AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಲಾಸ್​ಸ್ಲ್ಯಾಬ್ ಅನ್ಲೋಡ್ ವೇಳೆ ಅವಘಡ: ಆಟೋ ಚಾಲಕ ಶಂಕರ್ ಸಾವು

ಅಮೃತಹಳ್ಳಿಯ ಗೀತಾ ಗ್ಲಾಸ್ ಅಂಡ್ ಹಾರ್ಡವೇರ್ ಮತ್ತು ವಸಂತಪುರದ ಗಣೇಶ್ ಗ್ಲಾಸ್ ಅಂಡ್ ಫ್ಲೈವುಡ್ ಮಾಲೀಕರ ನಿರ್ಲಕ್ಷ್ಯದಿಂದಲೇ ಸಾವು ಸಂಭವಿಸಿದೆ ಎಂದು ಮೃತ ಶಂಕರ್ ಪತ್ನಿ ಮಾಲಾ ಎಫ್ಐಆರ್ ದಾಖಲಿಸಿದ್ದಾರೆ.

ಗ್ಲಾಸ್​ಸ್ಲ್ಯಾಬ್ ಅನ್ಲೋಡ್ ವೇಳೆ ಅವಘಡ: ಆಟೋ ಚಾಲಕ ಶಂಕರ್ ಸಾವು
ಸಾಂಕೇತಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on:Aug 03, 2022 | 10:52 PM

Share

ಬೆಂಗಳೂರು: ಬೆಂಗಳೂರಿನಲ್ಲಿ ಗ್ಲಾಸ್​ಸ್ಲ್ಯಾಬ್ ಗಳು ಅನ್ಲೋಡ್ ಮಾಡುವಾಗ ಅವಘಡ ಸಂಭವಿಸಿ ಆಟೋ ಚಾಲಕ ಮೃತಪಟ್ಟ ಘಟನೆ ಇಂದು ಸಂಜೆ ಸುಬ್ರಮಣ್ಯಪುರ ಠಾಣಾ ವ್ಯಾಪ್ತಿಯ ವಸಂತಪುರ ರಸ್ತೆಯ ಬಿಕಾಸಿಪುರದಲ್ಲಿ ನಡೆದಿದೆ. ಅಮೃತಹಳ್ಳಿ ನಿವಾಸಿ ಲಗೇಜ್ ಆಟೋ ಚಾಲಕ ಶಂಕರ್(34) ಮೃತ ದುರ್ದೈವಿ.

ಗ್ಲಾಸ್​ಸ್ಲ್ಯಾಬ್ ಗಳು ಅನ್ಲೋಡ್ ಮಾಡುವ ವೇಳೆ ಗ್ಲಾಸ್​ಸ್ಲ್ಯಾಬ್ ಗಳು ಏಕಾಏಕಿ ಮುರಿದು ಬಿದ್ದಿವೆ. ಗ್ಲಾಸ್ ಸ್ಲ್ಯಾಬ್ ಗಳಿಗೆ ಸಿಕ್ಕಿ ಆಟೋ ಚಾಲಕ ಉಸಿರಾಡಲಾಗದೆ ನರಳಾಡಿ ಮೃತಪಟ್ಟಿದ್ದಾರೆ. ಚಾಲಕ ಶಂಕರ್ ನರಳಾಡ್ತಿರುವ ವಿಡಿಯೋ ಲಭ್ಯವಾಗಿದೆ. ಘಟನೆ ನಡೆದಾಗ ಸ್ಥಳದಲ್ಲಿ ಇದ್ದ ಸ್ಥಳೀಯರು ರಕ್ಷಿಸಲು ಯತ್ನಿಸಿದ್ದು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಆಟೋ ಚಾಲಕ ಶಂಕರ್ ಕಿಮ್ಸ್ ನಲ್ಲಿ ಕೊನೆಯುಸಿರೆಳೆದಿದ್ದಾರೆ.

ಅಮೃತಹಳ್ಳಿಯ ಗೀತಾ ಗ್ಲಾಸ್ ಅಂಡ್ ಹಾರ್ಡವೇರ್ ಮತ್ತು ವಸಂತಪುರದ ಗಣೇಶ್ ಗ್ಲಾಸ್ ಅಂಡ್ ಫ್ಲೈವುಡ್ ಮಾಲೀಕರ ನಿರ್ಲಕ್ಷ್ಯದಿಂದಲೇ ಸಾವು ಸಂಭವಿಸಿದೆ ಎಂದು ಮೃತ ಶಂಕರ್ ಪತ್ನಿ ಮಾಲಾ ಎಫ್ಐಆರ್ ದಾಖಲಿಸಿದ್ದಾರೆ.

ಬಾರ್​​ನಲ್ಲಿ ಬಿಲ್ ಕೊಡುವ ವಿಚಾರಕ್ಕೆ ಗಲಾಟೆ; ಓರ್ವನ ಕೊಲೆ

ಬಾರ್​​ನಲ್ಲಿ ಬಿಲ್ ಕೊಡುವ ವಿಚಾರಕ್ಕೆ ಗಲಾಟೆ ನಡೆದಿದ್ದು, ಮಧ್ಯಸ್ಥಿಕೆ ವಹಿಸಲು ಬಂದಿದ್ದ ವ್ಯಕ್ತಿಗೆ ಚಾಕು ಇರಿಯಲಾಗಿದೆ. ಪ್ರಕಾಶ್ ಎಂಬಾತನಿಗೆ ಚಾಕು ಇರಿದಿದ್ದು, ಪ್ರಕಾಶ್ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಬಾರ್​​ನಲ್ಲಿ ಬಿಲ್ ಕೊಡುವ ವಿಚಾರಕ್ಕೆ ಮಂಜುನಾಥ್ ಗಲಾಟೆ ಮಾಡಿಕೊಂಡಿದ್ದನು. ಈ ವೇಳೆ ಅಲ್ಲೇ ಇದ್ದ ಪ್ರಕಾಶ್ ಮಧ್ಯಪ್ರವೇಶಿಸಿ ಬಿಲ್ ಕೊಡುವಂತೆ ಬುದ್ಧಿ ಮಾತು ಹೇಳಿದ್ದನು.

ನಂತರ ಪ್ರಕಾಶ್ ಬಾರ್​ನಿಂದ ಆಚೆ ಬಂದಿದ್ದಾನೆ. ಈ ವೇಳೆ ಮಂಜುನಾಥ್ ಮತ್ತು ಮತ್ತೊರ್ವ ಚಾಕುವಿನಿಂದ ಹೊಟ್ಟೆಗೆ ಇರಿದು ಪರಾರಿಯಾಗಿದ್ದರು. ಸದ್ಯ ಇಂದಿರಾನಗರ ಪೊಲೀಸರು ಆರೋಪಿ ಮಂಜುನಾಥ್​ನನ್ನು ಬಂಧಿಸಿದ್ದಾರೆ. ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 9:16 pm, Wed, 3 August 22

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ