AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Power Cut: ಬೆಂಗಳೂರಿನ ಬಹುತೇಕ ಕಡೆ ಇಂದು ಸಂಜೆವರೆಗೂ ಪವರ್​ ಕಟ್​

ಕರ್ನಾಟಕ ವಿದ್ಯುತ್​ ಪ್ರಸರಣ ನಿಗಮ ನಿಯಮಿತ ದುರಸ್ತಿ ಕಾಮಗಾರಿ ಕೈಗೊಳ್ಳುವುದರಿಂದ ಬೆಂಗಳೂರಿನ ಹಲವು ಏರಿಯಾಗಳಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೂ ಕರೆಂಟ್ ಇರಲ್ಲ ಎಂದು ಬೆಂಗಳೂರು ವಿದ್ಯುತ್​ ಸರಬರಾಜು ನಿಗಮ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

Power Cut: ಬೆಂಗಳೂರಿನ ಬಹುತೇಕ ಕಡೆ ಇಂದು ಸಂಜೆವರೆಗೂ ಪವರ್​ ಕಟ್​
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on:Aug 19, 2024 | 8:08 AM

Share

ಬೆಂಗಳೂರು, ಆಗಸ್ಟ್​ 19: ನಗರದ ಹಲವೆಡೆ ಸೋಮವಾರ ವಿದ್ಯುತ್​ ವ್ಯತ್ಯಯವಾಗಲಿದೆ (Power Cut). ಕರ್ನಾಟಕ ವಿದ್ಯುತ್​ ಪ್ರಸರಣ ನಿಗಮ ನಿಯಮಿತ (KPTCL) ದುರಸ್ತಿ ಕಾಮಗಾರಿ ಕೈಗೊಳ್ಳುವುದರಿಂದ ಬೆಂಗಳೂರಿನ ಹಲವು ಏರಿಯಾಗಳಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೂ ಕರೆಂಟ್ ಇರಲ್ಲ ಎಂದು ಬೆಂಗಳೂರು ವಿದ್ಯುತ್​ ಸರಬರಾಜು ನಿಗಮ (BESCOM) ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಯಾವ ಯಾವ ಏರಿಯಾಗಳಲ್ಲಿ ಮತ್ತು ಯಾವ ಸಮಯದಲ್ಲಿ ವಿದ್ಯುತ್​ ಇರಲ್ಲ ಎಂಬ ಮಾಹಿತಿ ಈ ಕೆಳಗಿನಂತಿದೆ.

ವಿದ್ಯುತ್​ ಕಟ್​ ಆಗುವ ಪ್ರದೇಶಗಳು

HSR ಲೇಔಟ್ ಮತ್ತು ಕೋರಮಂಗಲದ Bwssb Stp, ಜಕ್ಕಸಂದ್ರ, ಹೆಚ್​ಎಸ್​ಆರ್​ 5ನೇ ವಲಯದ ಟೀಚರ್ಸ್​​ ಕಾಲೋನಿ, ವೆಂಕಟಾಪುರದ ಭಾಗ, ಗ್ರೀನೇಜ್ ಅಪಾರ್ಟ್‌ಮೆಂಟ್, ಕೋರಮಂಗಲ ಎಕ್ಸಟೆನ್ಷನ್​ನಲ್ಲಿ ಇಂದು ಬೆಳಗ್ಗೆ 10:00 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್​ ಕಡಿತವಾಗಲಿದೆ.

ಹೆಬ್ಬಾಳ ಮತ್ತು ಜಾಲಹಳ್ಳಿಯ ವಿದ್ಯಾರಣ್ಯಪುರ, ಯಲಹಂಕ ನ್ಯೂ ಓಲ್ಡ್ ಟೌನ್, ಕೆಎಮ್​ಎಫ್​, ಮಾರುತಿ ನಗರ, ಎಂ.ಎಸ್.ಪಾಳ್ಯ, ಎಲ್​&ಟಿ, ಎನ್​ಸಿಬಿಎಸ್​, ಬ್ಯಾಟರಾಯನಪುರ, ಪುರವಂಕರ ಬ್ಲಾಕ್-1,2,3 ಮತ್ತು 4, ಆರ್​ಎಮ್​ಝೆಡ್​​, ಜಿಕೆವಿಕೆ, ಜುಡಿಕಲ್ ಲೇಔಟ್​​ನಲ್ಲಿ ಬೆಳಗ್ಗೆ 10:30 ರಿಂದ ಸಂಜೆ 6:00 ಗಂಟೆವರೆಗೆ ವಿದ್ಯುತ್​ ವ್ಯತ್ಯಯವಾಗಲಿದೆ.

ಇದನ್ನೂ ಓದಿ: ಮೂರು ತಿಂಗಳಲ್ಲಿ ಬರೋಬ್ಬರಿ 12 ಲಕ್ಷ ರೂ ವಿದ್ಯುತ್ ಬಿಲ್: ದಂಗಾದ ಮನೆ ಮಾಲೀಕ

ಕೋರಮಂಗಲದ ರಾಜಶ್ರೀ ಲೇಔಟ್, ಗಾಂಧಿನಗರ, ಲಕ್ಷ್ಮಿ ಲೇಔಟ್, ಸಿಲ್ವರ್ ಸ್ಪ್ರಿಂಗ್ ಲೇಔಟ್​​, ಭುವನೇಶ್ವರಿ ಲೇಔಟ್, ಮುನ್ನೇಕೊಳಲ್​ದಲ್ಲಿ ಬೆಳಗ್ಗೆ 11 ರಿಂದ ಸಂಜೆ 5ರವರೆಗೆ ವಿದ್ಯುತ್​ ಕಡಿತವಾಗಲಿದೆ. ​ಇನ್ನು​ ಜಿಎಂ ಪಾಳ್ಯ ಪೂರ್ಣ ಪ್ರದೇಶದಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ಕರೆಂಟ್​ ಕಟ್​ ಆಗಲಿದೆ.

ಹೆಚ್ಚಿನ ಮಾಹಿತಿ ಅಥವಾ ದೂರುಗಳಿಗೆ ಬೆಸ್ಕಾಂ ಸಹಾಯವಾಣಿ 1912 ಅಥವಾ http://bescom.karnataka.gov.in ಸಂಪರ್ಕಿಸಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:08 am, Mon, 19 August 24

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ