AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾ ಪ್ರಜೆಯ ಅಪಹರಣ: ಸಿನಿಮೀಯ ಶೈಲಿಯಲ್ಲಿ ಆರೋಪಿಗಳನ್ನು ಬಂಧಿಸಿದ ಬೊಮ್ಮನಹಳ್ಳಿ ಪೊಲೀಸರು

ಆಸ್ಟ್ರೇಲಿಯಾ ಪ್ರಜೆ ಅಲೋಕ್ ರಾಣಾ ಎಂಬವರನ್ನು ದುಷ್ಕರ್ಮಿಗಳ ಅಪಹರಿಸಿದ್ದರು. ಮನೆಯೊಂದರಲ್ಲಿ ಕೂಡಿಹಾಕಿ ಹಲ್ಲೆ ನಡೆಸಿ ಅಲೋಕ್ ರಾಣಾ ಬ್ಯಾಂಕ್ ಖಾತೆಯಿಂದ 78 ಸಾವಿರ ಹಣ ವರ್ಗಾವಣೆ ಮಾಡಿದ್ದರು. ಬಳಿಕ ಅಲೋಕ್ ಅಣ್ಣನ ಖಾತೆಯಿಂದ 40 ಸಾವಿರ ವಸೂಲಿ ಮಾಡಿದ್ದರು. ಈ ಪ್ರಕರಣ ಸಂಬಂಧ ಬೆಂಗಳೂರಿನ ಬೊಮ್ಮನಹಳ್ಳಿ ಠಾಣಾ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಚೇಸ್ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.

ಆಸ್ಟ್ರೇಲಿಯಾ ಪ್ರಜೆಯ ಅಪಹರಣ: ಸಿನಿಮೀಯ ಶೈಲಿಯಲ್ಲಿ ಆರೋಪಿಗಳನ್ನು ಬಂಧಿಸಿದ ಬೊಮ್ಮನಹಳ್ಳಿ ಪೊಲೀಸರು
ಆಸ್ಟ್ರೇಲಿಯಾ ಪ್ರಜೆಯ ಅಪಹರಣ: ಸಿನಿಮೀಯ ಶೈಲಿಯಲ್ಲಿ ಆರೋಪಿಗಳನ್ನು ಬಂಧಿಸಿದ ಬೊಮ್ಮನಹಳ್ಳಿ ಪೊಲೀಸರು (ಸಾಂದರ್ಭಿಕ ಚಿತ್ರ)
Shivaprasad B
| Edited By: |

Updated on: Feb 25, 2024 | 9:30 AM

Share

ಬೆಂಗಳೂರು, ಫೆ.25: ಆಸ್ಟ್ರೇಲಿಯಾ ಪ್ರಜೆಯನ್ನು ಅಪಹರಣ (Kidnap) ಮಾಡಿ ಹಲ್ಲೆ ನಡೆಸಿ ಡಕಾಯಿತಿ ಮಾಡಿದ್ದ ಪ್ರಕರಣ ಸಂಬಂಧ ಬೆಂಗಳೂರು (Bengaluru) ನಗರದ ಬೊಮ್ಮನಹಳ್ಳಿ ಠಾಣಾ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಚೇಸ್ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ. ಕಿಡ್ನಾಪ್ ಪ್ರಕರಣದ ಮಾಸ್ಟರ್ ಮೈಂಡ್ ಮೋನಿಶ್​​​, ಲೋಕೇಶ್​​​, ಕಿಶೋರ್​​, ರವಿ, ದಿಲೀಪ್​​​​​​​​, ಸತೀಶ್​​​​ ಬಂಧತ ಆರೋಪಿಗಳಾಗಿದ್ದಾರೆ. ಮೋನಿಶ್ ಟ್ಯಾಟೋ ಹಾಕೋ ಕೆಲಸ ಮಾಡುತ್ತಿದ್ದರು. ಇತರ ಆರೋಪಿಗಳು ಬಟ್ಟೆ ವ್ಯಾಪಾರ, ತಳ್ಳುವ ಗಾಡಿಯಲ್ಲಿ ವ್ಯಾಪಾರ ಮಾಡುತ್ತಿದ್ದರು.

ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿರುವ ತನ್ನ ಅಣ್ಣ ಅಮಿತ್​​ ರಾಣಾನನ್ನು ನೋಡಲು ಆಸ್ಟ್ರೇಲಿಯಾ ಪ್ರಜೆಯಾಗಿರುವ ಅಲೋಕ್ ರಾಣಾ ಬೆಂಗಳೂರಿಗೆ ಆಗಮಿಸಿದ್ದ. ಡ್ರಗ್ಸ್​​ಗೆ ಅಡಿಕ್ಟ್ ಆಗಿದ್ದ ಅಲೋಕ್​ ಆರೋಪಿ ಮೊನೀಶ್ ಜೊತೆ​ ಸಂಪರ್ಕ ಹೊಂದಿದ್ದನು. ಡಾರ್ಕ್​ ವೆಬ್​ ಮೂಲಕ ಮೊನೀಶ್ ಬಳಿ ಡಗ್ಸ್​​ ಖರೀದಿಸುತ್ತಿದ್ದನು. ಮೋನಿಶ್​ನಿಂದ ಐದು ಬಾರಿ ಗಾಂಜಾ ಖರೀದಿಸಿದ್ದ.

ಇದನ್ನೂ ಓದಿ: Kidnapping TV Anchor: ಮದುವೆಯಾಗಲು ಖ್ಯಾತ ನಿರೂಪಕನನ್ನೇ ಕಿಡ್ನಾಪ್​ ಮಾಡಿದ ಯುವತಿ

ಇದರಿಂದ ಅಲೋಕ್ ಬಳಿ ಹೆಚ್ಚು ಹಣ ಇರಬಹುದೆಂದು ಭಾವಿಸಿದ ಮೋಹನ್ ತನ್ನ ಸಹಚರರೊಂದಿಗೆ ಸೇರಿಕೊಂಡು ಅಲೋಕ್​ನನ್ನು ಕಿಡ್ನಾಪ್ ಮಾಡಿ ಮನೆಯೊಂದರಲ್ಲಿ ಕೂಡಿಹಾಕಿ ಹಲ್ಲೆ ನಡೆಸಿ ಅಲೋಕ್ ರಾಣಾ ಬ್ಯಾಂಕ್ ಖಾತೆಯಿಂದ 78 ಸಾವಿರ ಹಣ ವರ್ಗಾವಣೆ ಮಾಡಿದ್ದರು. ಬಳಿಕ ಅಲೋಕ್ ಅಣ್ಣ ಅಮಿತ್ ಖಾತೆಯಿಂದ 40 ಸಾವಿರ ವಸೂಲಿ ಮಾಡಿದ್ದರು.

ಬಳಿಕ ಆರೋಪಿಗಳ ಕೈಯಿಂದ ತಪ್ಪಿಸಿಕೊಂಡು ಬಂದು ಅಲೋಕ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಡ್ರಗ್ಸ್​ ವಿಷಯ ಬಹಿರಂಗವಾಗುತ್ತದೆ ಎಂದು ಯಾರಿಗೂ ಹೇಳದೆ ಸುಮ್ಮನಿದ್ದ ಅಲೋಕ್, ಪ್ರಕರಣ ನಡೆದು 15 ದಿನಗಳಾದ ನಂತರ ಪೊಲೀಸ್ ಅಧಿಕಾರಿಯೊಬ್ಬರಿಗೆ ಮಾಹಿತಿ ನೀಡಿದ್ದು, ಈ ಬಗ್ಗೆ ಬೆಂಗಳೂರು ಆಗ್ನೇಯ ಡಿಸಿಪಿ ಬಾಬಾಗೆ ಮಾಹಿತಿ ನೀಡಲಾಗಿದೆ. ಬಳಿಕ ಬೊಮ್ಮನಹಳ್ಳಿ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್