AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಧ ದಿನ ಕಳೆದರೂ 40 ರೂ ಬಾಡಿಗೆ ಬಂದಿಲ್ಲ- ಉಚಿತ ಭಾಗ್ಯದ ವಿರುದ್ಧ ಆಟೋ ಚಾಲಕನ ಗೋಳಾಟ, ವಿಡಿಯೋ ಟ್ವಿಟರ್‌ನಲ್ಲಿ ಚರ್ಚೆ

5 ಗಂಟೆ ಓಡಿಸಿದರೂ 40 ರೂ ಅಷ್ಟೇ ಆಟೋ ಬಾಡಿಗೆ ಹಣ ಬಂದಿರುವುದು. ಇಂತಹ ದುರ್ಭರ ಪರಿಸ್ಥಿತಿಯಲ್ಲಿ ಜೀವನದ ದಿಕ್ಕುಗಾಣದೆ ಅಳುತ್ತಾ ಮನೆಯತ್ತ ಗಾಡಿ ತಿರುಗಿಸಿದ ಬೆಂಗಳೂರು ಆಟೋ ಚಾಲಕ ಗೋಳಾಡುತ್ತಿರುವ ವಿಡಿಯೋ ಟ್ವಿಟರ್‌ನಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಅರ್ಧ ದಿನ ಕಳೆದರೂ 40 ರೂ ಬಾಡಿಗೆ ಬಂದಿಲ್ಲ- ಉಚಿತ ಭಾಗ್ಯದ ವಿರುದ್ಧ ಆಟೋ ಚಾಲಕನ ಗೋಳಾಟ, ವಿಡಿಯೋ ಟ್ವಿಟರ್‌ನಲ್ಲಿ ಚರ್ಚೆ
ದಿನಕ್ಕೆ 200 ರೂ ರೆಂಟ್​​ ಕಟ್ಟಬೇಕು ಆಟೋಗೆ, ಆದರೆ ಅರ್ಧ ದಿನ ಕಳೆದರೂ 40 ರೂಪಾಯಿ ಆಗಿಲ್ಲ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jun 28, 2023 | 3:13 PM

Share

5 ಗಂಟೆ ಓಡಿಸಿದರೂ 40 ರೂ ಅಷ್ಟೇ ಆಟೋ (Auto) ಬಾಡಿಗೆ ಹಣ ಬಂದಿರುವುದು. ಇಂತಹ ದುರ್ಭರ ಪರಿಸ್ಥಿತಿಯಲ್ಲಿ ಜೀವನದ ದಿಕ್ಕುಗಾಣದೆ ಅಳುತ್ತಾ ಮನೆಯತ್ತ ಗಾಡಿ ತಿರುಗಿಸಿದ ಬೆಂಗಳೂರು ಆಟೋ ಚಾಲಕ ಗೋಳಾಡುತ್ತಿರುವ (Crying) ವಿಡಿಯೋ ಟ್ವಿಟರ್‌ನಲ್ಲಿ (Viral Video) ಚರ್ಚೆಗೆ ಗ್ರಾಸವಾಗಿದೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಬೆಂಗಳೂರಿನ (Bengaluru) ಆಟೋ ಚಾಲಕನೊಬ್ಬ ಕಾಣಿಸಿಕೊಂಡಿದ್ದಾನೆ. ಇತ್ತೀಚಿನ ದಿನಗಳಲ್ಲಿ ಆಟೋ ಬಾಡಿಗೆ ಬಿದ್ದುಹೋಗಿದ್ದು, ಅತ್ಯಂತ ಕಡಿಮೆ ಬಾಡಿಗೆ ಬರುವುದರಿಂದ ಚಾಲಕ ಕಣ್ಣೀರು ಹಾಕುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ನೂತನ ಸರ್ಕಾರದ ಉಚಿತ ಖಚಿತ ಭಾಗ್ಯಗಳ ಹಿನ್ನೆಲೆಯಲ್ಲಿ ನಿಸ್ಸಹಾಯಕ ಸ್ಥಿತಿಗೆ ತಲುಪಿರುವ ಸದರಿ ಆಟೋ ಚಾಲಕ ತನ್ನೆಲ್ಲಾ ಪಡಿಪಾಟಲನ್ನು ಕ್ಯಾಮರಾ ಎದುರು ಕನ್ನಡದಲ್ಲಿ ವಿವರಿಸಿದ್ದಾನೆ. ವೀಡಿಯೋ ಅಪ್ಲೋಡ್ ಆದ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಇದು ತೀವ್ರ ಚರ್ಚೆಗೆ ಗುರಿಯಾಗಿದೆ. ಕೆಲವರು ಚಾಲಕನ ದುಃಸ್ಥಿತಿಗೆ ಮರುಗಿ, ಆತನಿಗೆ ಹಣ ಕೊಡಲು ಮುಂದಾಗಿದ್ದಾರೆ. ಇನ್ನು ಕೆಲವರು ಆತನಿಗೆ ಬಹಿರಂಗ ಬೆಂಬಲ ನೀಡುತ್ತಿರುವುದನ್ನು ಕಾಣಬಹುದು.

ಡ್ರೈವರ್ ತಾನು ಐದು ಗಂಟೆ ಕಾಲ ಆಟೋ ಬಾಡಿಗೆಗೆ ನಿಂತಿದ್ದರೂ, ತಾನು ಗಳಿಸಿದ ನಗಣ್ಯ ಹಣ ತೋರಿಸುವುದನ್ನು ವಿಡಿಯೋದಲ್ಲಿ ಕಾಣಬಹುದು. ಮಾಹಿತಿಯ ಪ್ರಕಾರ ಆತ ಬೆಳಿಗ್ಗೆ 8 ರಿಂದ ಮಧ್ಯಾಹ್ನ 1 ರವರೆಗೆ ಆಟೋ ಓಡಿಸಿದರೂ ಕೇವಲ 40 ರೂ. ಗಳಿಸಿದ್ದಾನೆ. ಇಲ್ಲಿ, ವೀಡಿಯೊವನ್ನು ನೀವೂ ನೋಡಬಹುದು:

“ನಾನು ಇದಕ್ಕೆ ವಿಭಿನ್ನ ಪ್ರತಿಕ್ರಿಯೆ ಹೊಂದಿದ್ದೇನೆ! ಆಟೋ ಚಾಲಕರು ತಮಗಿಷ್ಟ ಬಂದಂತೆ ಶುಲ್ಕ ವಿಧಿಸುತ್ತಾರೆ. ಎಂದಿಗೂ ಮೀಟರ್ ನೋಡಿ ಓಡಿಸೋ ಮಾತೇ ಇಲ್ಲ. ಕೆಲವು ಒಳ್ಳೆಯವರೂ ಇದ್ದಾರೆ. ಯಾರು ಮೀಟರ್ ಹಾಕಿ ಆಟೋದಲ್ಲಿ ಓಡಾಡುತ್ತಾರೋ ಅವರು ಉತ್ತಮರು. ಆದರೆ ಅವರಲ್ಲಿ ಹೆಚ್ಚಿನವರು ಹಾಗೆ ಮಾಡುವುದಿಲ್ಲ ಎಂದು ಟ್ವಿಟರ್ ಬಳಕೆದಾರರು ಬೇಸರಿಂದಲೇ ಬರೆದಿದ್ದಾರೆ.

ಮತ್ತೊಬ್ಬರು ನಾನು ನನ್ನ ಮನೆಯಿಂದ 2 ಕಿಮೀ ದೂರದಲ್ಲಿರುವ ಮೆಟ್ರೋ ನಿಲ್ದಾಣಕ್ಕೆ ಹೋಗುತ್ತೇನೆ. ನಾನು ಇಳಿಯುವಾಗ, ಈ ವ್ಯಕ್ತಿಗಳು (ಆಟೋ ಚಾಲಕರು) ನನ್ನನ್ನು ಸುತ್ತುವರೆದು 150 ರೂ ಕೇಳುತ್ತಾರೆ. ಅದು ಬೇಡವೆಂದು ನಾನು ನಡೆಯಲು ನಿರ್ಧರಿಸಿದಾಗ, ಅವರು ನನ್ನನ್ನು ಕನ್ನಡದಲ್ಲಿ ಶಪಿಸುತ್ತಾರೆ. ಅದು ನನಗೆ ಅರ್ಥವಾಗುವುದಿಲ್ಲ ಎಂಬುದು ಅವರ ಭಾವನೆಯಾಗಿದೆ. ಅದಕ್ಕೆ ಅವರ ಬಗ್ಗೆ ನನಗೆ ಶೂನ್ಯ ಸಹಾನುಭೂತಿಯಿದೆ. ಅದರ ಬದಲು ಬಸ್ ಪ್ರಯಾಣವನ್ನು ನಾನು ಪ್ರೀತಿಸುತ್ತೇನೆ ಎಂದಿದ್ದಾರೆ.

“ಇತ್ತೀಚೆಗೆ ಬೆಂಗಳೂರಿನಲ್ಲಿ ಸುಮಾರು 2 ಕಿಲೋ ಮೀಟರ್ ಆಟೋ ಸಂಚಾರ ಮಾಡಬೇಕಾಗಿತ್ತು. ಆಟೋರಿಕ್ಷಾ ಚಾಲಕರು ಹಗಲು ಹೊತ್ತಿನಲ್ಲಿಯೇ 150 ರೂ ಕೇಳುತ್ತಾರೆ! ಫ್ರೀ ಬಸ್​​ ಶಕ್ತಿ ಯೋಜನೆ ಅವರನ್ನು ನೋಯಿಸುತ್ತಿಲ್ಲ. ಆದರೆ ಅವರ ವರ್ತನೆ, ಒಣ ಅಹಂಕಾರ ಅವರನ್ನು ಬಾಧಿಸುತ್ತಿರುವುದು! ಇನ್ನು, ನಿಮ್ಮ ಗಮ್ಯದ ಸ್ಥಳಕ್ಕೆ ಬರಲು ಅವರನ್ನು ನೀವು ಬೇಡಿಕೊಳ್ಳಬೇಕಾದ ದುರವಸ್ಥೆಯೂ ಇದೆ. ಇದು ಕರ್ನಾಟಕ ರಿಯಾಲಿಟಿ!” ಎಂದು ಇನ್ನೊಬ್ಬ ಟ್ವಿಟರ್ ಬಳಕೆದಾರರು ಉಲ್ಲೇಖಿಸಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು