೇರಿ ಮೂವರಿಗೆ ಜಾಮೀನು ಮಂಜೂರು

ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿದ್ದ ಆರೋಪಿಗಳಾದ ಅತುಲ್‌ ಪತ್ನಿ ನಿಖಿತಾ ಸಿಂಘಾನಿಯಾ, ಅತ್ತೆ ನಿಶಾ ಸಿಂಘಾನಿಯಾ ಮತ್ತು ಬಾಮೈದ ಅನುರಾಗ್ ಸಿಂಘಾನಿಯಾಗೆ ಬೆಂಗಳೂರಿನ 29ನೇ ಸಿಸಿಹೆಚ್‌ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಅತುಲ್ ಸುಭಾಷ್‌ ಆತ್ಮಹತ್ಯೆ ಕೇಸ್​: ನಿಖಿತಾ ಸೇರಿ ಮೂವರಿಗೆ ಜಾಮೀನು ಮಂಜೂರು
ಅತುಲ್ ಸುಭಾಷ್‌ ಆತ್ಮಹತ್ಯೆ ಕೇಸ್​: ನಿಖಿತಾ ಸೇರಿ ಮೂವರಿಗೆ ಜಾಮೀನು ಮಂಜೂರು
ರಾಚಪ್ಪಾಜಿ ನಾಯ್ಕ್
| Edited By: |

Updated on: Jan 04, 2025 | 7:16 PM

Share

ಬೆಂಗಳೂರು, ಜನವರಿ 04: ಹೆಂಡತಿಯ ಕಾಟಕ್ಕೆ ಬೇಸತ್ತು ಸಾಫ್ಟ್‌ವೇರ್‌ ಇಂಜಿನಿಯರ್​ ಅತುಲ್ ಸುಭಾಷ್ (Atul Subhash) ಆತ್ಮಹತ್ಯೆ ದೇಶಾದ್ಯಂತ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಸದ್ಯ ಈ ಪ್ರಕರಣದಲ್ಲಿ ಬಂಧನಕೊಳ್ಳಗಾಗಿದ್ದ ಅತುಲ್ ಪತ್ನಿ ನಿಖಿತಾ ಸಿಂಘಾನಿಯಾ, ಅತ್ತೆ ನಿಶಾ ಸಿಂಘಾನಿಯಾ ಮತ್ತು ಬಾಮೈದ ಅನುರಾಗ್ ಸಿಂಘಾನಿಯಾಗೆ ಜಾಮೀನು ಮಂಜೂರು ಮಾಡಿ ಬೆಂಗಳೂರಿನ 29ನೇ ಸಿಸಿಹೆಚ್‌ ನ್ಯಾಯಾಲಯ ಶನಿವಾರ ಆದೇಶ ಹೊರಡಿಸಿದೆ.

ಹೆಂಡತಿಯ ಕಾಟಕ್ಕೆ ಬೇಸತ್ತಿದ್ದ ಅತುಲ್ ಸುಭಾಷ್, 40 ಪುಟಗಳ ಡೆತ್‌ ನೋಟ್‌ ಮತ್ತು 6 ನಿಮಿಷ 50 ಸೆಕೆಂಡ್‌ ವಿಡಿಯೋ ಮಾಡಿಟ್ಟು, ಆತ್ಮಹತ್ಯೆ ಮಾಡಿಕೊಂಡಿದ್ದರು. ಅತುಲ್, ತನ್ನ ಪತ್ನಿ ನಿಖಿತಾ ಸಿಂಘಾನಿಯಾ 9 ಕೇಸ್ ದಾಖಲಿಸಿದ್ದರು. ಕೊಲೆಗೆ ಯತ್ನ, ಅಸಹಜ ಲೈಂಗಿಕ ಕ್ರಿಯೆ, ಕಿರುಕುಳ ಕೊಡ್ತಿದ್ದ ಅಂತಾ ಕೇಸ್ ಹಾಕಿದ್ದರು. ಇದ್ರಿಂದ ಉತ್ತರ ಪ್ರದೇಶ ಕೋರ್ಟ್​ಗೆ ಅಲೆದಾಡಿ ಅಲೆದಾಡಿ ಅತುಲ್ ಹೈರಾಣಾಗಿ ಹೋಗಿದ್ದೆ ಎಂದು ಹೇಳಿಕೊಂಡಿದ್ದರು.

ಇದನ್ನೂ ಓದಿ: ಅತುಲ್ ಸುಭಾಷ್ ಪ್ರಕರಣ: ಆರೋಪಿ ಜಾಮೀನು ಪಡೆಯಲು ಮಗುವನ್ನು ಬಳಸಬಾರದು, ಟೆಕ್ಕಿ ಪರ ವಕೀಲ ಆಗ್ರಹ

ಅತುಲ್ ಸಹೋದರ ವಿಕಾಸ್ ನೀಡಿದ ದೂರಿನ ಅನ್ವಯ ಅತುಲ್ ಪತ್ನಿ ನಿಖಿತಾ ಸೇರಿದಂತೆ ನಾಲ್ವರ ವಿರುದ್ಧ ಎಫ್​ಐಆರ್ ದಾಖಲಾಗಿತ್ತು. ಎಫ್​ಐಆರ್​ನಲ್ಲಿ, ಅತುಲ್ ಸುಭಾಷ್ ವಿರುದ್ಧ ಆರೋಪಿಗಳು ಸುಳ್ಳು ಕೇಸ್ ಹಾಕಿದ್ದರು. ಪ್ರಕರಣ ಇತ್ಯರ್ಥಕ್ಕಾಗಿ 3 ಕೋಟಿ ರೂ. ಹಣಕ್ಕಾಗಿ ಡಿಮ್ಯಾಂಡ್ ಇಟ್ಟಿದ್ದರು. ಅಷ್ಟೇ ಅಲ್ಲ ಮಗನ ಭೇಟಿಗೆ ಅವಕಾಶ ನೀಡಲು 30 ಲಕ್ಷ ರೂ ಹಣಕ್ಕೆ ಬೇಡಿಕೆ ಇಟ್ಟಿದ್ದರು ಅಂತಾ ಉಲ್ಲೇಖಿಸಲಾಗಿತ್ತು.

ಈ ಕೇಸ್‌ನ ತನಿಖೆ ಕೈಗೊಂಡಿದ್ದ ಬೆಂಗಳೂರಿನ ಮಾರತ್‌ಹಳ್ಳಿ ಪೊಲೀಸರು ಕೊನೆಗೂ ಆರೋಪಿಗಳ ಹೆಡೆಮುರಿ ಕಟ್ಟಿದ್ದರು. ಅತುಲ್‌ನ ಅತ್ತೆ ನಿಶಾ ಸಿಂಘಾನಿಯಾ ಮತ್ತು ಬಾಮೈದ ಅನುರಾಗ್ ಸಿಂಘಾನಿಯಾನನ್ನು ಉತ್ತರ ಪ್ರದೇಶದಲ್ಲಿ ಬಂಧಿಸಿದ್ದರೆ, ಪತ್ನಿ ನಿಖಿತಾ ಶಿಂಘಾನಿಯಾಳನ್ನು ಹರಿಯಾಣದ ಗುರುಗ್ರಾಮದಲ್ಲಿ ಲಾಕ್ ಮಾಡಿದ್ದರು.

ಇದನ್ನೂ ಓದಿ: ಅತುಲ್ ಸಂತ್ರಸ್ತ ಅಲ್ಲ, ನಾನೇ ನಿಜವಾದ ಸಂತ್ರಸ್ತೆ: ಪೊಲೀಸರ ಮುಂದೆ ಸ್ಫೋಟಕ ಅಂಶ ಬಿಚ್ಚಿಟ್ಟ ಪತ್ನಿ

ಮೊಬೈಲ್ ಸ್ವಿಚ್‌ ಆಫ್‌ ಮಾಡಿದ್ದ ಆರೋಪಿಗಳು ಸ್ನೇಹಿತರ ನೆರವು ಪಡೆದು ಪದೇಪದೆ ವಾಸ್ತವ್ಯ ಬದಲಿಸುತ್ತಿದ್ದರು. ಆದರೆ, ನೆರವಿಗಾಗಿ ಆಗಾಗ್ಗೆ ಸ್ನೇಹಿತರಿಗೆ ಕರೆ ಮಾಡುತ್ತಿದ್ದರು. ಈ ಸುಳಿವಿನ ಜಾಡು ಹಿಡಿದು ಹೊರಟ ಪೊಲೀಸರು ಮೊಬೈಲ್‌ ಟವರ್‌ ಲೊಕೇಷನ್‌ ಆಧರಿಸಿ ಆರೋಪಿಗಳನ್ನು ಖೆಡ್ಡಾಕ್ಕೆ ಕೆಡವಿದ್ದರು. ಬಳಿಕ ಮೂವರನ್ನು ಬೆಂಗಳೂರಿಗೆ ಕರೆತಂದು ಕೋರ್ಟ್‌ಗೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿತ್ತು. ನಂತರ ಮೂವರು ಪರಪ್ಪನ ಅಗ್ರಹಾರ ಜೈಲು ಸೇರಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?