AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಲಾಸ್​ಸ್ಲ್ಯಾಬ್ ಅನ್ಲೋಡ್ ವೇಳೆ ಅವಘಡ: ಆಟೋ ಚಾಲಕ ಶಂಕರ್ ಸಾವು

ಅಮೃತಹಳ್ಳಿಯ ಗೀತಾ ಗ್ಲಾಸ್ ಅಂಡ್ ಹಾರ್ಡವೇರ್ ಮತ್ತು ವಸಂತಪುರದ ಗಣೇಶ್ ಗ್ಲಾಸ್ ಅಂಡ್ ಫ್ಲೈವುಡ್ ಮಾಲೀಕರ ನಿರ್ಲಕ್ಷ್ಯದಿಂದಲೇ ಸಾವು ಸಂಭವಿಸಿದೆ ಎಂದು ಮೃತ ಶಂಕರ್ ಪತ್ನಿ ಮಾಲಾ ಎಫ್ಐಆರ್ ದಾಖಲಿಸಿದ್ದಾರೆ.

ಗ್ಲಾಸ್​ಸ್ಲ್ಯಾಬ್ ಅನ್ಲೋಡ್ ವೇಳೆ ಅವಘಡ: ಆಟೋ ಚಾಲಕ ಶಂಕರ್ ಸಾವು
ಸಾಂಕೇತಿಕ ಚಿತ್ರ
TV9 Web
| Edited By: |

Updated on:Aug 03, 2022 | 10:52 PM

Share

ಬೆಂಗಳೂರು: ಬೆಂಗಳೂರಿನಲ್ಲಿ ಗ್ಲಾಸ್​ಸ್ಲ್ಯಾಬ್ ಗಳು ಅನ್ಲೋಡ್ ಮಾಡುವಾಗ ಅವಘಡ ಸಂಭವಿಸಿ ಆಟೋ ಚಾಲಕ ಮೃತಪಟ್ಟ ಘಟನೆ ಇಂದು ಸಂಜೆ ಸುಬ್ರಮಣ್ಯಪುರ ಠಾಣಾ ವ್ಯಾಪ್ತಿಯ ವಸಂತಪುರ ರಸ್ತೆಯ ಬಿಕಾಸಿಪುರದಲ್ಲಿ ನಡೆದಿದೆ. ಅಮೃತಹಳ್ಳಿ ನಿವಾಸಿ ಲಗೇಜ್ ಆಟೋ ಚಾಲಕ ಶಂಕರ್(34) ಮೃತ ದುರ್ದೈವಿ.

ಗ್ಲಾಸ್​ಸ್ಲ್ಯಾಬ್ ಗಳು ಅನ್ಲೋಡ್ ಮಾಡುವ ವೇಳೆ ಗ್ಲಾಸ್​ಸ್ಲ್ಯಾಬ್ ಗಳು ಏಕಾಏಕಿ ಮುರಿದು ಬಿದ್ದಿವೆ. ಗ್ಲಾಸ್ ಸ್ಲ್ಯಾಬ್ ಗಳಿಗೆ ಸಿಕ್ಕಿ ಆಟೋ ಚಾಲಕ ಉಸಿರಾಡಲಾಗದೆ ನರಳಾಡಿ ಮೃತಪಟ್ಟಿದ್ದಾರೆ. ಚಾಲಕ ಶಂಕರ್ ನರಳಾಡ್ತಿರುವ ವಿಡಿಯೋ ಲಭ್ಯವಾಗಿದೆ. ಘಟನೆ ನಡೆದಾಗ ಸ್ಥಳದಲ್ಲಿ ಇದ್ದ ಸ್ಥಳೀಯರು ರಕ್ಷಿಸಲು ಯತ್ನಿಸಿದ್ದು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಆಟೋ ಚಾಲಕ ಶಂಕರ್ ಕಿಮ್ಸ್ ನಲ್ಲಿ ಕೊನೆಯುಸಿರೆಳೆದಿದ್ದಾರೆ.

ಅಮೃತಹಳ್ಳಿಯ ಗೀತಾ ಗ್ಲಾಸ್ ಅಂಡ್ ಹಾರ್ಡವೇರ್ ಮತ್ತು ವಸಂತಪುರದ ಗಣೇಶ್ ಗ್ಲಾಸ್ ಅಂಡ್ ಫ್ಲೈವುಡ್ ಮಾಲೀಕರ ನಿರ್ಲಕ್ಷ್ಯದಿಂದಲೇ ಸಾವು ಸಂಭವಿಸಿದೆ ಎಂದು ಮೃತ ಶಂಕರ್ ಪತ್ನಿ ಮಾಲಾ ಎಫ್ಐಆರ್ ದಾಖಲಿಸಿದ್ದಾರೆ.

ಬಾರ್​​ನಲ್ಲಿ ಬಿಲ್ ಕೊಡುವ ವಿಚಾರಕ್ಕೆ ಗಲಾಟೆ; ಓರ್ವನ ಕೊಲೆ

ಬಾರ್​​ನಲ್ಲಿ ಬಿಲ್ ಕೊಡುವ ವಿಚಾರಕ್ಕೆ ಗಲಾಟೆ ನಡೆದಿದ್ದು, ಮಧ್ಯಸ್ಥಿಕೆ ವಹಿಸಲು ಬಂದಿದ್ದ ವ್ಯಕ್ತಿಗೆ ಚಾಕು ಇರಿಯಲಾಗಿದೆ. ಪ್ರಕಾಶ್ ಎಂಬಾತನಿಗೆ ಚಾಕು ಇರಿದಿದ್ದು, ಪ್ರಕಾಶ್ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಬಾರ್​​ನಲ್ಲಿ ಬಿಲ್ ಕೊಡುವ ವಿಚಾರಕ್ಕೆ ಮಂಜುನಾಥ್ ಗಲಾಟೆ ಮಾಡಿಕೊಂಡಿದ್ದನು. ಈ ವೇಳೆ ಅಲ್ಲೇ ಇದ್ದ ಪ್ರಕಾಶ್ ಮಧ್ಯಪ್ರವೇಶಿಸಿ ಬಿಲ್ ಕೊಡುವಂತೆ ಬುದ್ಧಿ ಮಾತು ಹೇಳಿದ್ದನು.

ನಂತರ ಪ್ರಕಾಶ್ ಬಾರ್​ನಿಂದ ಆಚೆ ಬಂದಿದ್ದಾನೆ. ಈ ವೇಳೆ ಮಂಜುನಾಥ್ ಮತ್ತು ಮತ್ತೊರ್ವ ಚಾಕುವಿನಿಂದ ಹೊಟ್ಟೆಗೆ ಇರಿದು ಪರಾರಿಯಾಗಿದ್ದರು. ಸದ್ಯ ಇಂದಿರಾನಗರ ಪೊಲೀಸರು ಆರೋಪಿ ಮಂಜುನಾಥ್​ನನ್ನು ಬಂಧಿಸಿದ್ದಾರೆ. ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 9:16 pm, Wed, 3 August 22

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ