AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಐಟಿ ಜಪ್ತಿ ಮಾಡಿದ BMW, ರೇಂಜ್ ರೋವರ್, ಜಾಗ್ವರ್ ಸೇರಿದಂತೆ ಐಷಾರಾಮಿ ಕಾರುಗಳ ಹರಾಜು

ವಂಚನೆ ಪ್ರಕರಣ ಸಂಬಂಧ ಸಕೇಶ್ ಚಂದ್ರಶೇಖರ್ ಅವರನ್ನು ಐಟಿ ಅಧಿಕಾರಿಗಳು ಬಂಧಿಸಿದ್ದರು. ಇವರಿಂದ ಬಿಎಂಡಬ್ಲ್ಯು, ರೇಂಜ್ ರೋವರ್, ಜಾಗ್ವಾರ್ ಸೇರಿದಂತೆ ಹವಲು ಐಷಾರಾಮಿ ಕಾರುಗಳನ್ನು ವಶಕ್ಕೆ ಪಡೆಯಲಾಗಿತ್ತು. ಸದ್ಯ, ಈ ಎಲ್ಲಾ ಕಾರುಗಳನ್ನು ಐಟಿ ಅಧಿಕಾರಿಗಳು ಹರಾಜು ಹಾಕುತ್ತಿದ್ದಾರೆ.

ಬೆಂಗಳೂರು: ಐಟಿ ಜಪ್ತಿ ಮಾಡಿದ BMW, ರೇಂಜ್ ರೋವರ್, ಜಾಗ್ವರ್ ಸೇರಿದಂತೆ ಐಷಾರಾಮಿ ಕಾರುಗಳ ಹರಾಜು
ಐಟಿ ಜಪ್ತಿ ಮಾಡಿದ BMW, ರೇಂಜ್ ರೋವರ್, ಜಾಗ್ವರ್ ಸೇರಿದಂತೆ ಐಷಾರಾಮಿ ಕಾರುಗಳ ಹರಾಜು (ಸಾಂದರ್ಭಿಕ ಚಿತ್ರ) Image Credit source: Reuters
Jagadisha B
| Edited By: |

Updated on: Nov 23, 2023 | 9:31 AM

Share

ಬೆಂಗಳೂರು, ನ.23: ನೂರಾರು ಕೋಟಿ ತೆರಿಗೆ ವಂಚನೆ ಪ್ರಕರಣ ಸಂಬಂಧ ಐಟಿ (Income Tax) ಅಧಿಕಾರಿಗಳು ಜಪ್ತಿ ಮಾಡಿದ್ದ ಸಕೇಶ್ ಚಂದ್ರಶೇಖರ್ ಎಂಬವರಿಗೆ ಸೇರಿದ ಬಿಎಂಡಬ್ಲ್ಯು, ಜಾಗ್ವಾರ್, ರೇಂಜ್ ರೋವರ್ ಸೇರಿದಂತೆ 10ಕ್ಕೂ ಹೆಚ್ಚು ಐಷಾರಾಮಿ ಕಾರುಗಳನ್ನು ಹರಾಜಿಗೆ ಇಡಲಾಗುತ್ತಿದೆ. ಈ ಹರಾಜು ಪ್ರಕ್ರಿಯೆ ನವೆಂಬರ್ 28 ರಂದು ನಡೆಯಲಿದೆ.

ಹಲವು ಸಂಸ್ಥೆಗಳಿಗೆ ಕಟ್ಟಬೇಕಿದ್ದ 308 ಕೋಟಿ ರೂಪಾಯಿ ತೆರಿಗೆಯನ್ನು ಬಾಕಿ ಉಳಿಸಿಕೊಂಡಿರುವ ಸುಕೇಶ್ ಚಂದ್ರಶೇಖರ್ ಅವರ ಮನೆ ಮೇಲೆ ಐಟಿ ದಾಳಿ ನಡೆದಿತ್ತು. ದಾಳಿ ವೇಳೆ ಸುಕೇಶ್​​ ಅವರನ್ನು ಬಂಧಿಸಿದ್ದ ಐಟಿ ಅಧಿಕಾರಿಗಳು, ಹತ್ತಕ್ಕೂ ಹೆಚ್ಚು ಐಷಾರಾಮಿ ಕಾರುಗಳನ್ನು ಜಪ್ತಿ ಮಾಡಿದ್ದರು.

ಇದನ್ನೂ ಓದಿ: IT Raids In Bengaluru: ಲೋಕಾಯುಕ್ತ ಬೆನ್ನಲ್ಲೇ ಬೆಂಗಳೂರಿನಲ್ಲಿ ಐಟಿ ದಾಳಿ

ಸದ್ಯ ಆರೋಪಿ ಸುಕೇಶ್ ಚಂದ್ರಶೇಖರ್ ದೆಹಲಿ ಕಾರಾಗೃಹದಲ್ಲಿದ್ದಾರೆ. ತೆರಿಗೆ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆ ವಶಕ್ಕೆ ಪಡೆದಿರುವ BMW, ರೇಂಜ್ ರೋವರ್, ಜಾಗ್ವಾರ್, ಪೋರ್ಷೆ, ರೋಲ್ಸ್ ರಾಯ್ಸ್, ಬೆಂಟ್ಲಿ, ಲ್ಯಾಂಬೋರ್ಗಿನಿ, ಡುಕಾಟಿ ಸೇರಿದಂತೆ 12 ಐಷಾರಾಮಿ ಕಾರುಗಳನ್ನು 28 ರಂದು ಹರಾಜು ಹಾಕಲು ಐಟಿ ಅಧಿಕಾರಿಗಳು ಮುಂದಾಗಿದ್ದಾರೆ.

ಕೇಂದ್ರ ಕಾನೂನು ಸಚಿವಾಲಯದ ಅಧಿಕಾರಿ ಅಂತ ಹೇಳಿಕೊಂಡು ವಿವಿಧ ಸಂಸ್ಥೆಗಳಿಗೆ ಸುಕೇಶ್ ನೂರಾರು ಕೋಟಿ ರೂ. ತೆರಿಗೆ ವಂಚನೆ ಎಸಗಿದ್ದರು. ಔಷಧಾ ಕಂಪನಿಯೊಂದರ ಪ್ರವರ್ತಕರಿಗೆ ಜಾಮೀನು ಕೊಡಿಸುವುದಾಗಿ ವಂಚನೆ ಎಸಗಿದ್ದರು.

ಸುಕೇಶ್ ವಿರುದ್ಧ ಐಟಿ ಮಾತ್ರವಲ್ಲದೆ, ಇ.ಡಿ. (ಜಾರಿ ನಿರ್ದೇಶನಾಲಯ) ಕೂಡ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. ಸದ್ಯ ಇವರ ಆಸ್ತಿ ಪಾಸ್ತಿ ಜೊತೆಗೆ ಐಷಾರಾಮಿ ಕಾರುಗಳನ್ನು ಸೀಜ್ ಮಾಡಿದ್ದ ಐಟಿ ಅಧಿಕಾರಿಗಳು, 12 ಐಷಾರಾಮಿ ಕಾರುಗಳನ್ನು ಹರಾಜು ಮಾಡಿ ತೆರಿಗೆ ವಸೂಲಿಗೆ ಮುಂದಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು