AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಯಾಮರಣ ಕೋರಿ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಆಟೋ ಚಾಲಕ ಪತ್ರ, ಕಾರಣ ಏನು?

ಆಟೋ ಚಾಲಕ ಹರ್ಷ ಎಂಬುವವರು ಪೊಲೀಸರ ಕೃತ್ಯಕ್ಕೆ ಬೇಸತ್ತು ಟ್ವಿಟರ್​ನಲ್ಲಿ ನಗರ ಪೊಲೀಸ್ ಆಯುಕ್ತರಿಗೆ ದಯಾಮರಣ ಕೋರಿ ಪತ್ರ ಬರೆದಿದ್ದಾರೆ.

ದಯಾಮರಣ ಕೋರಿ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಆಟೋ ಚಾಲಕ ಪತ್ರ, ಕಾರಣ ಏನು?
ದಯಾಮರಣ ಕೋರಿ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಆಟೋ ಚಾಲಕ ಪತ್ರ
Follow us
ಆಯೇಷಾ ಬಾನು
|

Updated on: May 25, 2023 | 11:06 AM

ಬೆಂಗಳೂರು: ಆಟೋ ಚಾಲಕ ದಯಾಮರಣ(Euthanasia) ಕೋರಿ ಬೆಂಗಳೂರು ಪೊಲೀಸ್ ಆಯುಕ್ತರಿಗೆ(Bengaluru Police Commissioner) ಪತ್ರ ಬರೆದಿರುವ ಘಟನೆ ಸಂಭವಿಸಿದೆ. ಪೊಲೀಸರು ನನ್ನ ಮೇಲೆ ಸುಳ್ಳು ಕೇಸ್ ದಾಖಲಿಸಿ ಸೂಕ್ತವಾಗಿ ತನಿಖೆ ಮಾಡದೇ ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ. ನನ್ನ ಮೇಲೆ ಮಾಡಿರುವ ಆರೋಪ ಸುಳ್ಳು ಎಂಬುವುದಕ್ಕೆ ಸಾಕ್ಷಿ ಇದೆ. ನನ್ನ ಮೇಲಿನ ದೂರಿಗೆ ಮರು ತನಿಖೆ ಮಾಡಲು ಆದೇಶ ಮಾಡಿ, ಇಲ್ಲವಾದ್ರೆ ದಯಾಮರಣ ನೀಡುವಂತೆ ಪೊಲೀಸ್ ಆಯುಕ್ತರಿಗೆ ಆಟೋ ಚಾಲಕ ಪತ್ರ ಬರೆದಿದ್ದಾರೆ.

ಆಟೋ ಚಾಲಕ ಹರ್ಷ ಎಂಬುವವರು ಪೊಲೀಸರ ಕೃತ್ಯಕ್ಕೆ ಬೇಸತ್ತು ಟ್ವಿಟರ್​ನಲ್ಲಿ ನಗರ ಪೊಲೀಸ್ ಆಯುಕ್ತರಿಗೆ ದಯಾಮರಣ ಕೋರಿ ಪತ್ರ ಬರೆದಿದ್ದಾರೆ. ಕಳೆದ ವರ್ಷ ಬಸವನಗುಡಿ ಮಹಿಳಾ ಠಾಣೆಯಲ್ಲಿ ಹರ್ಷ ಅವರ ಪತ್ನಿ ದೂರು ದಾಖಲಿಸಿದ್ದರು. ವರದಕ್ಷಿಣೆ ಕಿರುಕುಳ ಕೇಸ್​ನಡಿ ಹರ್ಷ ಹಾಗೂ ತಾಯಿಯ ವಿರುದ್ಧ ದೂರು ನೀಡಿದ್ದರು. ಮಹಿಳಾ ಠಾಣೆ ಇನ್ಸ್​ಪೆಕ್ಟರ್, ಸಿಬ್ಬಂದಿ ಸರಿಯಾಗಿ ತನಿಖೆ ಕೈಗೊಂಡಿಲ್ಲ. ಬಡ್ಡಿಗೆ ಸಾಲ ಪಡೆದು ಪೊಲೀಸ್ ಕಚೇರಿಗೆ ಅಲೆದಾಡ್ತಿದ್ದೇವೆ. ಸೂಕ್ತವಾಗಿ ತನಿಖೆ ಮಾಡದೇ ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ. ನನ್ನ ಮೇಲೆ ಮಾಡಿರುವ ಆರೋಪ ಸುಳ್ಳು ಎಂಬುವುದಕ್ಕೆ ಸಾಕ್ಷಿ ಇದೆ. ನನ್ನ ಮೇಲಿನ ದೂರಿಗೆ ಮರು ತನಿಖೆ ಮಾಡಲು ಆದೇಶ ಮಾಡಿ, ಇಲ್ಲದಿದ್ರೆ ದಯಾಮರಣ ನೀಡಿ ಎಂದು ಪೊಲೀಸ್ ಆಯುಕ್ತರಿಗೆ ಆಟೋ ಚಾಲಕ ಹರ್ಷ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ಯಾರೋ ಮಾಡಿದ ತಪ್ಪಿಗೆ ನಮಗ್ಯಾಕೆ ಶಿಕ್ಷೆ, ಆದೇಶ ಪತ್ರ ನೀಡಿ, ಇಲ್ಲ ದಯಾಮರಣಕ್ಕೆ ಅನುಮತಿ ಕೊಡಿ ಎಂದ KPSC ಅಭ್ಯರ್ಥಿಗಳು

ದಯಾ ಮರಣ ಎಂದರೇನು?

ಘೋರ ನೋವಿನಿಂದ ನರಳುತ್ತಿರುವ ವ್ಯಕ್ತಿಯ ಇಚ್ಛೆಯ ಅನುಸಾರ ನೀಡಲಾಗುವ ‘ಸಾವು’. ಅಂದರೆ, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ವ್ಯಕ್ತಿ ಇನ್ನು ಸಹಿಸಿಕೊಳ್ಳುವುದು ಸಾಧ್ಯವೇ ಇಲ್ಲ ಎಂಬ ಸಂದರ್ಭದಲ್ಲಿ ತನಗೆ ಮರಣದ ದಯೆಯನ್ನು ನೀಡಿ ಎಂದು ಅರ್ಜಿ ಸಲ್ಲಿಸುತ್ತಾರೆ. ಕಾನೂನಿನ ಅಡಿಯಲ್ಲಿಯೇ ಅವರಿಗೆ ಸಾವನ್ನು ‘ಕರುಣಿಸಲಾಗುತ್ತದೆ’. ಆದರೆ, ಭಾರತ ಸಹಿತ ಹಲವು ದೇಶಗಳಲ್ಲಿ ಇದಕ್ಕೆ ಅವಕಾಶ ಇಲ್ಲ. ಇದಕ್ಕೆ ಯುಥೆನೇಸಿಯಾ ಎಂಬ ಗ್ರೀಕ್ ಪದವನ್ನು ಸಾಮಾನ್ಯವಾಗಿ ಬಳಸುತ್ತಾರೆ. ಇದರ ಅರ್ಥ ಒಳ್ಳೆಯ ಸಾವು ಎಂದು.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು