AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Power Cut: ಬೆಂಗಳೂರಿನ ಬಹುತೇಕ ಕಡೆ ಇಂದು ಸಂಜೆವರೆಗೂ ಪವರ್​ ಕಟ್​

ಕರ್ನಾಟಕ ವಿದ್ಯುತ್​ ಪ್ರಸರಣ ನಿಗಮ ನಿಯಮಿತ ದುರಸ್ತಿ ಕಾಮಗಾರಿ ಕೈಗೊಳ್ಳುವುದರಿಂದ ಬೆಂಗಳೂರಿನ ಹಲವು ಏರಿಯಾಗಳಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೂ ಕರೆಂಟ್ ಇರಲ್ಲ ಎಂದು ಬೆಂಗಳೂರು ವಿದ್ಯುತ್​ ಸರಬರಾಜು ನಿಗಮ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

Power Cut: ಬೆಂಗಳೂರಿನ ಬಹುತೇಕ ಕಡೆ ಇಂದು ಸಂಜೆವರೆಗೂ ಪವರ್​ ಕಟ್​
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Aug 19, 2024 | 8:08 AM

Share

ಬೆಂಗಳೂರು, ಆಗಸ್ಟ್​ 19: ನಗರದ ಹಲವೆಡೆ ಸೋಮವಾರ ವಿದ್ಯುತ್​ ವ್ಯತ್ಯಯವಾಗಲಿದೆ (Power Cut). ಕರ್ನಾಟಕ ವಿದ್ಯುತ್​ ಪ್ರಸರಣ ನಿಗಮ ನಿಯಮಿತ (KPTCL) ದುರಸ್ತಿ ಕಾಮಗಾರಿ ಕೈಗೊಳ್ಳುವುದರಿಂದ ಬೆಂಗಳೂರಿನ ಹಲವು ಏರಿಯಾಗಳಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೂ ಕರೆಂಟ್ ಇರಲ್ಲ ಎಂದು ಬೆಂಗಳೂರು ವಿದ್ಯುತ್​ ಸರಬರಾಜು ನಿಗಮ (BESCOM) ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಯಾವ ಯಾವ ಏರಿಯಾಗಳಲ್ಲಿ ಮತ್ತು ಯಾವ ಸಮಯದಲ್ಲಿ ವಿದ್ಯುತ್​ ಇರಲ್ಲ ಎಂಬ ಮಾಹಿತಿ ಈ ಕೆಳಗಿನಂತಿದೆ.

ವಿದ್ಯುತ್​ ಕಟ್​ ಆಗುವ ಪ್ರದೇಶಗಳು

HSR ಲೇಔಟ್ ಮತ್ತು ಕೋರಮಂಗಲದ Bwssb Stp, ಜಕ್ಕಸಂದ್ರ, ಹೆಚ್​ಎಸ್​ಆರ್​ 5ನೇ ವಲಯದ ಟೀಚರ್ಸ್​​ ಕಾಲೋನಿ, ವೆಂಕಟಾಪುರದ ಭಾಗ, ಗ್ರೀನೇಜ್ ಅಪಾರ್ಟ್‌ಮೆಂಟ್, ಕೋರಮಂಗಲ ಎಕ್ಸಟೆನ್ಷನ್​ನಲ್ಲಿ ಇಂದು ಬೆಳಗ್ಗೆ 10:00 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್​ ಕಡಿತವಾಗಲಿದೆ.

ಹೆಬ್ಬಾಳ ಮತ್ತು ಜಾಲಹಳ್ಳಿಯ ವಿದ್ಯಾರಣ್ಯಪುರ, ಯಲಹಂಕ ನ್ಯೂ ಓಲ್ಡ್ ಟೌನ್, ಕೆಎಮ್​ಎಫ್​, ಮಾರುತಿ ನಗರ, ಎಂ.ಎಸ್.ಪಾಳ್ಯ, ಎಲ್​&ಟಿ, ಎನ್​ಸಿಬಿಎಸ್​, ಬ್ಯಾಟರಾಯನಪುರ, ಪುರವಂಕರ ಬ್ಲಾಕ್-1,2,3 ಮತ್ತು 4, ಆರ್​ಎಮ್​ಝೆಡ್​​, ಜಿಕೆವಿಕೆ, ಜುಡಿಕಲ್ ಲೇಔಟ್​​ನಲ್ಲಿ ಬೆಳಗ್ಗೆ 10:30 ರಿಂದ ಸಂಜೆ 6:00 ಗಂಟೆವರೆಗೆ ವಿದ್ಯುತ್​ ವ್ಯತ್ಯಯವಾಗಲಿದೆ.

ಇದನ್ನೂ ಓದಿ: ಮೂರು ತಿಂಗಳಲ್ಲಿ ಬರೋಬ್ಬರಿ 12 ಲಕ್ಷ ರೂ ವಿದ್ಯುತ್ ಬಿಲ್: ದಂಗಾದ ಮನೆ ಮಾಲೀಕ

ಕೋರಮಂಗಲದ ರಾಜಶ್ರೀ ಲೇಔಟ್, ಗಾಂಧಿನಗರ, ಲಕ್ಷ್ಮಿ ಲೇಔಟ್, ಸಿಲ್ವರ್ ಸ್ಪ್ರಿಂಗ್ ಲೇಔಟ್​​, ಭುವನೇಶ್ವರಿ ಲೇಔಟ್, ಮುನ್ನೇಕೊಳಲ್​ದಲ್ಲಿ ಬೆಳಗ್ಗೆ 11 ರಿಂದ ಸಂಜೆ 5ರವರೆಗೆ ವಿದ್ಯುತ್​ ಕಡಿತವಾಗಲಿದೆ. ​ಇನ್ನು​ ಜಿಎಂ ಪಾಳ್ಯ ಪೂರ್ಣ ಪ್ರದೇಶದಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ಕರೆಂಟ್​ ಕಟ್​ ಆಗಲಿದೆ.

ಹೆಚ್ಚಿನ ಮಾಹಿತಿ ಅಥವಾ ದೂರುಗಳಿಗೆ ಬೆಸ್ಕಾಂ ಸಹಾಯವಾಣಿ 1912 ಅಥವಾ http://bescom.karnataka.gov.in ಸಂಪರ್ಕಿಸಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:08 am, Mon, 19 August 24

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ